Webdunia - Bharat's app for daily news and videos

Install App

ಅಪ್ರಾಪ್ತ ಬಾಲಕನೊಂದಿಗೆ ಲವ್ವಿಡವ್ವಿ, ಮಹಿಳೆ ಪರಾರಿ?ಪೋಸ್ಕೋ ಕಾಯ್ದೆ ದಾಖಲು

Webdunia
ಸೋಮವಾರ, 18 ಡಿಸೆಂಬರ್ 2023 (01:10 IST)
ಇಬ್ಬರು ದೆಹಲಿ ನಗರದ ನಿವಾಸಿಗಳಾಗಿದ್ದಾರೆ. ಒಂದೇ ಬಡಾವಣೆಯಲ್ಲಿ ವಾಸಿಸುತ್ತಿದ್ದರಿಂದ ಚಿರಪರಿಚಿತರಾಗಿದ್ದರು. ಇಬ್ಬರ ಪರಿಚಯ ಅನೈತಿಕ ಸಂಬಂಧಕ್ಕೆ ತಿರುಗಿತ್ತು. ಅಪ್ರಾಪ್ತ ಬಾಲಕನನ್ನು ಅಪಹರಿಸಿದ ಗೃಹಿಣಿಯ ವಿರುದ್ಧ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. 
 
ಆರೋಪಿ ಮಹಿಳೆಯ ಪತಿ ಕುಡಿಯುವ ಟ್ಯಾಂಕರ್ ನೀರು ಸರಬರಾಜು ಮಾಡುವ ವೃತ್ತಿಯಲ್ಲಿದ್ದಾನೆ. ವಿವಾಹವಾಗಿ ಎರಡು ವರ್ಷಗಳಾಗಿದ್ದರೂ ಮಕ್ಕಳಾಗಿರಲಿಲ್ಲ. ಮಹಿಳೆಯ ಜೊತೆ ಪರಾರಿಯಾಗಿದ್ದ ಬಾಲಕ ಓದುವುದು ಬಿಟ್ಟಿದ್ದನು ಎಂದು ಮೂಲಗಳು ತಿಳಿಸಿವೆ.
 
ತನಿಖಾಧಿಕಾರಿಗಳ ಪ್ರಕಾರ, ಇಬ್ಬರು ಕಾಣೆಯಾಗಿದ್ದರು. ಮಹಿಳೆಯ ಪತಿ ರಾತ್ರಿಯೇ ರಾಬರ್ಟ್ಸನ್ ಪೊಲೀಸ್ ಠಾಣೆಗೆ ತೆರಳಿ ಪತ್ನಿ 1.50 ಲಕ್ಷ ರೂ.ತೆಗೆದುಕೊಂಡು ಕಾಣೆಯಾಗಿದ್ದಾಳೆ ಎಂದು ದೂರು ನೀಡಿದ್ದನು. ಮಾರನೇ ದಿನ ಬೆಳಿಗ್ಗೆ ಬಾಲಕನ ತಂದೆ ಕೂಡಾ ಮಗ ಕಾಣೆಯಾದ ಬಗ್ಗೆ ದೂರು ನೀಡಿದ್ದರು ಎಂದು ತಿಳಿಸಿದ್ದಾರೆ.
 
ಶೀಘ್ರದಲ್ಲೇ, ಗೃಹಿಣಿಯ ಮೊಬೈಲ್ ಫೋನ್ ಕರೆಗಳನ್ನು ಪತ್ತೆಹಚ್ಚಲು ಪೊಲೀಸರು ಪ್ರಾರಂಭಿಸಿದರು. ಇಬ್ಬರೂ ಪ್ರತಿದಿನ  ಸ್ಥಳಾಂತರಗೊಳ್ಳುತ್ತಿದ್ದರು, ವಿಶಾಖಪಟ್ಟಣಂ, ವಿಜಯವಾಡಾ, ನೆಲ್ಲೂರು ಮತ್ತು ತಮಿಳುನಾಡಿನ ಮಹಾಬಲೀಪುರಂ ಸೇರಿದಂತೆ ಕೆಲವು ಐತಿಹಾಸಿಕ ಸ್ಥಳಗಳಿಗೆ ಭೇಟಿ ಮಾಡಿದರು, ಅಲ್ಲಿ ಅವರು ವಸತಿ ನಿಲಯಗಳಲ್ಲಿ ನೆಲೆಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
 
 ಅಂತಿಮವಾಗಿ, ಪೊಲೀಸರು ತಮಿಳುನಾಡಿನ ವೇಲನ್‌ಕಣ್ಣಿ ಪಟ್ಟಣದಲ್ಲಿರುವ ಹೋಟೆಲ್‌ನಲ್ಲಿ ತಂಗಿದ್ದ ಮಹಿಳೆ ಮತ್ತು ಬಾಲಕನನ್ನು ಬಂಧಿಸಲಾಯಿತು.
  
ಬಾಲಕ ಅಪ್ರಾಪ್ತನಾಗಿದ್ದು ಆತನೊಂದಿಗೆ ಸೆಕ್ಸ್‌ನಲ್ಲಿ ಪಾಲ್ಗೊಂಡಿರುವುದು ಅಪರಾಧವಾಗಿದೆ ಎಂದು ಮಹಿಳೆಗೆ ಪೊಲೀಸರು ತಿಳಿಹೇಳಿದರೂ ಪ್ರಯೋಜನವಾಗಲಿಲ್ಲ. ನಾವಿಬ್ಬರು ಪರಸ್ಪರ ಪ್ರೀತಿಸುತ್ತಿದ್ದು ಶೀಘ್ರದಲ್ಲಿಯೇ ಮದುವೆಯಾಗಲಿದ್ದೇವೆ ಎಂದು ಮಹಿಳೆ ತಿಳಿಸಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಪಿಎಸ್‍ಸಿ ಪರೀಕ್ಷಾರ್ಥಿಗಳ ಹೋರಾಟಕ್ಕೆ ಬಿಜೆಪಿ ಬೆಂಬಲ: ಛಲವಾದಿ ನಾರಾಯಣಸ್ವಾಮಿ

Operation Sindoor: ಸೇನಾ ಕಾರ್ಯಾಚರಣೆಯಲ್ಲಿ 100 ಉಗ್ರರು ಫಿನೀಷ್‌: ವಿಪಕ್ಷಗಳಿಗೆ ರಾಜನಾಥ್‌ ಮಾಹಿತಿ

Karnataka BJP: ಆಪರೇಷನ್ ಸಿಂಧೂರ್ ಯಶಸ್ವಿಯಾಗಲೆಂದು ಬಿಜೆಪಿ ಪೂಜೆ

Rahul Gandhi: ಆಪರೇಷನ್ ಸಿಂದೂರ ಬಳಿಕ ರಾಹುಲ್ ಗಾಂಧಿ, ಖರ್ಗೆ ಇಷ್ಟು ಗಂಭೀರ ಯಾಕೆ: ನೆಟ್ಟಿಗರ ಪ್ರಶ್ನೆ

Operation Sindoor: ಸರ್ವಪಕ್ಷ ಸಭೆಗೆ ಮತ್ತೆ ಪ್ರಧಾನಿ ಮೋದಿ ಗೈರು: ವಿಪಕ್ಷಗಳ ಕೆಂಗಣ್ಣು

ಮುಂದಿನ ಸುದ್ದಿ
Show comments