ಪಾಕಿಸ್ತಾನವನ್ನು ಭಾರತ ಗೌರವದಿಂದ ನೋಡಬೇಕು: ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಹೇಳಿಕೆ

Krishnaveni K
ಶುಕ್ರವಾರ, 10 ಮೇ 2024 (11:28 IST)
ನವದೆಹಲಿ:  ಪಾಕಿಸ್ತಾನವನ್ನು ಭಾರತ ಗೌರವದಿಂದ ನೋಡಿಕೊಳ್ಳಬೇಕು. ಇಲ್ಲದೇ ಹೋದರೆ ಆ ದೇಶ ಅಣ್ವಸ್ತ್ರ ದಾಳಿ ಮಾಡಬಹುದು ಎಂದು ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಮಣಿಶಂಕರ್ ಅಯ್ಯರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಪಾಕಿಸ್ತಾನವನ್ನು ಭಾರತ ಗೌರವಿಸಬೇಕೇ ಹೊರತು ಸೇನಾಬಲವನ್ನು ಹೆಚ್ಚಿಸಿಕೊಳ್ಳಬಾರದು. ಪಾಕಿಸ್ತಾನದ ಬಳಿ ಅಣ್ವಸ್ತ್ರಗಳಿವೆ. ಒಂದು ವೇಳೆ ನಾವು ಆ ದೇಶಕ್ಕೆ ಗೌರವ ಕೊಡದೇ ಇದ್ದರೆ ಅದು ನಮ್ಮ ಮೇಲೆ ಅಣ್ವಸ್ತ್ರ ದಾಳಿ ಮಾಡಬಹುದು ಎಂದು ಮಣಿಶಂಕರ್ ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.

ಭಯೋತ್ಪಾದನೆ ಮತ್ತು ಮಾತುಕತೆ ಎರಡೂ ಒಟ್ಟಿಗೆ ನಡೆಯಲು ಸಾಧ‍್ಯವಿಲ್ಲ ಎಂದು ಬಿಜೆಪಿ ಹೇಳುತ್ತದೆ. ಆದರೆ ಭಯೋತ್ಪಾದನೆ ಕೊನೆಗೊಳ್ಳಬೇಕಾದರೆ ಮಾತುಕತೆಯೊಂದೇ ಮಾರ್ಗ. ಭಾರತ ಸರ್ಕಾರ ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸಬೇಕು. ಆದರೆ ನೆರೆಯ ದೇಶವನ್ನು ಗೌರವಿಸದೇ ಇದ್ದರೆ ಭಾರೀ ಬೆಲೆ ತೆರಬೇಕಾದೀತು ಎಂದಿದ್ದಾರೆ.

ನಾವು ಅವರನ್ನು ಗೌರವಿಸಿದರೆ ಅವರು ಶಾಂತಿಯಿಂದ ಇರುತ್ತಾರೆ. ಧಿಕ್ಕರಿಸಿದರೆ ನಮ್ಮ ಮೇಲೆ ಅಣ್ವಸ್ತ್ರ ದಾಳಿ ಮಾಡುತ್ತಾರೆ. ಧ‍್ವೇಷ ಸಾಧಿಸಿ, ಬಂಧೂಕು ತೋರಿಸಿ ಎಲ್ಲವನ್ನೂ ಸರಿಪಡಿಸಲು ಸಾಧ‍್ಯವಿಲ್ಲ ಎಂದು ಮಣಿಶಂಕರ್ ಹೇಳಿದ್ದಾರೆ. ಕಾಂಗ್ರೆಸ್ ನಾಯಕನ ಈ ಹೇಳಿಕೆಗೆ ಭಾರೀ ಟೀಕೆ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಗಿಯದ ಇಂಡಿಗೋ ವಿಮಾನದ ರಗಳೆ: ಹುಬ್ಬಳ್ಳಿಯಲ್ಲಿ ವಧು ವರರಿಲ್ಲದೇ ನಡೆದ ನಡೆದ ಆರತಕ್ಷತೆ

ಕುರ್ಚಿ ಕದನದ ಬೆನ್ನಲ್ಲೇ ಸಚಿವರಿಗೆ ಖಡಕ್ ಸೂಚನೆ ಕೊಟ್ಟ ಸಿಎಂ ಸಿದ್ದರಾಮಯ್ಯ

ವ್ಲಾಡಿಮಿರ್ ಪುಟಿನ್ ಗೆ ವಿಶೇಷ ಗಿಫ್ಟ್ ಕೊಟ್ಟ ಪ್ರಧಾನಿ ಮೋದಿ: ಇದರಲ್ಲೇ ಇರೋದು ಸ್ಪೆಷಾಲಿಟಿ

ಭಾರತಕ್ಕೆ ಬಂದ ವ್ಲಾಡಿಮಿರ್ ಪುಟಿನ್ ಎಲ್ಲೂ ಮಾಡದ ಕೆಲಸವನ್ನು ಇಲ್ಲಿ ಮಾಡಿದ್ರು

ಮುಂದಿನ ಸುದ್ದಿ
Show comments