Webdunia - Bharat's app for daily news and videos

Install App

ತ್ರಿವಳಿ ತಲಾಕ್‌ ನಿಷೇಧಿಸುವುದಿದ್ರೆ ಸತಿ ಸಹಗಮನ ಪದ್ದತಿಯನ್ನು ಜಾರಿಗೊಳಿಸಿ: ಆಜಂಖಾನ್

Webdunia
ಬುಧವಾರ, 19 ಏಪ್ರಿಲ್ 2017 (13:20 IST)
ಕೆಟ್ಟ ಶರಿಯಾ ಸಂಪ್ರದಾಯಗಳಾದ ತ್ರಿವಳಿ ತಲಾಕ್, ನಿಖಾಹ್ ಮತ್ತು ಹಲಾಲಾ ನಿಷೇಧಿಸುವಂತೆ ಹೆಚ್ಚುತ್ತಿರುವ ಕೂಗಿನಿಂದಾಗಿ ಆಕ್ರೋಶಗೊಂಡ ಸಮಾಜವಾದಿ ಪಕ್ಷದ ಮುಖಂಡ ಆಜಂಖಾನ್, ಸತಿ ಸಹಗಮನ ಪದ್ದತಿಯನ್ನು ಮರುಸ್ಥಾಪಿಸುವಂತೆ ಒತ್ತಾಯಿಸಿದ್ದಾರೆ.
 
ತ್ರಿವಳಿ ತಲಾಕ್ ನಿಷೇಧಿಸುವ ಮುನ್ನ ಹಿಂದೂ ಸಂಪ್ರದಾಯದಲ್ಲಿದ್ದಂತೆ ಪತಿ ಸಾವನ್ನಪ್ಪಿದಲ್ಲಿ ವಿಧವೆ ಪತ್ನಿ ಚಿತೆಗೆ ಹೋಗಿ ಜೀವಂತ ದಹಿಸಿಕೊಳ್ಳುವಂತಹ ಸತಿ ಸಹಗಮನ ಪದ್ದತಿಯನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.  
 
ತ್ರಿವಳಿ ತಲಾಕ್‌ ನಿಷೇಧಿಸುವ ಕುರಿತಂತೆ ಬೆಂಬಲ ನೀಡಿರುವ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಸಮಾಜವಾದಿ ಪಕ್ಷದ ಮುಖಂಡ ಖಾನ್ ಸತಿಪದ್ದತಿ ಜಾರಿಗೊಳಿಸುವಂತೆ ಒತ್ತಾಯಿಸಿದ್ದಾರೆ.
 
ತ್ರಿವಳಿ ತಲಾಕ್‌ ಕುರಿತಂತೆ ಕಾನೂನು ಜಾರಿಗೊಳಿಸಲು ಯಾರು ತಡೆದಿದ್ದಾರೆ? ಹಿಂದೂ ಸಂಪ್ರದಾಯದಲ್ಲಿರುವ ಸತಿ ಪದ್ದತಿಯನ್ನು ಮುಸ್ಲಿಮರು ವಿರೋಧಿಸಿದ್ದಾರಾ? ಎಂದು ಪ್ರಶ್ನಿಸಿದ ಅವರು, ಮೊದಲು ಸತಿಪದ್ದತಿಯನ್ನು ಜಾರಿಗೊಳಿಸಲಿ ಎಂದು ಟಾಂಗ್ ನೀಡಿದ್ದಾರೆ. 
 
ತ್ರಿವಳಿ ತಲಾಕ್ ನಿಷೇಧ ಕುರಿತಂತೆ ಮೌನವಾಗಿರುವವರು ತ್ರಿವಳಿ ತಲಾಕ್ ಆಚರಿಸುವವರಂತೆಯೇ ಸಮಾನ ಅಪರಾಧಿಗಳು ಎಂದು ಸಿಎಂ ಆದಿತ್ಯನಾಥ್ ಗುಡುಗಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments