Webdunia - Bharat's app for daily news and videos

Install App

ಪ್ರಕೃತಿ ವಿಕೋಪಗಳಿಗೆ ನೀಡುವ ಪರಿಹಾರ ಹೆಚ್ಚಿಸಿ : ಕೃಷ್ಣ ಬೈರೇಗೌಡ

Webdunia
ಬುಧವಾರ, 14 ಜೂನ್ 2023 (09:31 IST)
ನವದೆಹಲಿ : ಬೆಳೆ ಹಾನಿ, ಬರಗಾಲ, ಅತಿವೃಷ್ಠಿ ಸೇರಿದಂತೆ ವಿವಿಧ ಪ್ರಕೃತಿ ವಿಕೋಪಗಳಿಗೆ ನೀಡುವ ಪರಿಹಾರ ಧನವನ್ನು ಹೆಚ್ಚಿಸುವಂತೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಮನವಿ ಮಾಡಿದ್ದಾರೆ.
 
ವಿವಿಧ ರಾಜ್ಯಗಳ ವಿಪತ್ತು ನಿರ್ವಹಣಾ ಸಚಿವರ ಜೊತೆಗೆ ಅಮಿತ್ ಶಾ ಸಭೆ ಮಂಗಳವಾರ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಭಾಗಿಯಾದ ಸಚಿವರು ಕೇಂದ್ರ ಸರ್ಕಾರದಿಂದ ಬಿಡುಗಡೆಯಾಗುವ ಬರಗಾಲ, ಅತಿವೃಷ್ಠಿ, ಮಳೆ ಹಾನಿ, ಬೆಳೆ ಪರಿಹಾರ ಮೊತ್ತ ಕಡಿಮೆ ಇದ್ದು ಅದನ್ನು ಪರಿಷ್ಕರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಸಭೆ ಬಳಿಕ ಕರ್ನಾಟಕ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂರು ಅಂಶಗಳನ್ನು ಸಭೆಯಲ್ಲಿ ಪ್ರಸ್ತಾಪಿಸಿದ್ದೇನೆ. ಮೊದಲನೇಯದಾಗಿ ಮಳೆ ಆಶ್ರಿತ ಪ್ರತಿ ಹೆಕ್ಟೇರ್ ಭೂಮಿಗೆ 8,500 ರೂ. ಬೆಳೆ ಹಾನಿ ನೀಡಲಾಗುತ್ತಿದೆ. ಅದನ್ನು 20,000 ರೂ. ಗೆ ಹೆಚ್ಚಿಸಬೇಕು. ನೀರಾವರಿ ಭೂಮಿಗೆ 17,000 ರೂ. ನೀಡಲಾಗುತ್ತಿದೆ. ಇದನ್ನು 35,000 ರೂ. ಗೆ ಹೆಚ್ಚಿಸಬೇಕು. ತೋಟಗಾರಿಕೆ ಬೆಳೆ ಹಾನಿಗೆ 22,000 ರೂ. ನಿಂದ 49,000 ರೂ. ಹೆಚ್ಚಿಸಲು ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments