Publish Date: Fri, 23 Sep 2022 (08:46 IST)
Updated Date: Fri, 23 Sep 2022 (08:48 IST)
ವಿಶ್ವಸಂಸ್ಥೆ : ರಷ್ಯಾ ಉಕ್ರೇನ್ ಮೇಲೆ ನಡೆಸುತ್ತಿರುವ ಮಿಲಿಟರಿ ಕಾರ್ಯಾಚರಣೆಯನ್ನು ತಕ್ಷಣವೇ ಕೊನೆಗೊಳಿಸಿ ಶಾಂತಿಯುತ ಮಾತುಕತೆಗೆ ಮರಳುವುದು ಇದೀಗ ಅಗತ್ಯವಾಗಿದೆ ಎಂದು ಭಾರತ ವಿಶ್ವಸಂಸ್ಥೆಯಲ್ಲಿ ತಿಳಿಸಿದೆ.
ರಷ್ಯಾ ಉಕ್ರೇನ್ ಮೇಲೆ ಪರಮಾಣು ಶಸ್ತ್ರಾಸ್ತ್ರವನ್ನು ಬಳಸುವ ಸಾಧ್ಯತೆಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಭಾರತ,
ಈಗಾಗಲೇ ನರೇಂದ್ರ ಮೋದಿಯವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಇದು ಯುದ್ಧದ ಸಮಯವಲ್ಲ ಎಂದು ಹೇಳಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ತಿಳಿಸಿದ್ದಾರೆ.
ರಷ್ಯಾ ಉಕ್ರೇನ್ನ ಸಂಘರ್ಷ ಇಡೀ ವಿಶ್ವಕ್ಕೆ ಆಳವಾದ ಕಾಳಜಿಯ ವಿಷಯವಾಗಿದೆ. ಮುಖ್ಯವಾಗಿ ಪರಮಾಣು ದಾಳಿಯ ಸಾಧ್ಯತೆ ಭವಿಷ್ಯದ ದೃಷ್ಟಿಕೋನಕ್ಕೆ ಇನ್ನಷ್ಟು ಭೀತಿಯ ಸಂಗತಿಯಾಗಿದೆ.