Webdunia - Bharat's app for daily news and videos

Install App

ಸೇಡಿಗೆ ಸೇಡು: ಉಗ್ರರ ಶಿಬಿರಗಳ ಮೇಲೆ ಸೇನಾ ದಾಳಿ, ಹಲವರ ಹತ್ಯೆ

Webdunia
ಗುರುವಾರ, 29 ಸೆಪ್ಟಂಬರ್ 2016 (13:38 IST)
ಗಡಿಯೊಳಗೆ ನುಸುಳಲು ಗಡಿರೇಖೆಯ ಬಳಿ ಅವಿತಿದ್ದ ಹಲವಾರು ಉಗ್ರರ ಮೇಲೆ ಸೇನಾಪಡೆಗಳು ದಾಳಿ ನಡೆಸಿ ಹತ್ಯೆಗೈದಿವೆ ಎಂದು ಸೇನಾ ಮೂಲಗಳು ತಿಳಿಸಿವೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗಡಿಯೊಳಗೆ ನುಸುಳಲು ಗಡಿರೇಖೆಯ ಬಳಿ ಉಗ್ರರು ಅವಿತಿದ್ದಾರೆ ಎನ್ನುವ ಖಚಿತ ಮಾಹಿತಿ ಪಡೆದು ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಲಾಗಿತ್ತು. ದಾಳಿಯಲ್ಲಿ ಉಗ್ರರ ಬೆಂಬಲಿಗರು ಹತರಾಗಿದ್ದಾರೆ. ಭಾರತೀಯ ಸೇನಾ ಪಡೆಗಳಲ್ಲಿ ಯಾವುದೇ ಸಾವು-ನೋವು ಉಂಟಾಗಿಲ್ಲ ಎಂದು ತಿಳಿಸಿದ್ದಾರೆ.
 
ಭಾರತದ ಗಡಿಯೊಳಗೆ ನುಸುಳುವ ಎಲ್ಲಾ ಉಗ್ರರನ್ನು ಹತ್ಯೆ ಮಾಡಲಾಗುವುದು ಭಾರತ ವಿರೋಧಿ ಕೃತ್ಯವನ್ನು ಸೇನೆ ಸಹಿಸುವುದಿಲ್ಲ. ಅಕ್ರಮ ನುಸುಳುವಿಕೆಯಂತಹ  ಘಟನೆಗಳು ನಡೆದರೆ ಖಂಡಿತಾ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.
 
ಪಾಕ್ ಆಕ್ರಮಿತ ಕಾಶ್ಮಿರ ಪ್ರದೇಶದ ಖೇಲ್ ಮತ್ತು ಭೀಮ್‌ಭರ್ ಪ್ರದೇಶಗಳಲ್ಲಿ ಉಗ್ರರು ಅಡಗಿದ್ದ ಪ್ರದೇಶಗಳ ಮೇಲೆ ದಾಳಿ ನಡೆಸಿದ ಸೇನಾಪಡೆಗಳು ಆರು ಉಗ್ರರ ಕ್ಯಾಂಪ್‌ಗಳ ಮೇಲೆ ದಾಳಿ ನಡೆಸಿ ಉಗ್ರರನ್ನು ಹೆಡೆಮುರಿಕಟ್ಟಿವೆ. 
 
ರಾಷ್ಟ್ರೀಯ ಭಧ್ರತಾ ಸಲಹೆಗಾರ ಅಜಿತ್ ದೋವಲ್ ನೀಡಿದ ಸಲಹೆ ಮೇರೆಗೆ ಉಗ್ರರ ಶಿಬಿರಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.
 
ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು, ಅಪ್ರಚೋದಿತ ದಾಳಿಗಳಾದರೆ ಅದಕ್ಕೆ ಸಂಪೂರ್ಣ ಬಲದೊಂದಿಗೆ ಉತ್ತರ ನೀಡಿ ಎಂದು ಸೈನಿಕರಿಗೆ ಹೇಳಿದ್ದರು. ಇದರ  ಬೆನ್ನಲ್ಲೇ ಕಳೆದ ರಾತ್ರಿ ಪಾಕಿಸ್ತಾನಿ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈಗೀನ ಮಕ್ಕಳಿಗೆ ಬುದ್ದಿ ಹೇಳುವುದು ಕಷ್ಟ, ಮೊಬೈಲ್ ಗೀಳು ಬಿಡು ಎಂದಿದ್ದಕ್ಕೆ ಯುವತಿ ಹೀಗೇ ಮಾಡೋದಾ

ಪಾಕ್‌ಗೆ ನುಗ್ಗಿ ಹೊಡೆಯಿರಿ: ಅಮಿತ್ ಶಾ ಬಳಿ ಇದನ್ನೇ ಹೇಳಿದ್ದೇನೆ ಎಂದ ಸಚಿವ ಸಂತೋಷ್‌ ಲಾಡ್‌

ಇಂದಿರಾಗೆ ಕಪ್ಪು ಬಾವುಟ ಪ್ರದರ್ಶಿಸಿದ್ದ ಸಿದ್ದರಾಮಯ್ಯರನ್ನು ಉಚ್ಛಾಟಿಸುವ ಧಮ್‌ ಇದ್ಯಾ: ಡಿಕೆಶಿಗೆ ಅಶೋಕ್‌ ಸವಾಲು

ಗಡಿಯಲ್ಲಿ ಮತ್ತೆ ಪಾಕ್‌ ಕಿರಿಕ್‌: ಅಪ್ರಚೋದಿತ ಗುಂಡಿನ ದಾಳಿಗೆ ತಕ್ಕ ಉತ್ತರ ನೀಡಿದ ಭಾರತೀಯ ಸೇನೆ

ಕೋಲ್ಕತ್ತಾದಲ್ಲಿ ಹೊತ್ತಿ ಉರಿದ ಹೋಟೆಲ್‌ ಕಟ್ಟಡ: 15 ಮಂದಿ ಸಜೀವ ದಹನ, ಹಲವರಿಗೆ ಗಾಯ

ಮುಂದಿನ ಸುದ್ದಿ
Show comments