Webdunia - Bharat's app for daily news and videos

Install App

ಭಾರತದಲ್ಲೂ ತಾಲಿಬಾನ್ನಂಥ ಭಯಾನಕ ಪರಿಸ್ಥಿತಿ ಎದುರಾಗುತ್ತೆ: ಚಂದ್ರಶೇಖರ ರಾವ್

Webdunia
ಶುಕ್ರವಾರ, 13 ಜನವರಿ 2023 (16:33 IST)
ಹೈದರಾಬಾದ್ : ಬಿಜೆಪಿ ಸರ್ಕಾರ ಧಾರ್ಮಿಕ ಮತ್ತು ಜಾತಿ ಮತಾಂಧತೆ ಉತ್ತೇಜಿಸಿದರೆ, ಸಮುದಾಯಗಳನ್ನ ಒಡೆಯುವ ಕೆಲಸ ಮಾಡಿದ್ರೆ ಮುಂದೆ ಭಾರತದಲ್ಲೂ ತಾಲಿಬಾನ್ ನಂತಹ ಭಯಾನಕ ಪರಿಸ್ಥಿತಿ ಸೃಷ್ಟಿಯಾಗುತ್ತದೆ ಎಂದು ತೆಲಂಗಾಣ ಸಿಎಂ ಕೆ. ಚಂದ್ರಶೇಖರ ರಾವ್ ಎಚ್ಚರಿಕೆ ನೀಡಿದ್ದಾರೆ.

ನೂತನ ಜಿಲ್ಲಾಧಿಕಾರಿ ಕಚೇರಿ ಉದ್ಘಾಟನಾ ಕಾರ್ಯಕ್ರಮದ ವೇಳೆ ಮಾತನಾಡಿರುವ ಅವರು, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ದ್ವೇಷದಿಂದ ದೇಶದ ಜೀವನಾಡಿಯೇ ಸುಟ್ಟು ಭಸ್ಮವಾಗುವ ಸಂದರ್ಭ ಎದುರಾಗಲಿದೆ. ಆದ್ದರಿಂದ ವಿಶೇಷವಾಗಿ ಯುವಕರು ಜಾಗೃತರಾಗಬೇಕು ಎಂದು ಕರೆ ನೀಡಿದ್ದಾರೆ. 

2014 ರಲ್ಲಿ ರಾಜ್ಯ ರಚನೆಯ ಸಮಯದಲ್ಲಿ ತೆಲಂಗಾಣದ ರಾಜ್ಯ ಆಂತರಿಕ ಉತ್ಪನ್ನವು 5 ಲಕ್ಷ ಕೋಟಿ ರೂ. ಇತ್ತು. ಇಂದು 11.5 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ. ಆದರೆ ಕೇಂದ್ರ ಸರ್ಕಾರವು ತೆಲಂಗಾಣ ರಾಜ್ಯಕ್ಕೆ ಸರಿಸಮನಾಗಿ ಕಾರ್ಯ ನಿರ್ವಹಿಸದೇ ಇರೋದ್ರಿಂದ ರಾಜ್ಯದ ಜಿಎಸ್ಡಿಪಿ ಇಳಿಮುಖವಾಗಿದೆ.

ಕೇಂದ್ರದ ಈ ಅಸಮರ್ಥ ನೀತಿಗಳಿಂದಾಗಿ ತೆಲಂಗಾಣ ರಾಜ್ಯವೊಂದರಲ್ಲೇ 3 ಲಕ್ಷ ಕೋಟಿ ನಷ್ಟವಾಗಿದೆ ಎಂದು ಅರ್ಥಶಾಸ್ತ್ರಜ್ಞರು ಅಂಕಿ-ಅಂಶಗಳ ಸಮೇತ ಮಾಹಿತಿ ನೀಡಿದ್ದಾರೆ. ಮಾಹಿತಿ ಪ್ರಕಾರ, ಜಿಎಸ್ಡಿಪಿ 14.50 ಲಕ್ಷ ಕೋಟಿ ಇರಬೇಕಿತ್ತು. ಆದರೆ 11.50 ಲಕ್ಷ ಕೋಟಿಗೆ ತಲುಪಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments