Webdunia - Bharat's app for daily news and videos

Install App

ಬಜೆಟ್ ನಲ್ಲಿ ನಮಗೆ ಪಾಲು ಸಿಕ್ಕಿಲ್ಲ: ಮೋದಿ ಸರ್ಕಾರದ ವಿರುದ್ಧ ಇಂಡಿಯಾ ಒಕ್ಕೂಟದಿಂದ ಸಂಸತ್ ಮುಂದೆ ಆಕ್ರೋಶ

Krishnaveni K
ಬುಧವಾರ, 24 ಜುಲೈ 2024 (11:44 IST)
ನವದೆಹಲಿ: ನಿನ್ನೆಯಷ್ಟೇ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಕೇಂದ್ರ ಬಜೆಟ್ ನಲ್ಲಿ ಕೆಲವು ರಾಜ್ಯಗಳಿಗೆ ಪಾಲು ಸಿಕ್ಕಿಲ್ಲ ಎಂದು ಇಂದು ವಿಪಕ್ಷ ಇಂಡಿಯಾ ಒಕ್ಕೂಟದ ಸಂಸದರು ಸಂಸತ್ ಭವನದ ಮುಂಭಾಗ ಭಿತ್ತಿ ಪತ್ರ ಹಿಡಿದು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದಾರೆ.

ಕಾಂಗ್ರೆಸ್ ಧುರೀಣೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ನೇತೃತ್ವದಲ್ಲಿ ಇಂಡಿಯಾ ಒಕ್ಕೂಟದ ಎಲ್ಲಾ ಪಕ್ಷಗಳೂ ಪ್ರತಿಭಟನೆಯಲ್ಲಿ ಭಾಗಿಯಾಗಿವೆ. ಆಮ್ ಆದ್ಮಿ ಪಕ್ಷ, ಟಿಎಂಸಿ, ಡಿಎಂಕೆ ಸೇರಿದಂತೆ ಪ್ರಮುಖ ಪಕ್ಷಗಳ ಸಂಸದರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ನಿನ್ನೆಯ ಬಜೆಟ್ ಕೇವಲ ಎನ್ ಡಿಎ ಬಜೆಟ್ ಆಗಿತ್ತು. ಇಂಡಿಯಾ ಒಕ್ಕೂಟಗಳ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಕ್ಕೆ ಏನೂ ಕೊಡುಗೆಯಿಲ್ಲ ಎಂದು ವಿಪಕ್ಷಗಳು ಆರೋಪಿಸಿವೆ.

ಇಂತಹದ್ದೊಂದು ಪಕ್ಷಪಾತದ ಬಜೆಟ್ ಮಂಡಿಸಿರುವುದಕ್ಕೆ ಮೋದಿ ಸರ್ಕಾರಕ್ಕೆ ಧಿಕ್ಕಾರ ಎಂದು ಘೋಷಣೆಗಳನ್ನು ಕೂಗಲಾಯಿತು. ನಿನ್ನೆಯ ಬಜೆಟ್ ನಲ್ಲಿ ಎನ್ ಡಿಎ ಪಾಲುದಾರ ಪಕ್ಷಗಳಾದ ಟಿಡಿಪಿ ಆಡಳಿತವಿರುವ ಆಂಧ್ರಪ್ರದೇಶ, ಜೆಡಿಯು ಅಧಿಕಾರದಲ್ಲಿರುವ ಬಿಹಾರಕ್ಕೆ ಬಹುಪಾಲು ನೀಡಲಾಗಿದೆ.

ಹೀಗಾಗಿ ಇದು ತಮ್ಮ ಕುರ್ಚಿ ಉಳಿಸಿಕೊಳ್ಳುವ ಬಜೆಟ್ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಿನ್ನೆಯೇ ಲೇವಡಿ ಮಾಡಿದ್ದರು. ಅಲ್ಲದೆ, ಇದು ಕಾಂಗ್ರೆಸ್ ಪ್ರಣಾಳಿಕೆಯನ್ನೇ ಕಾಪಿ ಮಾಡಿರುವ ಬಜೆಟ್ ಎಂದು ಮಲ್ಲಿಕಾರ್ಜುನ ಖರ್ಗೆ, ಪಿ ಚಿದಂಬರಂ ಟೀಕಿಸಿದ್ದರು. ಇಂದು ಸರ್ವ ಪಕ್ಷಗಳು ಸಂಸತ್ ಹೊರಗೆ ಪ್ರತಿಭಟನೆ ನಡೆಸಿದ್ದು, ಈ ಪ್ರತಿಭಟನೆ ಸಂಸತ್ ಅಧಿವೇಶನದಲ್ಲೂ ಮುಂದುವರಿಯಲಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments