ಉತ್ತರಪ್ರದೇಶ ಚುನಾವಣೆ : ದಲಿತರೊಂದಿಗೆ ಭೋಜನ ಸವಿಯಲಿರುವ ಅಮಿತ್ ಶಾ

Webdunia
ಮಂಗಳವಾರ, 31 ಮೇ 2016 (12:10 IST)
ಮುಂದಿನ ವರ್ಷ ಉತ್ತರಪ್ರದೇಶದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗಾಗಿ ಮತದಾರರನ್ನು ಓಲೈಸಲು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಇಂದು ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳುವುದಲ್ಲದೇ ದಲಿತರೊಂದಿಗೆ ಭೋಜನ ಸೇವಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಉತ್ತರಪದೇಶದ ಸಹರಣಪುರ್ ಜಿಲ್ಲೆಯಲ್ಲಿ ಪ್ರಧಾನಿ ಮೋದಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡ ನಾಲ್ಕು ದಿನಗಳ ನಂತರ, ಅಮಿತ್ ಶಾ ವಾರಣಾಸಿಯಲ್ಲಿ ಬಿಜೆಪಿ ಪ್ರಚಾರ ಕಾರ್ಯ ಆರಂಭಿಸಲಿದ್ದಾರೆ. 
 
ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡುವಂತೆ ಓಲೈಸುವುದಲ್ಲದೇ ಮೋದಿ ಸರಕಾರದ ಸಾಧನೆಗಳ ಬಗ್ಗೆ ಜನತೆಗೆ ಅಮಿತ್ ಶಾ ಮನವರಿಕೆ ಮಾಡಿಕೊಡಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
 
ಕೇಂದ್ರ ಸರಕಾರ ಕೈಗಾರಿಕೋದ್ಯಮಿಗಳ ಪರ ಮತ್ತು ರೈತರ ವಿರೋಧಿ ಎನ್ನುವ ಆರೋಪಗಳು ಬಿಜೆಪಿಯನ್ನು ಕಾಡುತ್ತಿದ್ದು, ಕೇಂದ್ರ ಸರಕಾರದ ಕೃಷಿ ವಿಮೆ ಯೋಜನೆ, ಜನ ಧನ ಯೋಜನೆ ಬಗ್ಗೆ ಮತದಾರರಿಗೆ ಅಮಿತ್ ಶಾ ಮಾಹಿತಿ ನೀಡಲಿದ್ದಾರೆ ಎಂದು ಬಿಜೆಪಿ ವಕ್ತಾರರು ತಿಳಿಸಿದ್ದಾರೆ.
 
 ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಜೂನ್ 12 ಮತ್ತು ಜೂನ್ 13 ರಂದು ನಡೆಯಲಿರುವುದರಿಂದ ಅನೇಕ ಹಿರಿಯ ಕಾಂಗ್ರೆಸ್ ನಾಯಕರು ವಾರಣಾಸಿಯಲ್ಲಿಯೇ ಬಿಡಾರ ಹೂಡಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. 

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

25 ಪ್ರಕರಣಗಳಲ್ಲಿ ನ್ಯಾಯಾಲಯದ ವಾರೆಂಟ್ ತಪ್ಪಿಸಿ ಪರಾರಿಯಾಗಿದ್ದವ ಕೊನೆಗೂ ಅರೆಸ್ಟ್‌

MGNREGA ಮರುನಾಮಕರಣದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಕಿಡಿ, ನಾಳೆಯಿಂದ ಪ್ರತಿಭಟನೆ

ದಿಡೀರನೆ ದೆಹಲಿ ಜನತೆ ಬಳಿ ಕ್ಷಮೆಯಾಚಿಸಿದ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ

ಸಿಡ್ನಿ ಗುಂಡಿನ ದಾಳಿಕೋರರಲ್ಲಿ ಒಬ್ಬಾತ ಹೈದರಾಬಾದ್‌ ಮೂಲದವ, ಇಲ್ಲಿದೆ ಮಾಹಿತಿ

ಲಿಯೋನೆಲ್ ಮೆಸ್ಸಿ ಕಾರ್ಯಕ್ರಮದಲ್ಲಿ ಧಾಂದಲೆ: ಪ.ಬಂಗಾಳ ರಾಜಕೀಯದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments