Webdunia - Bharat's app for daily news and videos

Install App

ಬಜೆಟ್ ನಲ್ಲಿ ನಮಗೆ ಪಾಲು ಸಿಕ್ಕಿಲ್ಲ: ಮೋದಿ ಸರ್ಕಾರದ ವಿರುದ್ಧ ಇಂಡಿಯಾ ಒಕ್ಕೂಟದಿಂದ ಸಂಸತ್ ಮುಂದೆ ಆಕ್ರೋಶ

Krishnaveni K
ಬುಧವಾರ, 24 ಜುಲೈ 2024 (11:44 IST)
ನವದೆಹಲಿ: ನಿನ್ನೆಯಷ್ಟೇ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಕೇಂದ್ರ ಬಜೆಟ್ ನಲ್ಲಿ ಕೆಲವು ರಾಜ್ಯಗಳಿಗೆ ಪಾಲು ಸಿಕ್ಕಿಲ್ಲ ಎಂದು ಇಂದು ವಿಪಕ್ಷ ಇಂಡಿಯಾ ಒಕ್ಕೂಟದ ಸಂಸದರು ಸಂಸತ್ ಭವನದ ಮುಂಭಾಗ ಭಿತ್ತಿ ಪತ್ರ ಹಿಡಿದು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದಾರೆ.

ಕಾಂಗ್ರೆಸ್ ಧುರೀಣೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ನೇತೃತ್ವದಲ್ಲಿ ಇಂಡಿಯಾ ಒಕ್ಕೂಟದ ಎಲ್ಲಾ ಪಕ್ಷಗಳೂ ಪ್ರತಿಭಟನೆಯಲ್ಲಿ ಭಾಗಿಯಾಗಿವೆ. ಆಮ್ ಆದ್ಮಿ ಪಕ್ಷ, ಟಿಎಂಸಿ, ಡಿಎಂಕೆ ಸೇರಿದಂತೆ ಪ್ರಮುಖ ಪಕ್ಷಗಳ ಸಂಸದರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ನಿನ್ನೆಯ ಬಜೆಟ್ ಕೇವಲ ಎನ್ ಡಿಎ ಬಜೆಟ್ ಆಗಿತ್ತು. ಇಂಡಿಯಾ ಒಕ್ಕೂಟಗಳ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಕ್ಕೆ ಏನೂ ಕೊಡುಗೆಯಿಲ್ಲ ಎಂದು ವಿಪಕ್ಷಗಳು ಆರೋಪಿಸಿವೆ.

ಇಂತಹದ್ದೊಂದು ಪಕ್ಷಪಾತದ ಬಜೆಟ್ ಮಂಡಿಸಿರುವುದಕ್ಕೆ ಮೋದಿ ಸರ್ಕಾರಕ್ಕೆ ಧಿಕ್ಕಾರ ಎಂದು ಘೋಷಣೆಗಳನ್ನು ಕೂಗಲಾಯಿತು. ನಿನ್ನೆಯ ಬಜೆಟ್ ನಲ್ಲಿ ಎನ್ ಡಿಎ ಪಾಲುದಾರ ಪಕ್ಷಗಳಾದ ಟಿಡಿಪಿ ಆಡಳಿತವಿರುವ ಆಂಧ್ರಪ್ರದೇಶ, ಜೆಡಿಯು ಅಧಿಕಾರದಲ್ಲಿರುವ ಬಿಹಾರಕ್ಕೆ ಬಹುಪಾಲು ನೀಡಲಾಗಿದೆ.

ಹೀಗಾಗಿ ಇದು ತಮ್ಮ ಕುರ್ಚಿ ಉಳಿಸಿಕೊಳ್ಳುವ ಬಜೆಟ್ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಿನ್ನೆಯೇ ಲೇವಡಿ ಮಾಡಿದ್ದರು. ಅಲ್ಲದೆ, ಇದು ಕಾಂಗ್ರೆಸ್ ಪ್ರಣಾಳಿಕೆಯನ್ನೇ ಕಾಪಿ ಮಾಡಿರುವ ಬಜೆಟ್ ಎಂದು ಮಲ್ಲಿಕಾರ್ಜುನ ಖರ್ಗೆ, ಪಿ ಚಿದಂಬರಂ ಟೀಕಿಸಿದ್ದರು. ಇಂದು ಸರ್ವ ಪಕ್ಷಗಳು ಸಂಸತ್ ಹೊರಗೆ ಪ್ರತಿಭಟನೆ ನಡೆಸಿದ್ದು, ಈ ಪ್ರತಿಭಟನೆ ಸಂಸತ್ ಅಧಿವೇಶನದಲ್ಲೂ ಮುಂದುವರಿಯಲಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments