Webdunia - Bharat's app for daily news and videos

Install App

ಭಾರತ ಸುಧಾರಣೆ ಆಗುತ್ತಿದ್ದರೆ ಜಗತ್ತೇ ಪರಿವರ್ತನೆ ಆಗುತ್ತಿರುತ್ತದೆ: ಮೋದಿ

Webdunia
ಭಾನುವಾರ, 26 ಸೆಪ್ಟಂಬರ್ 2021 (10:30 IST)
ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿ (ಯುಎನ್ಜಿಎ) 76ನೇ ಅಧಿವೇಶನವನ್ನು ಉದ್ದೇಶಿಸಿ ಆಡಿದ ಮಾತು ಇದೀಗ ಭಾರಿ ಗಮನ ಸೆಳೆಯುತ್ತಿದ್ದು, ಭಾರತ ವಿಶ್ವಗುರು ಎಂಬುದನ್ನು ಅವರು ಪರೋಕ್ಷವಾಗಿ ಹೇಳಿದ್ದಾರೆ.

ಭಾರತ ಪ್ರಜಾಪ್ರಭುತ್ವದ ತಾಯಿ ಎನ್ನುವ ಮೂಲಕ ಇಲ್ಲಿನ ವ್ಯವಸ್ಥೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಣ್ಣಿಸಿರುವ ಪ್ರಧಾನಿ ಮೋದಿ, ಭಾರತ ಸುಧಾರಣೆ ಆಗುತ್ತಿದ್ದರೆ, ಜಗತ್ತೇ ಪರಿವರ್ತನೆ ಆಗುತ್ತಿರುತ್ತದೆ ಎಂಬ ವಿಶ್ವಾಸದ ನುಡಿಗಳನ್ನೂ ಹೊರಹೊಮ್ಮಿಸಿದ್ದಾರೆ.
ಜೋ ಬೈಡೆನ್ ಜೊತೆ ವಾಷಿಂಗ್ಟನ್ನಲ್ಲಿ ದ್ವಿಪಕ್ಷೀಯ ಸಭೆಯನ್ನು ನಡೆಸಿ ನ್ಯೂಯಾರ್ಕ್ಗೆ ಬಂದಿಳಿದ ಮೋದಿ, ಭಾರತದ ಪ್ರಜಾಪ್ರಭುತ್ವ ಯಾಕೆ ವಿಶೇಷ ಎಂಬುದನ್ನೂ ವಿವರಿಸಿದರು. ಹಲವು ಭಾಷೆ, ಬಹಳ ಆಡುಭಾಷೆ, ವಿವಿಧ ಜೀವನಶೈಲಿ ಜೊತೆಗೆ ಆಹಾರ ಪದ್ಧತಿಯನ್ನೂ ಹೊಂದಿರುವುದೇ ಒಂದು ಸ್ಪಂದನಾಶೀಲ ಪ್ರಜಾಪ್ರಭುತ್ವದ ಪ್ರತೀಕ ಎಂದರು.
ಜಗತ್ತಿನ ಪ್ರತಿ 6 ಜನರಿಗೆ ಒಬ್ಬರಂತೆ ಭಾರತೀಯರಿದ್ದಾರೆ. ಹೀಗಾಗಿ ಭಾರತೀಯರ ಬೆಳವಣಿಗೆ ಜಾಗತಿಕ ಬೆಳವಣಿಗೆಗೂ ಕಾರಣವಾಗುತ್ತದೆ. ಭಾರತ ಬೆಳೆದಾಗ ವಿಶ್ವವೂ ಬೆಳೆಯುತ್ತದೆ, ಭಾರತ ಸುಧಾರಣೆಯಾದಾಗ ಪ್ರಪಂಚವೂ ಪರಿವರ್ತನೆ ಆಗುತ್ತದೆ ಎಂಬುದಾಗಿ ಮೋದಿ ಹೇಳಿದರು.
ಜಗತ್ತಿನ ಮೊದಲ ಡಿಎನ್ಎ ವ್ಯಾಕ್ಸಿನ್ ಕೂಡ ಭಾರತದಿಂದಲೇ ಅಭಿವೃದ್ಧಿ ಪಡಿಸಲಾಗಿದೆ ಎಂಬುದನ್ನೂ ಅವರು ಯುಎನ್ಜಿಎ ಗಮನಕ್ಕೆ ತಂದರು. ಇದು 12 ವರ್ಷ ಮೇಲ್ಪಟ್ಟ ಯಾರಿಗಾದರೂ ಕೊಡಬಹುದಾಗಿದ್ದು, ಎಮ್ಆರ್ಎನ್ಎ ವ್ಯಾಕ್ಸಿನ್ ಅಭಿವೃದ್ಧಿ ಪಡಿಸುವಿಕೆ ಅಂತಿಮ ಹಂತದಲ್ಲಿದೆ ಎಂಬುದನ್ನೂ ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪ್ತಾಪ್ತೆ ಮೇಲೆ ನಿರಂತರ ರೇಪ್ ಮಾಡಿ, ಗರ್ಭಪಾತ: ಪುತ್ತೂರಿನ 7 ವರ್ಷಗಳ ಹಿಂದಿನ ಪ್ರಕರಣಕ್ಕೆ ತೀರ್ಪು ಪ್ರಕಟ

ಮತಗಳ್ಳತನ: ರಾಹುಲ್ ನೇತೃತ್ವದಲ್ಲಿ ಆ.5 ರಂದು ಪ್ರತಿಭಟನೆ, ಡಿಕೆ ಶಿವಕುಮಾರ್

ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆತಾಗಿ ನಟಿ ಖುಷ್ಬು ಸುಂದರ್‌ ಜವಾಬ್ದಾರಿ

ಆರಾಮಾಗಿ ನಡೆದುಕೊಂಡು ಹೋಗುತ್ತಿರುವಾಗಲೇ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಸೂಸೈಡ್‌, ಭಯಾನಕ ವಿಡಿಯೋ

ಅಕ್ಟೋಬರ್‌ನಲ್ಲಿ ಸಿಎಂ ಬದಲಾವಣೆ ಪಕ್ಕಾ, ಖರ್ಗೆ ಸರಿಯಾದ ಸಮಯಕ್ಕೆ ಕಲ್ಲು ಹೊಡೆದಿದ್ದಾರೆ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments