Webdunia - Bharat's app for daily news and videos

Install App

ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್‌ಗೆ ಕಲ್ಲಿನಿಂದ ಹೊಡೆಯುವಂತೆ ಫತ್ವಾ

Webdunia
ಮಂಗಳವಾರ, 13 ಡಿಸೆಂಬರ್ 2016 (16:32 IST)
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್‌‌ಗೆ ಕಲ್ಲುಗಲಿಂದ ಹೊಡೆದು ರಾಜ್ಯದಿಂದ ಹೊರಗಟ್ಟಬೇಕು ಎಂದು ಟಿಪ್ಪು ಸುಲ್ತಾನ್ ಮಸೀದಿಯ ಶಾಹಿ ಇಮಾಮ್ ಮೌಲಾನಾ ನೂರ್-ಉರ್-ರೆಹಮಾನ್ ಫತ್ವಾ ಹೊರಡಿಸಿದ್ದಾರೆ. 
 
ಗೌರವಾನ್ವಿತ ಹುದ್ದೆಯಲ್ಲಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ ಘೋಷ್‌ರನ್ನು ಕಲ್ಲಿನಿಂದ ಹೊಡೆಯುತ್ತಾ ರಾಜ್ಯದಿಂದ ಹೊರಗೆ ಕಳುಹಿಸಬೇಕು ಎಂದು ಮುಸ್ಲಿಂ ಮೌಲ್ವಿ ಮೌಲಾನಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ದೇಶದಲ್ಲಿ ಜಾತ್ಯಾತೀತ ನಾಯಕಿಯಾದ ಸಿಎಂ ಬ್ಯಾನರ್ಜಿ ವಿರುದ್ಧ ಅಂತಹ ಅಸಭ್ಯ ಭಾಷೆಗಳನ್ನು ಬಳಸಿರುವ ಬಿಜೆಪಿ ಮುಖಂಡ ಘೋಷ್, ಪಶ್ಚಿಮ ಬಂಗಾಳದಲ್ಲಿ ವಾಸಿಸಲು ಯೋಗ್ಯನಲ್ಲ. ಆತನನ್ನು ಕಲ್ಲಿನಿಂದ ಹೊಡೆದು ರಾಜ್ಯದಿಂದ ಹೊರಗೆ ತಳ್ಳಬೇಕು ಎಂದು ಕರೆ ನೀಡಿದ್ದಾರೆ. 
 
ಮೌಲ್ವಿ ಕರೆಗೆ ತಿರುಗೇಟು ನೀಡಿರುವ ಘೋಷ್, ಫತ್ವಾ ಹೊರಡಿಸಲು ಇದೇನು ಪಾಕಿಸ್ತಾನ ಅಥವಾ ಬಾಂಗ್ಲಾದೇಶವಲ್ಲ ಎಂದು ಕಿಡಿಕಾರಿದ್ದಾರೆ.
 
ಮುಸ್ಲಿಂ ಮೌಲ್ವಿ ಮೌಲಾನಾ ನೂರ್‌ ಬರ್ಕಾತಿ, ತೃಣಮೂಲ ಕಾಂಗ್ರೆಸ್ ಪಕ್ಷದ ವಿರುದ್ಧ ಫತ್ವಾ ಹೊರಡಿಸಲಿ. ಟಿಎಂಸಿ ಫತ್ವಾವನ್ನು ಪಾಲಿಸುತ್ತದೆಯೇ ಹೊರತು ಬಿಜೆಪಿಯಲ್ಲ. ಬರ್ಕಾತಿಗೆ ದೀರ್ಘಾವಧಿಯಲ್ಲಿ ಪಶ್ಚಿಮ ಬಂಗಾಳ ಮತ್ತು ಭಾರತದಲ್ಲಿರಲು ಬಯಸಿದಂತೆ ಕಾಣುತ್ತಿಲ್ಲ. ನನ್ನ ಪ್ರಕಾರ ಅವರು ಪಾಕಿಸ್ತಾನ ಅಥವಾ ಬಾಂಗ್ಲಾದೇಶಕ್ಕೆ ವಲಸೆ ಹೋಗುವ ಯೋಚನೆಯಲ್ಲಿರಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಪ್ಪಳ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕದಡಿದರೆ ರಾಜ್ಯ ಸರಕಾರವೇ ಹೊಣೆ: ವಿಜಯೇಂದ್ರ ಎಚ್ಚರಿಕೆ

ಬಿಜೆಪಿಯಲ್ಲಿ ಅಧಿಕಾರ ಪಡೆಯಬೇಕಾದ್ರೆ ರೌಡಿ, ಇಲ್ಲದಿದ್ರೆ ರೇಪಿಸ್ಟ್‌ ಆಗಿರಬೇಕು: ಹರಿಪ್ರಸಾದ್ ವ್ಯಂಗ್ಯ

ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ಭೇಟಿಯಾದ ಸಿಪಿ ರಾಧಾಕೃಷ್ಣನ್

ಅತ್ಯಾಚಾರ ಆರೋಪ: ಶಿವಸೇನಾ ಮಾಜಿ ಶಾಸಕನ ವಿರುದ್ಧ ಬೆಂಗಳೂರಿನ ಮಹಿಳೆ ದೂರು

ಬೀದಿ ನಾಯಿ ಪರ ಹೋರಾಟ ಮಾಡುವವರ ಈ ಸುದ್ದಿ ಓದಲೇ ಬೇಕು, ಇದ್ದ ಮನೆ ಮಗಳನ್ನೇ ಕಳೆದುಕೊಂಡ ಕುಟುಂಬ

ಮುಂದಿನ ಸುದ್ದಿ
Show comments