ಅಕ್ರಮ ಹಣ ವರ್ಗಾವಣೆ : ಸತ್ಯೇಂದರ್ ಜೈನ್ ಜಾಮೀನು ಅರ್ಜಿ ವಜಾ

Webdunia
ಶುಕ್ರವಾರ, 7 ಏಪ್ರಿಲ್ 2023 (08:28 IST)
-                                                 























ನವದೆಹಲಿ : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಆಪ್ ಮಾಜಿ ಸಚಿವ ಸತ್ಯೇಂದರ್ ಜೈನ್ಗೆ ದೆಹಲಿ ಹೈಕೋರ್ಟ್ ಗುರುವಾರ ಜಾಮೀನು ನಿರಾಕರಿಸಿದೆ.
 
ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕನ ಜಾಮೀನು ಅರ್ಜಿಯನ್ನು ಹೈಕೋರ್ಟ್ ನ್ಯಾಯಾಧೀಶ ದಿನೇಶ್ ಕುಮಾರ್ ಶರ್ಮ ವಜಾಗೊಳಿಸಿದ್ದಾರೆ. ಇವರೊಂದಿಗೆ ಆರೋಪಿಗಳಾದ ವೈಭವ್ ಜೈನ್ ಮತ್ತು ಅಂಕುಶ್ ಜೈನ್ ಅವರಿಗೂ ಜಾಮೀನು ನಿರಾಕರಿಸಿದೆ.

ಈ ಮೂವರು ಆರೋಪಿಗಳು ನ್ಯಾಯಾಲಯ ವಿಧಿಸಿದ ಎರಡು ಷರತ್ತುಗಳನ್ನು ಪೂರೈಸುವಲ್ಲಿ ವಿಫಲರಾಗಿದ್ದಾರೆ. ಅವರು ಪ್ರಭಾವಿ ವ್ಯಕ್ತಿಯಾಗಿದ್ದು, ಜಾಮೀನು ನೀಡಿದರೆ ಸಾಕ್ಷ್ಯ ನಾಶಮಾಡಬಹುದು ಎಂದು ನ್ಯಾಯಾಲಯ ಹೇಳಿದೆ.

ನಾಲ್ಕು ಕಂಪನಿಗಳ ಮೂಲಕ ಅಕ್ರಮ ಹಣ ವರ್ಗಾವಣೆ ಮಾಡಿದ ಆರೋಪದಡಿ 2022ರ ಮೇ 30ರಂದು ಸತ್ಯೇಂದರ್ ಜೈನ್ ಅವರನ್ನು ಬಂಧಿಸಲಾಯಿತು. ಅದೇ ವರ್ಷ ನವೆಂಬರ್ 17ರಲ್ಲಿ ವಿಚಾರಣಾ ನ್ಯಾಯಾಲಯವು ಜಾಮೀನು ಅರ್ಜಿಯನ್ನು ವಜಾಗೊಳಿಸಿದ ಬಳಿಕ ಸತ್ಯೇಂದರ್ ಜೈನ್ ಹೈಕೋರ್ಟ್ ಮೊರೆ ಹೋಗಿದ್ದರು.

ಸಿಬಿಐ 2017ರ ಆಗಸ್ಟ್ನಲ್ಲಿ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಒಂದು ವರ್ಷದ ಬಳಿಕ ಸತ್ಯೇಂದರ್ ಜೈನ್, ಅವರ ಪತ್ನಿ ಮತ್ತು ಅವರ ನಾಲ್ವರು ಸಹಚರರ ವಿರುದ್ಧ ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಆರೋಪಪಟ್ಟಿ ಸಲ್ಲಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ, ರಾಹುಲ್ ಗಾಂಧಿಗೆ ಬಿಗ್ ರಿಲೀಫ್

ನಾನೇ ಸಿಎಂ, 2028 ಕ್ಕೂ ನಾವೇ ಅಧಿಕಾರಕ್ಕೆ ಬರೋದು: ಸದನದಲ್ಲಿ ಸಿದ್ದರಾಮಯ್ಯ ಮಹತ್ವದ ಘೋಷಣೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ತಂದೆ ಪ್ರೀತಿಗೆ ಧನ್ಯವಾದಗಳು: ಪ್ರಧಾನಿ ಮೋದಿ ಹುಟ್ಟುಹಬ್ಬದ ಸಂದೇಶಕ್ಕೆ ಕುಮಾರಸ್ವಾಮಿ ಭಾವುಕ

ಮುಂದಿನ ಸುದ್ದಿ
Show comments