Select Your Language

Notifications

webdunia
webdunia
webdunia
webdunia

ಸಚಿವರ ಎದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರೈತ

ಸಚಿವರ ಎದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರೈತ
ಧಾರವಾಡ , ಬುಧವಾರ, 26 ಅಕ್ಟೋಬರ್ 2016 (19:14 IST)
ಜಿಲ್ಲಾ ಉಸ್ತುವಾರಿ ಸಚಿವ ವಿನಯ್ ಕುಲಕರ್ಣಿ ಭಾಗವಹಿಸಿದ್ದ ಕಾರ್ಯಕ್ರಮವೊಂದರಲ್ಲಿ ರೈತನೋರ್ವ್ ರಿವಾಲ್ವರ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸಿ ಆತಂಕದ ಸೃಷ್ಟಿ ನಿರ್ಮಾಣವಾಗಲು ಕಾರಣವಾಗಿದ್ದಾನೆ. ತಾಲ್ಲೂಕಿನ ಉಪ್ಪಿನಬೆಟಗೇರಿಯಲ್ಲಿ ಮಂಗಳವಾರ ಈ ಘಟನೆ ನಡೆದಿದೆ. 
ಎಸ್.ಜಿ.ವಿ ಸಂಯುಕ್ತ ಪದವಿಪೂರ್ವ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದ್ದು ಹೆಜ್ಜೆಮೇಳ ಕಾರ್ಯಕ್ರಮದ ಸಂದರ್ಭದಲ್ಲಿ ಉದ್ಘಾಟಕರಾಗಿ ವಿನಯ್ ಕುಲಕರ್ಣಿ ಆಗಮಿಸಿದ್ದರು. 
 
ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಕಲ್ಲೂರ್ ಗ್ರಾಮದ ರೈತ ಸಿದ್ದರಾಮ ದಂಡಿನ ಎಂಬುವವರು ಏಕಾಏಕಿ ಗಾಳಿಯಲ್ಲಿ ಗುಂಡು ಹಾರಿಸಿದಾಗ ಗಾಬರಿಗೊಂಡ ಜನರು ದಿಕ್ಕಾಪಾಲಾಗಿ ಓಡಿದ್ದಾರೆ. 
 
ಈ ಕುರಿತು ಪೊಲೀಸರು ಸಿದ್ದರಾಮ ಅವರನ್ನು ಪ್ರಶ್ನಿಸಲಾಗಿ ಅವರು ವಾದಕ್ಕಿಳಿದಿದ್ದಾರೆ. ಸಚಿವರು ಕೂಡ ರೈತನ ಈ ಕೃತ್ಯಕ್ಕೆ ಆಕ್ಷೇಪ ವ್ಯಕ್ತ ಪಡಿಸಿದರು. 
 
ಡಂದಿನ ಪರವಾನಿಗೆ ಹೊಂದಿರುವ ರಿವಾಲ್ವರ್ ಹೊಂದಿದ್ದು, ಹೀಗಾಗಿ ಅವರ ಮೇಲೆ ಕ್ರಮ ಕೈಗೊಳ್ಳದೇ ಕೇವಲ ಎಚ್ಚರಿಕೆ ನೀಡಿ ಕಳುಹಿಸಲಾಯಿತು. 
 
ಖುಷಿಗಾಗಿ ಗುಂಡು ಹಾರಿಸಿದ್ದುದಾಗಿ ಪೊಲೀಸರ ಬಳಿ ಆತ ಹೇಳಿಕೊಂಡಿದ್ದಾನೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
 

Share this Story:

Follow Webdunia kannada

ಮುಂದಿನ ಸುದ್ದಿ

ಟ್ರಿಪಲ್ ತಲಾಖ್ ಮುಸ್ಲಿಮರ ಆಂತರಿಕ ವಿಷಯ: ಆರ್‌ಎಸ್ಎಸ್