Webdunia - Bharat's app for daily news and videos

Install App

ಹೈದ್ರಾಬಾದ್`ನಲ್ಲಿ ಭೀಕರ ಅಪಘಾತ: ಸಚಿವರ ಪುತ್ರ ಸೇರಿ ಇಬ್ಬರ ಸಾವು

Webdunia
ಬುಧವಾರ, 10 ಮೇ 2017 (10:54 IST)
ಹೈದ್ರಾಬಾದ್`ನಲ್ಲಿ ಬೆಳ್ಳಂ ಬೆಳಗ್ಗೆ ನಡೆದ ಅಪಘಾತದಲ್ಲಿ ಆಂಧ್ರಪ್ರದೇಶದ ಹಿರಿಯ ಸಚಿವರೊಬ್ಬರ ಪುತ್ರ ದುರ್ಮರಣಕ್ಕೀಡಾಗಿದ್ದಾನೆ. ಆಂಧ್ರದ ಪಾಲಿಕೆ ಆಡಳಿತ ಸಚಿವ ಪಿ. ನಾರಾಯಣ ಪುತ್ರ 22 ವರ್ಷದ ಪಿ. ನಿಶಿತ್ ಸಾವಿಗೀಡಾಗಿದ್ದಾರೆ.
 

ಕಳೆದ ರಾತ್ರಿ ಹೈದ್ರಾಬಾದ್`ನಲ್ಲಿ ಭಾರೀ ಮಳೆ ಸುರಿದಿತ್ತು. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಮರ್ಸಿಡಿಸ್ ಬೆಂಜ್ ಕಾರಿನಲ್ಲಿ ಮನೆಗೆ ವಾಪಸ್ಸಾಗುತ್ತಿರುವಾಗ ರಸ್ತೆಯಲ್ಲಿ ನೀರು ತುಂಬಿದ ಗುಂಡಿ ತಪ್ಪಿಸಲು ಹೋಗಿ ಮೆಟ್ರೋ ರೈಲು ಲಂಬಕ್ಕೆ ಡಿಕ್ಕಿ ಹೊಡೆದಿದ್ದಾನೆ.

ಇದೇ ಸಂದರ್ಭ ವಿದ್ಯುತ್ ಕಂಬ ಉರುಳಿದ್ದರಿಂದ ಇಡೀ ಪ್ರದೇಶದಲ್ಲಿ ಪವರ್ ಕಟ್ ಆಗಿ ಕಗ್ಗತ್ತಲು ಆವರಿಸಿತ್ತು. ಅಪಘಾತಕ್ಕು ಮುನ್ನ ನಿಶಿತ್ ಮದ್ಯಪಾನ ಮಾಡಿದ್ದರೇ ಎಂಬ ಬಗ್ಗೆ ಪೋಸ್ಟ್ ಮಾರ್ಟಮ್ ವರದಿ ಬಳಿಕವೇ ತಿಳಿದು ಬರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜುಬಿಲಿ ಹಿಲ್ಸ್ ಪೊಲೀಸರು ಹೇಳುವ ಪ್ರಕಾರ, ನಿಶಿತ್ ಮತ್ತವನ ಸ್ನೇಹಿತ ರಾಜಾ ರವಿ ತೀವ್ರವಾಗಿ ಗಾಯಗೊಂಡಿದ್ದರು. ಸ್ಥಳೀಯರು ಅವರನ್ನ ಅಪೋಲೋ ಆಸ್ಪತ್ರೆಗೆ ದಾಖಲಿಸಿದ್ದರು. ಮಾರ್ಗಮಧ್ಯೆಯೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments