Webdunia - Bharat's app for daily news and videos

Install App

ರಾಮಲೀಲಾ ಮೈದಾನದಲ್ಲಿ ಇಂದು ಇಂಡಿಯಾ ಒಕ್ಕೂಟದ ಸಮಾವೇಶ

Krishnaveni K
ಭಾನುವಾರ, 31 ಮಾರ್ಚ್ 2024 (09:59 IST)
Photo Courtesy: Twitter
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ರಾಮಲೀಲಾ ಮೈದಾನದಲ್ಲಿ ಇಂದು ಇಂಡಿಯಾ ಒಕ್ಕೂಟದ ಮಹತ್ವದ ಸಮಾವೇಶ ನಡೆಯಲಿದೆ. ಎಲ್ಲಾ ಇಂಡಿಯಾ ಬ್ಲಾಕ್ ನಾಯಕರು ಈ ಸಮಾವೇಶದಲ್ಲಿ ಭಾಗಿಯಾಗುವ ನಿರೀಕ್ಷೆಯಿದೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಮಿತ್ರ ಪಕ್ಷಗಳನ್ನು ಸೋಲಿಸಲು ಕಾಂಗ್ರೆಸ್ ನೇತೃತ್ವದಲ್ಲಿ ಇಂಡಿಯಾ ಒಕ್ಕೂಟ ರಚಿಸಲಾಗಿತ್ತು. ಅದರಂತೆ ವಿಪಕ್ಷಗಳ ಮೈತ್ರಿ ಕೂಟ ಹೊಂದಾಣಿಕೆ ಮಾಡಿಕೊಂಡು ಈ ಲೋಕಸಭೆ ಚುನಾವಣೆ ಎದಿರುಸುತ್ತಿವೆ. ಈ ನಡುವೆ ಕೆಲವು ಭಿನ್ನಾಭಿಪ್ರಾಯಗಳು ಕಂಡುಬಂದರೂ ಅಲ್ಲಲ್ಲಿ ತೇಪೆ ಹಾಕುವ ಯತ್ನವೂ ನಡೆದಿದೆ.

ಇಂದು ಲೋಕಸಭೆ ಚುನಾವಣೆಗೆ ಮುನ್ನ ವಿಪಕ್ಷಗಳ ಮೈತ್ರಿ ಕೂಟ ತಮ್ಮ ಒಗ್ಗಟ್ಟು ಪ್ರದರ್ಶಿಸಿ ಜನರಿಗೆ ಸಂದೇಶ ನೀಡಲು ಹೊರಟಿದೆ. ಇತ್ತೀಚೆಗಷ್ಟೇ ಎಎಪಿ ನಾಯಕ, ದೆಹಲಿ ಸಿಎಂ ಕೇಜ್ರಿವಾಲ್ ಬಂಧನವಾಗಿದೆ. ಇನ್ನೊಂದೆಡೆ ಐಟಿ ಇಲಾಖೆ ಕಾಂಗ್ರೆಸ್ ಬ್ಯಾಂಕ್ ಖಾತೆಯನ್ನು ಸೀಝ್ ಮಾಡಿದೆ. ಈ ಎಲ್ಲಾ ವಿಚಾರಗಳನ್ನಿಟ್ಟುಕೊಂಡು ವಿಪಕ್ಷ ನಾಯಕರು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಲಿದ್ದಾರೆ.

ಇತ್ತ, ಇಂಡಿಯಾ ಬ್ಲಾಕ್ ಸಮಾವೇಶದ ಬಗ್ಗೆ ಬಿಜೆಪಿ ಟಾಂಗ್ ಕೊಟ್ಟಿದೆ. ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿರುವ ಎಲ್ಲಾ ನಾಯಕರೂ ಒಂದಾಗುತ್ತಿದ್ದಾರೆ. ಇದೊಂದು ರೀತಿಯಲ್ಲಿ ಭ್ರಷ್ಟಾಷಾರ ಬಚಾವೊ ಆಂದೋಲನ ಎಂದು ಬಿಜೆಪಿ ವ್ಯಂಗ್ಯ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments