Select Your Language

Notifications

webdunia
webdunia
webdunia
webdunia

ತಮಿಳುನಾಡಿನಲ್ಲಿ ಅಕ್ರಮ ಮದ್ಯ ಸೇವನೆ ಪ್ರಕರಣ, ಮೃತರ ಸಂಖ್ಯೆ 47ಕ್ಕೆ ಏರಿಕೆ

ತಮಿಳುನಾಡಿನಲ್ಲಿ ಅಕ್ರಮ ಮದ್ಯ ಸೇವನೆ ಪ್ರಕರಣ, ಮೃತರ ಸಂಖ್ಯೆ 47ಕ್ಕೆ ಏರಿಕೆ

Sampriya

ಚೆನ್ನೈ , ಶುಕ್ರವಾರ, 21 ಜೂನ್ 2024 (14:56 IST)
ಚೆನ್ನೈ: ರಾಜ್ಯದ ಕಲ್ಲಕುರಿಚಿ ಜಿಲ್ಲೆಯಲ್ಲಿ ಅಕ್ರಮ ಮದ್ಯ ಸೇವಿನೆ ಪ್ರಕರಣದಲ್ಲಿ ಮೃತರ ಸಂಖ್ಯೆ 47ಕ್ಕೆ ಏರಿಕೆಯಾಗಿದೆ ಎಂದು ತಮಿಳುನಾಡು ವೈದ್ಯಕೀಯ ಶಿಕ್ಷಣ ನಿರ್ದೇಶಕ ಸಂಗುಮಣಿ ಶುಕ್ರವಾರ ತಿಳಿಸಿದ್ದಾರೆ.

ತಮಿಳುನಾಡು ವಿಧಾನಸಭೆಯ ಎರಡನೇ ದಿನದ ಅಧಿವೇಶನ ಶುಕ್ರವಾರ ಚೆನ್ನೈನಲ್ಲಿ ಗದ್ದಲದಿಂದ ಪ್ರಾರಂಭವಾಯಿತು. ಎಐಎಡಿಎಂಕೆ ಶಾಸಕರು ಕಪ್ಪು ಬಟ್ಟೆಗಳನ್ನು ಧರಿಸಿ ಸದನದೊಳಗೆ ಕಲಕುರಿಚಿಯಲ್ಲಿ ನಡೆದ ಹೂಚ್ ದುರಂತದ ಕುರಿತು ಘೋಷಣೆಗಳನ್ನುಕೂಗಿದರು.

47 ಮಂದಿ ಪ್ರಾಣ ಕಳೆದುಕೊಂಡಿರುವ ಕಳ್ಳಕುರಿಚಿ ಅಕ್ರಮ ಮದ್ಯ ದುರಂತದ ಕುರಿತು ಚರ್ಚೆಗೆ ಆಗ್ರಹಿಸಿ ಎಐಎಡಿಎಂಕೆ ಸದಸ್ಯರು ಘೋಷಣೆಗಳನ್ನು ಕೂಗುತ್ತಿದ್ದಂತೆ ಚೆನ್ನೈನಲ್ಲಿ ತಮಿಳುನಾಡು ವಿಧಾನಸಭೆಯ ಒಳಗೆ ಮತ್ತು ಹೊರಗೆ ಗೊಂದಲದ ವಾತಾವರಣ ಉಂಟಾಯಿತು.

ಕಲ್ಲಾಕುರಿಚಿಯಲ್ಲಿ ನಕಲಿ ಮದ್ಯ ಸೇವಿಸಿ ಮೃತಪಟ್ಟವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಮೂಲಕ ನಿನ್ನೆ ರಾಜ್ಯ ವಿಧಾನಸಭೆಯ ಅಧಿವೇಶನ ಕೊನೆಗೊಂಡಿತು.

ಜೂನ್ 29ರವರೆಗೆ ವಿಧಾನಸಭೆ ಅಧಿವೇಶನ ನಡೆಯಲಿದೆ. ಇಂದು ಮುಂಜಾನೆ, ಕಲ್ಲಕುರಿಚಿ ಅಕ್ರಮ ಮದ್ಯ ಪ್ರಕರಣದ ಮೂವರು ಆರೋಪಿಗಳನ್ನು 15 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದ್ದು, ಕೂಡಲೂರು ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯಲಾಗಿದೆ. ಕಲ್ಲಾಕುರಿಚಿ ಪೊಲೀಸರು ಆರೋಪಿಯನ್ನು ಜಿಲ್ಲಾ ಸಂಯೋಜಿತ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರೇಣುಕಾಸ್ವಾಮಿ ಘಟನೆ ಕಣ್ಣಾರೆ ಕಂಡವರ ಬಾಯಿ ಮುಚ್ಚಿಸಲು ದರ್ಶನ್ ಮಾಡಿದ ಸರ್ಕಸ್ ಅಷ್ಟಿಷ್ಟಲ್ಲ