Webdunia - Bharat's app for daily news and videos

Install App

ಕ್ಷಮೆ ಕೇಳದಿದ್ದರೆ ಸಂಸತ್ತಿನಲ್ಲಿ ಮಾತನಾಡಲು ಬಿಡಲ್ಲ : ಬಿಜೆಪಿ

Webdunia
ಶುಕ್ರವಾರ, 17 ಮಾರ್ಚ್ 2023 (14:20 IST)
ನವದೆಹಲಿ : ಲಂಡನ್ನಲ್ಲಿ ಭಾರತೀಯ ಪ್ರಜಾಪ್ರಭುತ್ವದ ಕುರಿತು ಮಾಡಿರುವ ಭಾಷಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಕ್ಷಮೆಯಾಚಿಸುವವರೆಗೂ ಸದನದಲ್ಲಿ ಮಾತನಾಡಲು ಬಿಡದೇ ಇರಲು ಬಿಜೆಪಿ ಪಟ್ಟುಹಿಡಿದಿದೆ.
 
ಶುಕ್ರವಾರವೂ ಸಂಸತ್ತಿನಲ್ಲಿ ಹೈಡ್ರಾಮಾ ನಡೆದಿದ್ದು, ಎರಡನೇ ದಿನಕ್ಕೆ ಉಭಯ ಸದನಗಳನ್ನು ಮುಂದೂಡಲಾಯಿತು. ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಲ್ಲಿ ನೀಡಿದ ಹೇಳಿಕೆಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಕ್ಷಮೆಯಾಚಿಸಬೇಕು ಎಂದು ಬಿಜೆಪಿ  ಒತ್ತಾಯಿಸಿದರೆ, ವಿರೋಧ ಪಕ್ಷಗಳು ಅದಾನಿ- ಹಿಂಡೆನ್ಬರ್ಗ್ ವಿವಾದದ ಬಗ್ಗೆ ಜಂಟಿ ಸಂಸದೀಯ ಸಮಿತಿಯ ತನಿಖೆಗೆ ಒತ್ತಾಯಿಸಿದವು. ಭಾರೀ ಕೋಲಾಹಲ ನಡೆದ ಹಿನ್ನೆಲೆಯಲ್ಲಿ ಸದನವನ್ನು ಮುಂದೂಡಲಾಯಿತು.

ಸಂಸತ್ತಿನಲ್ಲಿ ಗೊಂದಲ ಹೆಚ್ಚಾಗುತ್ತಿದ್ದಂತೆ ವಿರೋಧ ಪಕ್ಷದ ನಾಯಕರ ಮೈಕ್ಗಳನ್ನು ಮ್ಯೂಟ್ ಮಾಡಲಾಗಿದೆ ಎಂಬ ರಾಹುಲ್ ಗಾಂಧಿ ಅವರ ಆರೋಪವನ್ನು ಪುನರಾವರ್ತಿಸಿದ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿತು. ಇತ್ತ ಬಿಜೆಪಿ ರಾಹುಲ್ ಗಾಂಧಿ ಅವರು ಕ್ಷಮೆ ಕೇಳಲೇ ಬೇಕು. ರಾಹುಲ್ ಗಾಂಧಿ ಅವರ ಭಾಷಣದ ಬಗ್ಗೆ ತನಿಖೆ ಮಾಡಲು ಸಂಸದೀಯ ಸಮಿತಿಯನ್ನು ರಚನೆ ಮಾಡಬೇಕು. ಒಂದು ವೇಳೆ ರಾಹುಲ್ ಗಾಂಧಿ ಸಂಸತ್ನಲ್ಲಿ ಕ್ಷಮೆ ಕೇಳದೇ ಇದ್ದರೆ, ಅವರ ಲೋಕಸಭೆ ಸದಸ್ಯತ್ವವನ್ನು ರದ್ದು ಮಾಡಬೇಕು ಎಂದು ಆಗ್ರಹಿಸಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಡುರಸ್ತೆಗೆ ನುಗ್ಗಿ ಕಬ್ಬಿಗಾಗಿ ಲಾರಿ ಮೇಲೆ ದಾಳಿ ಮಾಡಿದ ಒಂಟಿ ಸಲಗ

ಇಂಡಿಯಾ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ಅಮಿತ್ ಶಾ ಗಂಭೀರ ಆರೋಪ

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಪತ್ರ ವದಂತಿ: ಸಿಎಂ ರಿಯ್ಯಾಕ್ಷನ್ ಹೀಗಿತ್ತು

ಆನ್‌ಲೈನ್‌ ಬೆಟ್ಟಿಂಗ್, ಆಸ್ತಿ ಗಳಿಕೆ ಆರೋಪ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ವಶಕ್ಕೆ

ಮುಂಬೈನಿಂದ ಜೋಧಪುರಕ್ಕೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ರನ್‌ ವೇಯಲ್ಲೇ ನಿಲ್ಲಿಸಿದ್ಯಾಕೆ

ಮುಂದಿನ ಸುದ್ದಿ
Show comments