Webdunia - Bharat's app for daily news and videos

Install App

ಭಾರತದ ಆರ್ಥಿಕತೆ ಮೇಲೆ ಉಕ್ರೇನ್ ಪರಿಣಾಮ

Webdunia
ಗುರುವಾರ, 24 ಮಾರ್ಚ್ 2022 (11:01 IST)
ಕೋವಿಡ್ ಸೋಂಕಿನಂತಹ ತುರ್ತು ಪರಿಸ್ಥಿತಿ ನಡುವೆಯೂ ದೇಶದ ಅರ್ಥ ವ್ಯವಸ್ಥೆ ಸದೃಢವಾಗಿ ನಿಲ್ಲಲು ಪ್ರಧಾನಿ ನರೇಂದ್ರ ಮೋದಿ  ಅವರು ಆತ್ಮನಿರ್ಭರ ತತ್ವದಡಿ ಕೈಗೊಂಡ ಕ್ರಮಗಳೇ ಪ್ರಮುಖ ಕಾರಣ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರತಿಪಾದಿಸಿದ್ದಾರೆ.
 
ಆದರೆ, ಪ್ರಸಕ್ತ ನಡೆಯುತ್ತಿರುವ ಉಕ್ರೇನ್-ರಷ್ಯಾ ಯುದ್ಧದಿಂದ ಭಾರತದ ಆರ್ಥಿಕತೆ ಮೇಲೆ ಪರಿಣಾಮ ಬೀರಲಿದೆ ಎಂದೂ ಅವರು ಹೇಳಿದ್ದಾರೆ. ರಾಜ್ಯ ಬಿಜೆಪಿಯಿಂದ ನಗರದ ಖಾಸಗಿ ಹೋಟೆಲ್ನಲ್ಲಿ ಮಂಗಳವಾರ ಆಯೋಜಿಸಿದ್ದ ‘ಆತ್ಮನಿರ್ಭರ ಅರ್ಥ ವ್ಯವಸ್ಥೆ ಭಾರತ’ ವಿಷಯ ಕುರಿತ ಸಂವಾದವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಪ್ರಧಾನಿ ಮೋದಿ ಅವರು ಪ್ರತಿ ವಿಚಾರದಲ್ಲೂ ಬದ್ಧತೆ ಹೊಂದಿದ್ದಾರೆ. ಯಾವುದೇ ಯೋಜನೆ ಘೋಷಣೆಗೆ ಮಾತ್ರ ಸೀಮಿತಗೊಳಿಸದೆ ಅನುಷ್ಠಾನಗೊಳಿಸಿದ್ದಾರೆ. ಮೋದಿ ಅವರ ನಾಯಕತ್ವದಲ್ಲಿ ದೇಶ ಅಭಿವೃದ್ಧಿ ಪಥದಲ್ಲಿ ಮುನ್ನುಗುತ್ತಿದೆ. ಆಡಳಿತದಲ್ಲಿ ಪಾರದರ್ಶಕತೆ ಬಂದಿದೆ. ಭ್ರಷ್ಟಾಚಾರಕ್ಕೆ ಕಡಿವಾಣ ಬಿದ್ದಿದೆ. ಸಮಾಜದ ಕಟ್ಟಡ ಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆಗಳು ತಲುಪುತ್ತಿವೆ.

ಅಡುಗೆ ಅನಿಲ, ಮನೆ ಮನೆಗೂ ಶುದ್ಧ ಕುಡಿಯುವ ನೀರು, ವಿದ್ಯುತ್ ಸಂಪರ್ಕ ಕಲ್ಪಿಸುವಲ್ಲಿ ನಿರೀಕ್ಷೆಗೂ ಮೀರಿದ ಸಾಧನೆ ಸಾಧ್ಯವಾಗಿದೆ. ಅಭಿವೃದ್ಧಿ ವಿಚಾರದಲ್ಲಿ ಯಾರೊಬ್ಬರೂ ಮೋದಿ ಅವರ ಬದ್ಧತೆ ಬಗ್ಗೆ ಪ್ರಶ್ನೆ ಮಾಡುವಂತಿಲ್ಲ’ ಎಂದರು. ‘ಕೊರೋನಾ ಸೋಂಕಿನಿಂದ ಇಡೀ ಜಗತ್ತು ತತ್ತರಿಸಿತು.

ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಆತ್ಮನಿರ್ಭರ ತತ್ವದಡಿ ಜಗತ್ತಿನ ಗಮನ ಸೆಳೆದರು. ಕಡಿಮೆ ಅವಧಿಯಲ್ಲಿ ಸ್ವದೇಶಿ ಪಿಪಿಇ ಕಿಟ್, ಮಾಸ್ಕ್, ವೈದ್ಯಕೀಯ ಉಪಕರಣಗಳು, ಔಷಧಿಗಳ ತಯಾರಿಕೆಗೆ ಉತ್ತೇಜನ ನೀಡಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral video: ಸೈಕ್ಲಿಂಗ್ ಮಾಡಲು ಹೋಗಿ ದಢಾರನೆ ಬಿದ್ದ ಡಿಕೆ ಶಿವಕುಮಾರ್

ವಿಧಾನಸೌಧದಲ್ಲಿ 28 ಕ್ಕೆ ಪ್ರಮಾಣವಚನ ಮಾಡ್ತೇವೆ: ಡಿಕೆ ಶಿವಕುಮಾರ್ ಶಾಕಿಂಗ್ ಹೇಳಿಕೆ

ಐಪಿಎಲ್ ಪಂದ್ಯದ ಫ್ಲಡ್ ಲೈಟ್ ಹ್ಯಾಕ್ ಮಾಡಿದ್ವಿ: ಪಾಕ್ ಸಚಿವ ಫುಲ್ ಟ್ರೋಲ್

ಶಿರಾಡಿ ಘಾಟಿಯಲ್ಲಿ ಗುಡ್ಡ ಕುಸಿತ ಭೀತಿ: ಮಂಗಳೂರು, ಬೆಂಗಳೂರು ಪ್ರಯಾಣಿಕರ ಗಮನಕ್ಕೆ

ಇರಾನ್ ಇಸ್ರೇಲ್ ನಡುವಿನ ಯುದ್ಧದಿಂದ ಕರ್ನಾಟಕಕ್ಕಾಗುವ ಪರಿಣಾಮಗಳೇನು

ಮುಂದಿನ ಸುದ್ದಿ
Show comments