Webdunia - Bharat's app for daily news and videos

Install App

ಉಕ್ರೇನ್-ರಷ್ಯಾ ಬಿಕ್ಕಟ್ಟಿನಲ್ಲಿ ಭಾರತ ಶಾಂತಿ ಪರ

Webdunia
ಗುರುವಾರ, 7 ಏಪ್ರಿಲ್ 2022 (12:57 IST)
ಉಕ್ರೇನ್ ಹಾಗೂ ರಷ್ಯಾದ ನಡುವಿನ ಬಿಕ್ಕಟ್ಟಿನಲ್ಲಿ ಭಾರತವು ಶಾಂತಿಯ ಪರವಾಗಿದೆ ಹಾಗೂ ಭೀಕರ ಯುದ್ಧವನ್ನು ಕೂಡಲೇ ನಿಲ್ಲಿಸಲು ಕರೆ ನೀಡುತ್ತದೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಹೇಳಿದ್ದಾರೆ.

ಲೋಕಸಭೆಯಲ್ಲಿ ಉಕ್ರೇನಿನ ಬಿಕ್ಕಟ್ಟಿನ ವಿಚಾರವಾಗಿ ಮಾತನಾಡಿದ ಅವರು, ‘ಭಾರತವು ಆಧ್ಯಕ್ಷೀಯ ಮಟ್ಟದಲ್ಲಿ ಉಕ್ರೇನ್ ಹಾಗೂ ರಷ್ಯಾ ನಡುವೆ ಶಾಂತಿ ಮಾತುಕತೆ ಬಯಸುತ್ತದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರೇ ಉಭಯ ದೇಶಗಳ ಅಧ್ಯಕ್ಷರೊಂದಿಗೆ ಮಾತುಕತೆ ನಡೆಸಿದ್ದಾರೆ.

ರಷ್ಯಾದ ವಿದೇಶಾಂಗ ಸಚಿವ ಸರ್ಗೇಯ್ ಲಾವ್ರೊವ್ ದೆಹಲಿಗೆ ಭೇಟಿ ನೀಡಿದಾಗಲೂ ಈ ವಿಷಯವನ್ನು ಚರ್ಚಿಸಲಾಗಿದೆ. ಯುದ್ಧ ಕೊನೆಗೊಳಿಸಿ ಶಾಂತಿ ಮಾತುಕತೆ ಆರಂಭಿಸುವ ನಿಟ್ಟಿನಲ್ಲಿ ಯಾವುದೇ ರೀತಿಯ ಸಹಾಯ ಒದಗಿಸಲು ಭಾರತ ಸಿದ್ಧವಾಗಿದೆ’ ಎಂದರು.

ಇದೇ ವೇಳೆ ಉಕ್ರೇನಿನಲ್ಲಿ ನಡೆದ ಸಾಮೂಹಿಕ ಹತ್ಯಾಕಾಂಡವನ್ನು ಭಾರತವು ವಿರೋಧಿಸುತ್ತದೆ. ಅಲ್ಲದೇ ಈ ಕುರಿತು ಸ್ವತಂತ್ಯ ತನಿಖೆಗೆ ಆಗ್ರಹಿಸುತ್ತದೆ ಎಂದು ಹೇಳಿದರು.

ಉಕ್ರೇನಿನಲ್ಲಿ ಸಿಲುಕಿದ ಭಾರತೀಯರನ್ನು ಸುರಕ್ಷಿತವಾಗಿ ದೇಶಕ್ಕೆ ಮರಳಿ ತರುವ ಆಪರೇಶನ್ ಗಂಗಾ ಕಾರ್ಯಾಚರಣೆಯ ಬಗ್ಗೆ ಮಾತನಾಡಿದ ಜೈಶಂಕರ್, ಪ್ರಧಾನಿ ನರೇಂದ್ರ ಮೋದಿಯವರ ಪ್ರಯತ್ನದಿಂದಲೇ ಆಪರೇಶನ್ ಗಂಗಾ ಸಫಲವಾಯಿತು ಎಂದು ಶ್ಲಾಘಿಸಿದರು.

‘ಮೋದಿ ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಹಾಗೂ ಉಕ್ರೇನಿನ ಅಧ್ಯಕ್ಷ ಜೆಲೆನ್ಸ್ಕಿ ಅವರೊಂದಿಗೆ ಮಾತುಕತೆ ನಡೆಸಿದರು. ಕದನ ವಿರಾಮದ ಸತತ ಉಲ್ಲಂಘನೆ ನಡುವೆಯೂ ಸಂಘರ್ಷ ವಲಯವಾದ ಸುಮಿ ಹಾಗೂ ಖಾರ್ಕೀವ್ನಲ್ಲಿ ಸಿಲುಕಿರುವ ಭಾರತೀಯರಿಗೆ ರಷ್ಯಾದ ಯೋಧರೇ ಸುರಕ್ಷಿತವಾಗಿ ಸ್ಥಳಾಂತರವಾಗಲು ನೆರವು ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

70 ಲಕ್ಷ ಕಾರು, ಚಿನ್ನ ಕೊಟ್ಟರೂ ಗಂಡನ ಮನೆಯವರ ಕಾಟ ತಪ್ಪಲಿಲ್ಲ: ನವವಿವಾಹಿತೆ ಆತ್ಮಹತ್ಯೆ

ಮುಕ್ಕಾಲು ಕೆಜಿ ಚಿನ್ನ, ಐಷಾರಾಮಿ ಕಾರು ನೀಡಿದ ಬಳಿಕವೂ ವರದಕ್ಷಿಣೆ ಕಿರುಕುಳ: ನವವಿವಾಹಿತೆ ಸಾವಿಗೆ ಶರಣು

ಲಲಿತ್ ಮೋದಿಗೆ ಸುಪ್ರೀಂಕೋರ್ಟ್ ಶಾಕ್‌: ಬಿಸಿಸಿಐಗೆ ನಿರ್ದೇಶನ ನೀಡಲು ಕೋರಿದ್ದ ಅರ್ಜಿ ವಜಾ

ದಲಿತರ ಜಮೀನನ್ನು ಅರಣ್ಯ ಇಲಾಖೆ ವಶಪಡಿಸಿಕೊಳ್ಳಲು ಹೊರಟಿದೆ: ಛಲವಾದಿ ನಾರಾಯಣಸ್ವಾಮಿ

ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: ಕನಿಷ್ಠ ಹತ್ತ ಕಾರ್ಮಿಕರು ಸಜೀವ ದಹನ, ಹಲವರಿಗೆ ಗಾಯ

ಮುಂದಿನ ಸುದ್ದಿ
Show comments