Webdunia - Bharat's app for daily news and videos

Install App

ಸ್ಟಿಂಕ್ ಬಾಂಬ್ ಎಂದರೇನು ಗೊತ್ತಾ.. ಸೇನೆ ಇದನ್ನು ಉಪಯೋಗಿಸಲು ಮುಂದಾಗಿರುವುದೇಕೆ..?

Webdunia
ಶನಿವಾರ, 8 ಜುಲೈ 2017 (11:41 IST)
ನವದೆಹಲಿ:ಕಣಿವೆ ರಾಜ್ಯ ಕಾಶ್ಮೀರದಲ್ಲಿ ಕಲ್ಲುಗಳನ್ನು ಗುಡ್ಡೆ ಹಾಕಿಕೊಂಡು ರಕ್ಷಣಾ ಸಿಬಂದಿ ಮೇಲೆ ಎಸೆಯುವ ಕಿಡಿಗೇಡಿಗಳನ್ನು ನಿಯಂತ್ರಿಸಲು ಭಾರತ ಸೇನೆ ಮಾಡಿದ ಹರಸಾಹಸಗಳೆಲ್ಲವೂ ವಿಫಲವಾಗಿವೆ. ದುಷ್ಕರ್ಮಿಗಳು ಭದ್ರತಾಪಡೆಗಳ ಮೇಲೆ ಕಲ್ಲುತೂರಾಟ ನಡೆಸುತ್ತಲೇ ಇದ್ದಾರೆ. ಈ ಹಿನ್ನಲೆಯಲ್ಲಿ ದುಷ್ಕರ್ಮಿಗಳ ಈ ಕೃತ್ಯ ನಿಯಂತ್ರಣಕ್ಕೆ ಸೇನೆ ಈಗ ಸ್ಟಿಂಕ್ ಬಾಂಬ್ ಪ್ರಯೋಗಕ್ಕೆ ಮುಂದಾಗಿದೆ. ಅಂದರೆ ದುರ್ವಾಸನೆಯ ಬಾಂಬ್ ನ್ನು ಸೇನೆ ಕೈಗೆತ್ತಿಗೊಳ್ಳಲಿದೆ.
 
ಪುಟ್ಟ ಕ್ಯಾಪ್ಸೂಲ್ ನಂತಿರುವ ಈ ಬಾಂಬ್‌ ಅನ್ನು ಪೆಲೆಟ್‌ ಗನ್‌ ಹಾಗೂ ಅಶ್ರುವಾಯು ಪ್ರಯೋಗಿಸಲು ಬಳಸುವ ಗನ್‌ಗಳಲ್ಲಿ ಬುಲೆಟ್‌ ರೀತಿ ಬಳಸಬಹುದು. ಹೀಗೆ ಬಳಸಿದ ಬಾಂಬ್‌ ಉದ್ರಿಕ್ತ ಗುಂಪಿನ ನಡುವೆ ಬಿದ್ದಾಗ ಅದರಿಂದ ಮಾನವನ ಮಲದ ವಾಸನೆ ಹೋಲುವ ದುರ್ಗಂಧ ಹೊರಹೊಮ್ಮುತ್ತದೆ. ಇದನ್ನು ಸಹಿಸಿಕೊಳ್ಳಲಾಗದೆ ಕಲ್ಲೆಸೆತಗಾರರು ದಿಕ್ಕಾಪಾಲಾಗಿ ಓಡುತ್ತಾರೆ ಎಂಬುದು ಸೇನೆಯ ಲಾಜಿಕ್‌.
 
ಉತ್ತರ ಪ್ರದೇಶದ ಕನೌಜ್‌ನ ಫ್ರಾಗ್ರೆನ್ಸ್‌ ಆ್ಯಂಡ್‌ ಫ್ಲೇವರ್‌ ಡೆವಲಪ್‌ಮೆಂಟ್‌ ಸೆಂಟರ್‌ನ (ಎಫ್ಎಫ್ಡಿಸಿ) ವಿಜ್ಞಾನಿಗಳು ಈ 'ದುರ್ಗಂಧದ ಬಾಂಬ್‌ ತಯಾರಿಸಿದ್ದಾರೆ. ಅಮೋನಿಯಂ ಸಲ್ಫೆಡ್‌, ಹೈಡ್ರೋಜನ್‌ ಸಲ್ಫೆಡ್‌ ಒಳಗೊಂಡಂತೆ ಒಟ್ಟು  ಎಂಟು ರಾಸಾಯನಿಕ ಬಳಸಿ ಈ ಬಾಂಬ್‌ ತಯಾರಿಸಲಾಗುತ್ತದೆ. ಬಾಂಬ್‌ ಪ್ರಯೋಗಿಸಿದಾಗ ಸಹಿಸಿಕೊಳ್ಳಲು ಅಸಾಧ್ಯವಾಗಿರುವಂಥ ದುರ್ನಾತ ಅದರಿಂದ ಹೊರಹೊಮ್ಮುತ್ತದೆ. ಆದರೆ ಇದರಿಂದ ಯಾವುದೇ ದುಷ್ಪರಿಣಾಮಗಳಿಲ್ಲ. 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಭಾರತೀಯ ಸೇನೆಯಿಂದ ಮಧ್ಯಾಹ್ನ ಮಹತ್ವದ ಪತ್ರಿಕಾಗೋಷ್ಠಿ

Arecanut price today: ಅಡಿಕೆ ಬೆಲೆ ಇಂದು ಎಷ್ಟಾಗಿದೆ ನೋಡಿ

Share Market: ಕದನವಿರಾಮ ಬೆನ್ನಲ್ಲೇ ಷೇರು ಮಾರುಕಟ್ಟೆ ಹೂಡಿಕೆದಾರರಿಗೆ ಗುಡ್ ನ್ಯೂಸ್

Gold Price today: ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಚೀನಾವೂ ಬೇಡ ಟರ್ಕಿಯೂ ಬೇಡ: ಎಲ್ಲಾ ಬ್ಯಾನ್ ಅಂತಿದ್ದಾರೆ ಭಾರತೀಯರು

ಮುಂದಿನ ಸುದ್ದಿ
Show comments