Webdunia - Bharat's app for daily news and videos

Install App

ಚೀನಿ ಯೋಧರಿಗೆ ತಿರುಗೇಟು ಕೊಟ್ಟ ಭಾರತ

Webdunia
ಮಂಗಳವಾರ, 13 ಡಿಸೆಂಬರ್ 2022 (08:25 IST)
ನವದೆಹಲಿ : ಗಲ್ವಾನ್ನಲ್ಲಿ ಭಾರತೀಯ ಯೋಧರಿಂದ ಪೆಟ್ಟು ತಿಂದಿದ್ದ ಚೀನಾ ಮತ್ತೆ ತನ್ನ ಕುತಂತ್ರ ಬುದ್ಧಿಯನ್ನು ತೋರಿಸಿದೆ. ಅರುಣಾಚಲ ಪ್ರದೇಶದ ಗಡಿ ವಾಸ್ತವ ರೇಖೆ ಬಳಿ ಭಾರತ ಮತ್ತು ಚೀನಾ ಸೈನಿಕರ ಮಧ್ಯೆ ಬಡಿದಾಟ ನಡೆದಿದೆ.

ತವಾಂಗ್ ಸೆಕ್ಟರ್ನಲ್ಲಿ ಡಿಸೆಂಬರ್ 9ರ ರಾತ್ರಿ ಗಡಿ ಕಾಯುತ್ತಿದ್ದ ಭಾರತ ಸೈನಿಕರನ್ನು ಚೀನಿ ಯೋಧರು ಕೆಣಕಿದ್ದಾರೆ. ಇದಕ್ಕೆ ಪ್ರತಿಯಾಗಿ ಭಾರತದ ಸೈನಿಕರು ತಿರುಗೇಟು ನೀಡಿದ್ದು, ಎರಡು ಕಡೆ ಸೈನಿಕರ ಮಧ್ಯೆ ಘರ್ಷಣೆ ನಡೆದಿದೆ. ಘರ್ಷಣೆಯಲ್ಲಿ ಎರಡು ಕಡೆಯಲ್ಲೂ ಸೈನಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿಯಾಗಿದೆ.

ಸಂಘರ್ಷಕ್ಕೆಂದು 300 ಸೈನಿಕರೊಂದಿಗೆ ಚೀನಾ ಪಡೆ ತಯಾರಾಗಿ ಬಂದಿತ್ತು. ದಿಢೀರ್ ದಾಳಿಯಿಂದ ಕ್ಷಣ ಕಾಲ ಭಾರತೀಯ ಸೇನೆ ತಬ್ಬಿಬ್ಬಾದರೂ ತಕ್ಷಣವೇ ಚೇತರಿಸಿಕೊಂಡು ದಿಟ್ಟ ಪ್ರತ್ಯುತ್ತರ ನೀಡಿತು. ಪರಸ್ಪರ ಕಲ್ಲು ತೂರಾಟಗಳು ನಡೆದಿವೆ.

ಭಾರತೀಯರ ಯೋಧರ ಶೌರ್ಯಕ್ಕೆ ಬೆಚ್ಚಿಬಿದ್ದ ಚೀನಾಸೇನೆ, ಸಂಘಷದಿಂದ ಹಿಂದಡಿಯಿಟ್ಟಿದೆ. ಕೊನೆಗೆ ಉಭಯ ಸೇನೆಗಳು ಸಂಘರ್ಷ ಸ್ಥಳವನ್ನು ತೊರೆದಿವೆ. ಗಾಯಗೊಂಡವರ ಪೈಕಿ ಭಾರತೀಯ ಯೋಧರಿಗಿಂತ ಚೀನಾ ಯೋಧರೇ ಜಾಸ್ತಿ ಎಂದು ತಿಳಿದುಬಂದಿದೆ. ಭಾರತ ಸೇನೆಯ ಗಾಯಾಳು ಯೋಧರನ್ನು ಗುವಾಹಟಿಯ ಸೇನಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments