Publish Date: Thu, 11 Jun 2026 (18:13 IST)
Updated Date: Thu, 11 Jun 2026 (18:19 IST)
ನವದೆಹಲಿ: ಒಮಾನ್ ಕರಾವಳಿಯಲ್ಲಿ ಭಾರತದ ಮತ್ತೊಂದು ಹಡಗಿನ ಮೇಲೆ ದಾಳಿ ಬೆನ್ನಲ್ಲೇ ಹಡಗುಗಗಳ ಮೇಲಿನ ದಾಳಿ ಕುರಿತಂತೆ ಭಾರತ ತೀವ್ರ ಖಂಡನೆ ವ್ಯಕ್ತಪಡಿಸಿದೆ.
ನವದೆಹಲಿಯಲ್ಲಿರುವ ಅಮೆರಿಕ ರಾಯಭಾರಿ ಎದುರು ಪ್ರತಿಭಟನೆ ವ್ಯಕ್ತಪಡಿಸಿರುವ ಭಾರತ, ದಾಳಿಗಳು ಕೂಡಲೇ ನಿಲ್ಲಬೇಕು ಎಂದು ಆಗ್ರಹಿಸಿದೆ.
ಪಶ್ಚಿಮ ಏಷ್ಯಾದ ಉದ್ವಿಗ್ನತೆ ಶಮನಕ್ಕೆ ಅಮೆರಿಕ ಮತ್ತು ಇರಾನ್ ಕೂಡಲೇ ರಾಜತಾಂತ್ರಿಕ ಮಾರ್ಗದ ಮೂಲಕ ಮಾತುಕತೆಗೆ ಮುಂದಾಗಬೇಕೆಂದು ಭಾರತ ಒತ್ತಿ ಹೇಳಿದೆ.
ಇಂದು ಬೆಳಿಗ್ಗೆ ಒಮಾನ್ ಕರಾವಳಿಯಲ್ಲಿ ಭಾರತದ ಮತ್ತೊಂದು ಹಡಗಿನ ಮೇಲೆ ದಾಳಿ ಕುರಿತಾದ ವರದಿಗಳ ಬೆನ್ನಲ್ಲೇ ಭಾರತದಿಂದ ಈ ಪ್ರತಿಕ್ರಿಯೆ ಬಂದಿದೆ.
ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, ಈ ಪ್ರದೇಶದಲ್ಲಿ ವಾಣಿಜ್ಯ ಹಡಗುಗಳ ಮೇಲೆ ನಡೆಯುತ್ತಿರುವ ದಾಳಿಗಳು ತೀವ್ರ ಕಳವಳಕಾರಿಯಾಗಿದ್ದು, ಅಮೆರಿಕ ಮತ್ತು ಇರಾನ್ ಸಂಘರ್ಷದ ನೇರ ಪರಿಣಾಮ ಇದಾಗಿದೆ ಎಂದು ಹೇಳಿದರು.
ಒಮಾನ್ ಕರಾವಳಿಯಲ್ಲಿ ಹಡಗಿನ ಮೇಲಿನ ದಾಳಿಯನ್ನು ನಾವು ಖಂಡಿಸಿದ್ದೇವೆ. ದುರದೃಷ್ಟವಶಾತ್ ನಮ್ಮ ಮೂವರು ನಾವಿಕರು ಜೀವ ಕಳೆದುಕೊಂಡಿದ್ದಾರೆ ಎಂದು ಹೇಳಿದರು.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ