ದೇಶಾದ್ಯಂತ ಕುತೂಹಲ ಕೆರಳಿಸಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಒಂದು ವೇಳೆ ಮಾಯಾವತಿ (ಬಿಎಸ್ಪಿ ಮುಖ್ಯಸ್ಥೆ) ಕಣಕ್ಕಿಳಿದರೆ ಅವರ ವಿರುದ್ಧ ನಟಿ ರಾಖಿ ಸಾವಂತ್ ಅವರನ್ನು ಕಣಕ್ಕಿಳಿಸುವುದಾಗಿ ಕೇಂದ್ರ ಸಚಿವ ಹಾಗೂ ರಿಪಬ್ಲಿಕನ್ ಪಾರ್ಟಿ ಆಪ್ ಇಂಡಿಯಾ ಪಕ್ಷದ ವರಿಷ್ಠ ರಾಮದಾಸ್ ಅಠವಳೆ ಹೇಳಿದ್ದಾರೆ.
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡು ಕಣಕ್ಕಿಳಿಯಲಿದೆ ಎಂದಿದ್ದಾರೆ ಅಠವಳೆ.
ಅಲಹಾಬಾದ್ನಲ್ಲಿ ಮಾಧ್ಯಮದವರೊಂದಿಗೆ ಮಾತನ್ನಾಡುತ್ತಿದ್ದ ಅವರು, ಕೆಲ ಸಮಯದಿಂದ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಮಾಯಾವತಿ ನಾಚಿಕೆ ಪಟ್ಟುಕೊಳ್ಳುತ್ತಿದ್ದಾರೆ. ಈ ಬಾರಿಯಾದರೂ ಅವರು ಕಣಕ್ಕಿಳಿಯುವ ಮನಸ್ಸು ಮಾಡುತ್ತಾರೋ ನೋಡಬೇಕು. ಹಾಗೆ ಆದಲ್ಲಿ ನಾವು ನಮ್ಮ ಮಹಿಳಾ ಘಟಕದ ಅಧ್ಯಕ್ಷೆಯಾದ ರಾಖಿ ಸಾವಂತ್ ಅವರನ್ನು ಕಣಕ್ಕಿಳಿಸುತ್ತೇವೆ.
ತಾವು ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಯ ಅವಿಭಾಜ್ಯ ಭಾಗವಾಗಿದ್ದು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಒಟ್ಟಿಗೆ ಕಣಕ್ಕಿಳಿಯಲಿದ್ದೇವೆ ಎಂದಿದ್ದಾರೆ ಅವರು.
ಒಂದು ವೇಳೆ ಮೈತ್ರಿಯಾಗದೆ ಇದ್ದರೆ ನಾವು ಒಟ್ಟು 403 ವಿಧಾನಸಭಾ ಕ್ಷೇತ್ರಗಳಲ್ಲಿ 200ರಲ್ಲಿ ಕಣಕ್ಕಿಳಿಯಲಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ