ಭಾರತದಲ್ಲಿ ವಾಡಿಕೆಗಿಂದ ಅಧಿಕ ಮಳೆ: ಮುಂಗಾರು ಪ್ರವೇಶದ ಬಗ್ಗೆ ಹವಾಮಾನ ಇಲಾಖೆ ಹೇಳಿದ್ದೇನು

Sampriya
ಮಂಗಳವಾರ, 15 ಏಪ್ರಿಲ್ 2025 (20:48 IST)
Photo Courtesy X
ನವದೆಹಲಿ: ಭಾರತ ಹವಾಮಾನ ಇಲಾಖೆಯು ಕೃಷಿಕರಿಗೆ ಗುಡ್‌ನ್ಯೂಸ್‌ ನೀಡಿದೆ. ಭಾರತದಲ್ಲಿ ಈ ಬಾರಿ ವಾಡಿಕೆಗಿಂತ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ ಎಂದು ಹೇಳಿದೆ.

ಈ ವರ್ಷದ ಮಾನ್ಸೂನ್ ಋತುವಿನಲ್ಲಿ ಭಾರತದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ. ಭಾರತ ಹವಾಮಾನ ಇಲಾಖೆ ದೀರ್ಘಾವಧಿಯ ಸರಾಸರಿಯ ಶೇ 105 ಕಾಲೋಚಿತ ಮಳೆಯಾಗುವ ಮುನ್ಸೂಚನೆ ನೀಡಿದೆ.

ನೈಋತ್ಯ ಮುಂಗಾರು ಸಾಮಾನ್ಯವಾಗಿ ಜೂನ್ 1ರ ಸುಮಾರಿಗೆ ಕೇರಳಕ್ಕೆ ಪ್ರವೇಶಿಸಲು ಆರಂಭಿಸುತ್ತದೆ, ಸೆಪ್ಟೆಂಬರ್ ಮಧ್ಯದ ವೇಳೆಗೆ ಹಿಂದೆ ಸರಿಯುತ್ತದೆ. ಅಂದಾಜು ಸರಾಸರಿಗಿಂತ ಹೆಚ್ಚಿನ ಮಳೆಯು ಕೃಷಿ ವಲಯಕ್ಕೆ ಅನುಕೂಲಕರ ವಾತಾವರಣವನ್ನು ಒದಗಿಸಬಹುದು ಎಂದು ಭೂ ವಿಜ್ಞಾನ ಸಚಿವಾಲಯ ತಿಳಿಸಿದೆ.

ಈ ವರ್ಷದ ಮುನ್ಸೂಚನೆಯು ಕೆಲವು ಪ್ರದೇಶಗಳನ್ನು ಹೊರತುಪಡಿಸಿ ದೇಶದ ಹೆಚ್ಚಿನ ಭಾಗಗಳಲ್ಲಿ ಅನುಕೂಲಕರ ಮಳೆಯ ಪರಿಸ್ಥಿತಿ ನಿರ್ಮಾಣವಾಗಲಿದೆ. 4 ತಿಂಗಳ ಮಾನ್ಸೂನ್ ಋತುವಿನಲ್ಲಿ ಲಡಾಖ್, ಈಶಾನ್ಯ ಭಾರತ ಮತ್ತು ತಮಿಳುನಾಡಿನಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ನಿರೀಕ್ಷೆಯಿದೆ ಎಂದು ಮಾಹಿತಿ ನೀಡಿದೆ.

4 ತಿಂಗಳ ಮಾನ್ಸೂನ್ ಋತುವಿನಲ್ಲಿ (ಜೂನ್ ತಿಂಗಳಿಂದ ಸೆಪ್ಟೆಂಬರ್) ಭಾರತದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ದೀರ್ಘಾವಧಿಯ ಸರಾಸರಿ 87 ಸೆಂ.ಮೀ.ನಷ್ಟು ಸಂಚಿತ ಮಳೆಯಾಗುವ ಅಂದಾಜು ಮಾಡಲಾಗಿದೆ ಎಂದು ಹೇಳಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ಜಿಲ್ಲೆಗೆ ಮಾತ್ರ ಇಂದು ಮಳೆಯ ಸೂಚನೆ

Bihar election result 2025: ಬಿಹಾರದಲ್ಲಿ ಯಾರಿಗೆ ಆರಂಭಿಕ ಮುನ್ನಡೆ

ಕೆಲಸ ಮಾಡುವವರಿಗಿಂತ, ಚಾಡಿ ಹೇಳುವವರೆ ಕುಮಾರಸ್ವಾಮಿಗೆ ಪ್ರಿಯ: ಜಿಟಿ ದೇವೇಗೌಡ

ಹಿಂದೂ ವಿರೋಧಿ ಹೇಳಿಕೆ, ಇದೆಲ್ಲ ಅವರುಗಳ ಸೃಷ್ಟಿ: ಮಾಜಿ ಸಚಿವ ಆಂಜನೇಯ ಸ್ಪಷ್ಟನೆ

ದೆಹಲಿ ಸ್ಪೋಟ ಪ್ರಕರಣ: ರೈಲು, ವಿಮಾನ ಪ್ರಯಾಣಿಕರಿಗೆ ಸಲಹೆ ಕೊಟ್ಟ ದೆಹಲಿ ಪೊಲೀಸರು

ಮುಂದಿನ ಸುದ್ದಿ
Show comments