Webdunia - Bharat's app for daily news and videos

Install App

ಸುಗ್ರೀವಾಜ್ಞೆ ಹರಿದು ಎಸೆಯದೇ ಇದ್ದಿದ್ದರೆ ರಾಹುಲ್ ಅನರ್ಹರಾಗುತ್ತಿರಲಿಲ್ಲ!

Webdunia
ಶನಿವಾರ, 25 ಮಾರ್ಚ್ 2023 (12:05 IST)
ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಜೈಲು ಶಿಕ್ಷೆಯಾಗಿ ಸಂಸದ ಸ್ಥಾನದಿಂದ ಅನರ್ಹವಾಗುತ್ತಿದ್ದಂತೆ 2013ರಲ್ಲಿ ಯುಪಿಎ ಸರ್ಕಾರ ಹೊರಡಿಸಿದ ಸುಗ್ರೀವಾಜ್ಞೆ ವಿಚಾರ ಈಗ ಚರ್ಚೆ ಆಗುತ್ತಿದೆ.
 
ಈ ಚರ್ಚೆಯಾಗಲು ಕಾರಣ 2013ರಲ್ಲಿ ನಡೆದ ಘಟನೆ. ಅಂದು ಸುಗ್ರೀವಾಜ್ಞೆಯನ್ನು ಹರಿದು ಎಸೆಯದೇ ಇದ್ದಿದ್ದರೆ ರಾಹುಲ್ ಗಾಂಧಿ ಅನರ್ಹರಾಗುತ್ತಿರಲಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಕಳಂಕಿತ ಸಂಸದರು ಮತ್ತು ಶಾಸಕರ ಸದಸ್ಯತ್ವ ಅನರ್ಹಗೊಳಿಸುವ ಸಂಬಂಧವಾಗಿ ಸುಪ್ರೀಂ ಕೋರ್ಟ್ ಪ್ರಕಟಿಸಿದ ತೀರ್ಪು ರಾಜಕೀಯ ಪಕ್ಷಗಳಿಗೆ ಸಂಕಷ್ಟ ತಂದಿಟ್ಟಿತ್ತು. ಈ ತೀರ್ಪನ್ನು ಜಾರಿಗೊಳಿಸದೇ ಇರಲು ಪ್ರಜಾಪ್ರತಿನಿಧಿ ಕಾಯ್ದೆಗೆ ತಿದ್ದುಪಡಿ ತರಬೇಕೆಂದು ಯುಪಿಎ ಬೆಂಬಲಿತ ಪಕ್ಷಗಳಿಂದಲೇ ವಿಪರೀತ ಒತ್ತಡ ಬಂದಿತ್ತು.

ಈ ಒತ್ತಡಕ್ಕೆ ಮಣಿದ ಪ್ರಧಾನಿ ಮನಮೋಹನ್ಸಿಂಗ್ ನೇತೃತ್ವದ ಸರ್ಕಾರ ಸುಗ್ರೀವಾಜ್ಞೆ ಹೊರಡಿಸುವ ಮೂಲಕ ಯಾವುದೇ ಜನಪ್ರತಿನಿಧಿಗೆ ಶಿಕ್ಷೆಯಾದರೆ ಅವರು ಅದರ ವಿರುದ್ಧ ಮೇಲ್ಮನವಿ ಸಲ್ಲಿಸಲು 90 ದಿನಗಳ ಅವಕಾಶ ಕಲ್ಪಿಸಿತ್ತು.  

ಸುಗ್ರೀವಾಜ್ಞೆ ಹೊರಡಿಸುತ್ತಿದ್ದಂತೆ ಕಳಂಕಿತ ಸಂಸದರ ರಕ್ಷಣೆಗೆ ಸರ್ಕಾರ ಮುಂದಾಗಿದೆ ಎಂಬ ಟೀಕೆ ವ್ಯಕ್ತವಾಯಿತು. ಸರ್ಕಾರದ ಆತುರದ ಕ್ರಮವನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪ್ರಶ್ನಿಸಿದರು. ದೇಶದೆಲ್ಲೆಡೆ ಭಾರೀ ಚರ್ಚೆ ಆಗುತ್ತಿದ್ದಂತೆ ರಾಹುಲ್ ಗಾಂಧಿ ಮಧ್ಯ ಪ್ರವೇಶ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments