Select Your Language

Notifications

webdunia
webdunia
webdunia
webdunia

ರಾಜ್ಯಗಳಲ್ಲಿ ರಣ ಮಳೆಗೆ ಸಾವಿನ ಸಂಖ್ಯೆ ಹೆಚ್ಚಳ!

ರಾಜ್ಯಗಳಲ್ಲಿ ರಣ ಮಳೆಗೆ ಸಾವಿನ ಸಂಖ್ಯೆ ಹೆಚ್ಚಳ!
ಶಿಮ್ಲಾ , ಸೋಮವಾರ, 22 ಆಗಸ್ಟ್ 2022 (08:27 IST)
ಶಿಮ್ಲಾ : ಹಿಮಾಚಲ ಪ್ರದೇಶ, ಉತ್ತರಾಖಂಡ, ಓಡಿಶಾ ಹಾಗೂ ಜಾರ್ಖಂಡ್ ರಾಜ್ಯಗಳಲ್ಲಿ ರಣ ಮಳೆಯಿಂದಾಗಿ ಪ್ರವಾಹ ಉಂಟಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಹಲವೆಡೆ ಭೂಕುಸಿತದಿಂದ 31 ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಹಿಮಾಚಲ ಪ್ರದೇಶ ಒಂದರಲ್ಲೇ 22 ಮಂದಿ ಮೃತಪಟ್ಟಿದ್ದು, ಉತ್ತರಾಖಂಡ, ಒಡಿಶಾ ಜಿಲ್ಲೆಗಳಲ್ಲಿ ತಲಾ 4 ಹಾಗೂ ಜಾರ್ಖಂಡ್ನಲ್ಲಿ ಒಬ್ಬರು ಮೃತಪಟ್ಟಿದ್ದಾರೆ.

ಮಳೆಯಿಂದಾಗಿ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ವಾಹನದಟ್ಟಣೆ ಹೆಚ್ಚಾಗಿದೆ ಎಂದು ವರದಿಯಾಗಿದೆ. 

ಸದ್ಯ ಮಳೆಯ ಆರ್ಭಟ ಮುಂದುವರಿದಿದ್ದು, ನಾಲ್ಕು ರಾಜ್ಯಗಳಲ್ಲಿ ಸುಮಾರು 20ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯಾದ್ಯಂತ ಹೋರಾಟಕ್ಕೆ ಶ್ರೀರಾಮಸೇನೆ ಕರೆ