Webdunia - Bharat's app for daily news and videos

Install App

ಶಸ್ತ್ರಾಸ್ತ್ರ, ಮದ್ದುಗುಂಡುಗಳ ಅಕ್ರಮ ಖರೀದಿ: ಲಾಲು ಪ್ರಸಾದ್ ವಿರುದ್ಧ ಬಂಧನ ವಾರಂಟ್‌

Sampriya
ಶನಿವಾರ, 6 ಏಪ್ರಿಲ್ 2024 (19:07 IST)
Photo Courtesy X
ನವದೆಹಲಿ:  ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಅಕ್ರಮವಾಗಿ ಖರೀದಿಸಿದ ಪ್ರಕರಣ ಸಂಬಂಧ ಬಿಹಾರದ ಮಾಜಿ ಮುಖ್ಯಮಂತ್ರಿ, ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್‌ ಯಾದವ್ (75) ವಿರುದ್ಧ ಬಂಧನ ವಾರಂಟ್ ಜಾರಿಯಾಗಿದೆ.

ಮಧ್ಯಪ್ರದೇಶದ ಗ್ವಾಲಿಯರ್‌ನ ವಿಶೇಷ ನ್ಯಾಯಾಲಯವು ಇಂದು (ಶನಿವಾರ) ಬಂಧನ ವಾರಂಟ್ ಹೊರಡಿಸಿದೆ.

ಪ್ರಕರಣ ಸಂಬಂಧ ವಿಚಾರಣೆಗೆ ಲಾಲು ಪ್ರಸಾದ್‌ ಯಾದವ್ ಸೇರಿದಂತೆ ಅವರ ಪರ ವಕೀಲರು ನ್ಯಾಯಾಲಯಕ್ಕೆ ಹಾಜರಾಗದ ಕಾರಣ ಬಂಧನ ವಾರಂಟ್ ಹೊರಡಿಸಲಾಗಿದೆ ಎಂದು ತಿಳಿದುಬಂದಿದೆ.


ಗ್ವಾಲಿಯರ್‌ನ ಜೆಎಂಎಫ್‌ಸಿ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾದ ಮಹೇಂದ್ರ ಸೈನಿ ಅವರು ಲಾಲು ಯಾದವ್ ವಿರುದ್ಧ ಬಂಧನ ವಾರಂಟ್ ಹೊರಡಿಸಿದ್ದಾರೆ ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅಭಿಷೇಕ್ ಮೆಹ್ರೋತ್ರಾ ತಿಳಿಸಿದ್ದಾರೆ.

1995-97ರಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಧಿಕೃತ ಡೀಲರ್‌ನಿಂದ ಶಸ್ತ್ರಾಸ್ತ್ರ ಹಾಗೂ ಮದ್ದು ಗುಂಡುಗಳನ್ನು ಖರೀದಿಸಿದ ಪ್ರಕರಣ ಇದಾಗಿದೆ.

ಈ ಪ್ರಕರಣದಲ್ಲಿ 23 ಆರೋಪಿಗಳಿದ್ದು, ಇಂದರ್‌ಗಂಜ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಇನ್ನೂ ಆರೋಪಿಗಳ ವಿರುದ್ಧ ಆರೋಪಪಟ್ಟಿ ಸಲ್ಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ, ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments