ಬ್ಯಾಂಕಿನ ವ್ಯವಹಾರವಿದ್ದರೇ ಬೇಗ ಮುಗಿಸಿಕೊಳ್ಳಿ ಯಾಕೆಂದ್ರೆ ಈ ಎರಡು ದಿನ ಬ್ಯಾಂಕ್ ವ್ಯವಹಾರ ಬಂದ್

Webdunia
ಬುಧವಾರ, 29 ಆಗಸ್ಟ್ 2018 (12:07 IST)
ನವದೆಹಲಿ : ರಿಸರ್ವ್ ಬ್ಯಾಂಕ್‌ನ ಅಧಿಕಾರಿಗಳು ಹಾಗೂ ನೌಕರರ ಸಂಘಟನೆ ಫೋರಂ(ಯುಎಫ್‌ಆರ್‌ಬಿಒಇ) ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ  ಎರಡು ದಿನಗಳ ಸಾಮೂಹಿಕ ರಜೆ ಘೋಷಣೆ ಮಾಡಿದೆ.


ರಿಟೇನರ್‌ಗಳಿಗೆ ಸಿಪಿಎಫ್‌(ಕಾಂಟ್ರಿಬಿಟರಿ ಪಿಎಫ್‌) ಪೆನ್ಶನ್‌ ಯೋಜನೆ ಹಾಗೂ 2012ರಿಂದ ನೇಮಕಗೊಂಡಿರುವವರಿಗೆ ಹೆಚ್ಚುವರಿ ಪಿಎಫ್‌ ನೀಡಬೇಕು ಎಂಬುದು ಫೋರಂನ ಆಗ್ರಹವಾಗಿದೆ. ಈ ಬಗ್ಗೆಊರ್ಜಿತ್‌ ಪಟೇಲ್‌ ಅವರು 2017ರಲ್ಲಿ ಕೇಂದ್ರ ಸರ್ಕಾರಕ್ಕೆ ಪತ್ರವೊಂದನ್ನು ಬರೆದಿದ್ದರು. ಆದರೆ ಇದನ್ನು  ಕೇಂದ್ರ ಸರ್ಕಾರ ತಿರಸ್ಕರಿಸಿತ್ತು.


ಈ ಹಿನ್ನಲೆಯಲ್ಲಿ ಇದೀಗ ಈ ಬೇಡಿಕೆಗಳನ್ನು ಈಡೇರಿಸುವಂತೆ  ಫೋರಂ  ಸೆ.4 ಮತ್ತು 5ರಂದು ಎರಡು ದಿನಗಳ ಸಾಮೂಹಿಕ ರಜೆಗೆ ಕರೆ ನೀಡಿದೆ. ಇದರಲ್ಲಿ ಬ್ಯಾಂಕ್‌ನ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಲಿದ್ದು, ಇದರಿಂದ ಕೇಂದ್ರೀಯ ಬ್ಯಾಂಕ್‌ ಹಾಗೂ ದೇಶಾದ್ಯಂತ ಇರುವ, ಇದರ ಅಧೀನ ಬ್ಯಾಂಕ್‌ಗಳ ವ್ಯವಹಾರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂದು ಹೇಳಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೂರಜ್​ ರೇವಣ್ಣಗೆ ಮತ್ತೆ ಸಂಕಷ್ಟ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ಬಿ ರಿಪೋರ್ಟ್‌ ತಿರಸ್ಕರಿಸಿದ ಕೋರ್ಟ್‌

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಾಟಿ ಕೋಳಿ ತಿಂದ ಸಿದ್ದರಾಮಯ್ಯ ಎಂದ ಶಾಸಕ ಸುರೇಶ್ ಕುಮಾರ್: ರಾಜ್ಯಕ್ಕೆ ವೆಜ್ ಸಿಎಂ ಬೇಕಿತ್ತಾ ಎಂದ ನೆಟ್ಟಿಗರು

ಡಿಕೆ ಶಿವಕುಮಾರ್ ಜೊತೆ ಬ್ರೇಕ್ ಫಾಸ್ಟ್ ಬಳಿಕ ಫೈನಲ್ ನಿರ್ಧಾರ ಹೇಳಿದ ಸಿಎಂ ಸಿದ್ದರಾಮಯ್ಯ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ಮುಂದಿನ ಸುದ್ದಿ
Show comments