Webdunia - Bharat's app for daily news and videos

Install App

ತಮಿಳುನಾಡು, ತಂದೆ ಮಗನ ಜಗಳವನ್ನು ಬಿಡಿಸಲು ಹೋಗಿ ಪ್ರಾಣ ಕಳೆದುಕೊಂಡ ಸಬ್‌ ಇನ್‌ಸ್ಪೆಕ್ಟರ್‌

Sampriya
ಬುಧವಾರ, 6 ಆಗಸ್ಟ್ 2025 (15:34 IST)
ತಿರುಪ್ಪುರ: ತಂದೆ ಹಾಗೂ ಮಗನ ನಡುವೆ ನಡೆಯುತ್ತಿದ್ದ ಜಗಳವನ್ನು ಬಿಡಿಸಲು ಹೋಗಿ ವಿಶೇಷ ಸಬ್‌ ಇನ್‌ಸ್ಪೆಕ್ಟರ್‌ ಒಬ್ಬರು ಜೀವ  ಕಳೆದುಕೊಂಡಿರುವ ಘಟನೆ ತಮಿಳುನಾಡಿನ ಗುಡಿಮಂಗಲಮ್ ಜಿಲ್ಲೆಯಲ್ಲಿ ನಡೆದಿದೆ. 

ಮೃತ ಪೊಲೀಸ್‌ ಅಧಿಕಾರಿಯನ್ನು ಎಂ. ಷಣ್ಮುಗವೇಲು (57) ಎಂದು ಗುರುತಿಸಲಾಗಿದೆ.

ಇವರು ತಿರುಪ್ಪುರ ಜಿಲ್ಲೆಯ ಗುಡಿಮಂಗಲಮ್‌ ಠಾಣೆಯಲ್ಲಿ ವಿಶೇಷ ಸಬ್‌ ಇನ್‌ಸ್ಪೆಕ್ಟರ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. 

ಆ. 5ರಂದು ಷಣ್ಮುಗವೇಲು ಮತ್ತು ಸಶಸ್ತ್ರ ಪೊಲೀಸ್‌ ದಳದ ಕಾನ್‌ಸ್ಟೆಬಲ್‌ ಅಳಗುರಾಜ ಅವರು ಮಂಗಳವಾರ ರಾತ್ರಿ ಗಸ್ತು ತಿರುಗುತ್ತಿದ್ದರು. ಈ ಸಂದರ್ಭದಲ್ಲಿ ಮದ್ಯ ಸೇವಿಸಿದ್ದ ಇಬ್ಬರು ವ್ಯಕ್ತಿಗಳ ನಡುವೆ ಜಗಳ ನಡೆಯುತ್ತಿತ್ತು.

ತಂದೆ ಹಾಗೂ ಮಗನ ಈ ಜಗಳ ಬಿಡಿಸಲು ಷಣ್ಮುಗವೇಲು ಮತ್ತು ಅಳಗುರಾಜ ಮುಂದಾದರು. ಈ ಸಂದರ್ಭದಲ್ಲಿ ಜಗಳ ಆಡುತ್ತಿದ್ದವರಲ್ಲಿ ವ್ಯಕ್ತಿಯೊಬ್ಬ ಕುಡುಗೋಲಿನಿಂದ ಇವರ ಮೇಲೆ ಹಲ್ಲೆ ನಡೆಸಿದ್ದಾನೆ. ಷಣ್ಮುಗವೇಲು ಮೃತಪಟ್ಟಿದ್ದಾರೆ. 

ಘಟನೆಯಲ್ಲಿ ಕಾನ್‌ಸ್ಟೆಬಲ್‌ ದಾಳಿಯಿಂದ ಪಾರಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

79ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಲ್ಲಿರುವ ದೇಶಕ್ಕೆ ಬಾರೀ ಭದ್ರತೆ

ಮಹಾರಾಷ್ಟ್ರ ಭೀಕರ ಅಪಘಾತ: ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 7ಮಂದಿ

ಎಐ ತಂತ್ರವಲ್ಲ, ಮೆಟ್ರೋ ಹಳದಿ ಮಾರ್ಗದಲ್ಲೂ ಕೇಳಿಬರುತ್ತಿದೆ ಅಪರ್ಣಾ ಧ್ವನಿ, ಹೇಗೆ ಗೊತ್ತಾ

ಕಾಂಗ್ರೆಸ್‌ನಲ್ಲಿ ಸತ್ಯವಂತರಿಗೆ ಕಾಲವಲ್ಲ: ಶೋಭಾ ಕರಂದ್ಲಾಜೆ

ಕೆಎನ್‌ ರಾಜಣ್ಣ ರಾಜೀನಾಮೆ: ಸಂಚಲನ ಸೃಷ್ಟಿಸುತ್ತಿದೆ ಡಿಕೆಶಿ ಆಪ್ತನ ಹೇಳಿಕೆ

ಮುಂದಿನ ಸುದ್ದಿ
Show comments