Webdunia - Bharat's app for daily news and videos

Install App

ಬಿಜೆಪಿ, ಕಾಂಗ್ರೆಸ್ ಮುಕ್ತ ಭಾರತ ಬಯಸಿದಲ್ಲಿ ಮೊದ್ಲು ದೇಶವನ್ನು ಬರಗಾಲ ಮುಕ್ತವಾಗಿಸಲಿ: ಶಿವಸೇನೆ

Webdunia
ಗುರುವಾರ, 28 ಏಪ್ರಿಲ್ 2016 (12:04 IST)
ಒಂದು ವೇಳೆ, ಬಿಜೆಪಿಗೆ ಕಾಂಗ್ರೆಸ್ ಮುಕ್ತ ಭಾರತ ಅಗತ್ಯವಾಗಿದ್ದಲ್ಲಿ ಮೊದಲು ದೇಶವನ್ನು ಬರಗಾಲದಿಂದ ಮುಕ್ತಗೊಳಿಸಬೇಕು ಎಂದು ಶಿವಸೇನೆ ಮುಖಂಡ ಸಂಜಯ್ ರಾವತ್ ಹೇಳಿದ್ದಾರೆ.
 
ದೇಶದಲ್ಲಿ ಬಡತನ, ಬರಗಾಲ ಮತ್ತು ನಿರುದ್ಯೋಗ ಕಾಂಗ್ರೆಸ್ ಪಕ್ಷ ನೀಡಿದ ಉಡುಗೊರೆಗಳಾಗಿವೆ. ಕಳೆದ ಲೋಕಸಭೆ ಚುನಾವಣೆಗೆ ಮುನ್ನ ಪ್ರಧಾನಿ ಮೋದಿ ದೇಶವನ್ನು ಕಾಂಗ್ರೆಸ್ ಮಕ್ತಗೊಳಿಸಲಾಗುವುದು ಎಂದು ಭರವಸೆ ನೀಡಿದ್ದರು.ಲೋಕಸಭೆ ಚುನಾವಣೆಯಲ್ಲಿ ಅದನ್ನು ಸಾಧಿಸಲಾಯಿತು. ದೇಶವನ್ನು ಬರಗಾಲದಿಂದ ಮುಕ್ತಗೊಳಿಸದಿದ್ದಲ್ಲಿ ಕಾಂಗ್ರೆಸ್ ಮುಕ್ತ ಭಾರತವಾಗಲು ಸಾಧ್ಯವಿಲ್ಲ ಎಂದರು
 
ಮಹಾರಾಷ್ಟ್ರದ ಬುಂದೇಲ್‌ಖಂಡ್ ಮತ್ತು ಮರಾಠವಾಡಾ ಪ್ರದೇಶಗಳಲ್ಲಿ ಎದುರಾಗಿರುವ ಬರಗಾಲವನ್ನು ತಿಳಿಯಲು ಪ್ರಧಾನಿ ಮೋದಿ ಪ್ರವಾಸ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.
 
ಏತನ್ಮಧ್ಯೆ, ಮಹಾರಾಷ್ಟ್ರ ಹಣಕಾಸು ಖಾತೆ ಸಚಿವ ಸುಧೀರ್ ಮುಂಗಾಂತಿವಾರ್ ಮಾತನಾಡಿ, ರಾಜ್ಯದಲ್ಲಿರುವ ಸಮಸ್ಯೆಗಳಿಗೆ ಕಾಂಗ್ರೆಸ್ ಪಕ್ಷವೇ ನೇರ ಕಾರಣ. ಬರಗಾಲದಿಂದಾಗಿ ಲಕ್ಷಾಂತರ ಜನರು ತೊಂದರೆ ಎದುರಿಸುತ್ತಿದ್ದಾರೆ ಎಂದು ಗುಡುಗಿದರು.
 
ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನಾಯಕತ್ವದಲ್ಲಿ ಬರಗಾಲ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಚಿವ ಮುಂಗಾಂತಿವಾರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments