Webdunia - Bharat's app for daily news and videos

Install App

ಶಾಂತಿ ಸ್ಥಾಪನೆಗಾಗಿ ಭಾರತ-ಚೀನಾ ಅಧಿಕಾರಿಗಳ ಮಹತ್ವದ ಸಭೆ

Webdunia
ಬುಧವಾರ, 16 ಆಗಸ್ಟ್ 2017 (21:00 IST)
ಲಡಾಖ್‌‍ನಲ್ಲಿ ಭಾರತೀಯ ಮತ್ತು ಚೀನೀ ಪಡೆಗಳ ನಡುವಿನ ಚಕಮಕಿಯಾದ ಒಂದು ದಿನದ ನಂತರ, ಇಂದು  ಭಾರತ ಮತ್ತು ಚೀನಾ ಸೇನಾಪಡೆಗಳ ಉನ್ನತ ಅಧಿಕಾರಿಗಳ ಸಭೆ ನಡೆದಿದೆ.
ಇಂದು ಮಧ್ಯಾಹ್ನ ಚೌಸುಲ್‌ನಲ್ಲಿ ಪೂರ್ವ ನಿರ್ಧರಿತ ಬಾರ್ಡರ್ ಪರ್ಸನಲ್ ಮೀಟಿಂಗ್ ನಡೆದಿದೆ ಎಂದು  ಸೇನಾ ಮೂಲಗಳು ತಿಳಿಸಿವೆ.
 
ಸಭೆಯಲ್ಲಿ ಘಟನೆಗಳು ಮತ್ತು ಸಮಸ್ಯೆಗಳ ಬಗ್ಗೆ ಚರ್ಚಿಸಲಾಗಿದೆ "ಶಾಂತಿ ಮತ್ತು ಪರಸ್ಪರ ಸೌಹಾರ್ದತೆ ನಿಭಾಯಿಸಲು ಅಸ್ತಿತ್ವದಲ್ಲಿರುವ ಕಾರ್ಯವಿಧಾನಗಳ ಬಲಪಡಿಸಲು ತೀರ್ಮಾನಿಸಲಾಗಿದೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.
 
ನಿನ್ನೆ, ಲಡಾಖ್‌ನ ಪ್ರಸಿದ್ಧ ಪ್ಯಾಂಗೊಂಗ್ ಸರೋವರದ ದಡದಲ್ಲಿ ಭಾರತೀಯ ಗಡಿ ಪ್ರದೇಶದೊಳಗೆ ನುಗ್ಗಲು ಚೀನಾ ಸೈನಿಕರು ಪ್ರಯತ್ನಿಸಿದಾಗ ಭಾರತೀಯ ಸೇನೆ ತೀವ್ರ ಪ್ರತಿರೋಧ ತೋರಿದ್ದರಿಂದ ಎರಡು ಕಡೆಗಳ ಸೈನಿಕರಿಗೆ ಅಲ್ಪಸ್ವಲ್ಪ ಗಾಯಗಳಾಗಿವೆ ಎಂದು ಮೂಲಗಳು ತಿಳಿಸಿವೆ. 
 
ಪೀಪಲ್ಸ್ ಲಿಬರೇಶನ್ ಆರ್ಮಿ ಸೈನಿಕರು (ಪಿಎಲ್ಎ) ಸಂಜೆ 6 ಗಂಟೆಗೆ ಫಿಂಗರ್‌ ಫೋರ್ ಪ್ರದೇಶದಿಂದ ಮತ್ತು ರಾತ್ರಿ 9 ಗಂಟೆಗೆ ಫಿಂಗರ್ ಫೈವ್ ಪ್ರದೇಶದಿಂದ ಭಾರತದೊಳಗೆ ನುಸುಳಲು ಪ್ರಯತ್ನಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿಎಂ ಸಿದ್ದರಾಮಯ್ಯಗೆ ಆರ್ ಎಸ್ಎಸ್ ಬಗ್ಗೆ ವಿವರವಾಗಿ ಹೇಳಿದ ಬಿವೈ ವಿಜಯೇಂದ್ರ

ಧರ್ಮಸ್ಥಳ ಚಲೋಗೆ ಚಾಲನೆ ನೀಡಿದ ಬಿಜೆಪಿ

ಡಾ ಸಿಎನ್ ಮಂಜುನಾಥ್ ಪ್ರಕಾರ ಹೆಣ್ಣುಮಕ್ಕಳಲ್ಲೂ ಹೃದಯಾಘಾತ ಹೆಚ್ಚಲು ಇದೇ ಕಾರಣ

ಮೋದಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಟೀಕೆ: ನೀವು ಎಮರ್ಜೆನ್ಸಿ ಹೇರಬಹುದಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments