Select Your Language

Notifications

webdunia
webdunia
webdunia
webdunia

ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿ: ಮಿಥುನ್ ಚಕ್ರವರ್ತಿ

ಪಶ್ಚಿಮ ಬಂಗಾಳ ಸುದ್ದಿ

Sampriya

ನವದೆಹಲಿ , ಶನಿವಾರ, 19 ಏಪ್ರಿಲ್ 2025 (16:04 IST)
Photo Credit X
ನವದೆಹಲಿ:  ಮುರ್ಷಿದಾಬಾದ್‌ನಲ್ಲಿ ಇತ್ತೀಚಿನ ಹಿಂಸಾಚಾರವನ್ನು ಗಮನದಲ್ಲಿಟ್ಟುಕೊಂಡು, ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಬೇಕೆಂದು ಒತ್ತಾಯಿಸಿದ್ದಾರೆ.

ವಕ್ಫ್ (ತಿದ್ದುಪಡಿ) ಕಾಯ್ದೆ ವಿರುದ್ಧದ ಪ್ರತಿಭಟನೆಯಿಂದ ಪ್ರಚೋದಿತವಾದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಒಂದು ವಾರದ ಹಿಂಸಾಚಾರದ ನಂತರ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ನಟ ಮತ್ತು ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ ಅವರು ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವ ಬಗ್ಗೆ ಕೇಂದ್ರವನ್ನು ಒತ್ತಾಯಿಸಿದ್ದಾರೆ.

"ನಾನು ಹಲವು ಬಾರಿ ಮನವಿ ಮಾಡಿದ್ದೇನೆ ಮತ್ತು ನಾನು ಇನ್ನೂ ಗೃಹ ಸಚಿವರಿಗೆ ಮನವಿ ಮಾಡುತ್ತಿದ್ದೇನೆ. ಕನಿಷ್ಠ ಪಕ್ಷ, ದಯವಿಟ್ಟು ಚುನಾವಣೆಯ ಸಮಯದಲ್ಲಿ ಎರಡು ತಿಂಗಳ ಕಾಲ ಮಿಲಿಟರಿಯನ್ನು ಒಳಗೆ ನಿಯೋಜಿಸಿ. ಅವರನ್ನು ನಿಯೋಜಿಸಿದರೆ, ನಂತರ ನ್ಯಾಯಯುತ ಚುನಾವಣೆ ನಡೆಯುತ್ತದೆ ಎಂದು ಅಭಿಪ್ರಾಯ ಹೊರಹಾಕಿದರು.

ಏಪ್ರಿಲ್ 8 ರಿಂದ 12 ರವರೆಗೆ ಹಲವಾರು ಮುಸ್ಲಿಂ-ಬಹುಸಂಖ್ಯಾತ ಪಟ್ಟಣಗಳಾದ ಶಂಶೇರ್‌ಗಂಜ್, ಸುತಿ, ಧುಲಿಯನ್ ಮತ್ತು ಜಂಗೀಪುರದಲ್ಲಿ ಕೋಮು ಘರ್ಷಣೆಗಳ ನಡುವೆ ನಟ ತಮ್ಮ ಅಭಿಪ್ರಾಯವನ್ನು ಹೇಳಿದರು. ಈ ಹಿಂಸಾಚಾರದಿಂದ ಮೂವರು ಸಾವನ್ನಪ್ಪಿದ್ದು, ಹಲವಾರು ಮಂದಿ ಅರೆಸ್ಟ್ ಆಗಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

India's Project Cheetah: Botswanaನಿಂದ ಮುಂದಿನ ತಿಂಗಳೇ ಬರಲಿದೆ ನಾಲ್ಕು ಚೀತಾ