Webdunia - Bharat's app for daily news and videos

Install App

ರೈಲ್ವೆ ಇಲಾಖೆಯಿಂದ ಮತ್ತಷ್ಟು ಸುಲಭವಾಗಲಿದೆ ಪ್ರವಾಸೋದ್ಯಮ....

Webdunia
ಮಂಗಳವಾರ, 21 ಜೂನ್ 2016 (11:52 IST)
ಸಾರ್ವಜನಿಕರು ತಮ್ಮ ಸುಖಕರ ಪ್ರಯಾಣವನ್ನು ಗಂಭೀರವಾಗಿ ಪರಿಗಣಿಸಬಹುದು. ಆದರೆ, ಭಾರತೀಯ ರೈಲ್ವೆ ಪ್ರವಾಸಿಗರ ಹಿತ ವಹಿಸಲು ಸದಾ ಸಿದ್ಧವಿರುತ್ತದೆ ಎಂದು ಪ್ರಯಾಣಿಕರು ಮರೆಯಬಾರದು. ದೇಶದಲ್ಲಿ ಪ್ರವಾಸೋದ್ಯಮವನ್ನು ಬಲಪಡಿಸಲು ಭಾರತೀಯ ರೈಲ್ವೆ ಇಲಾಖೆ ಇತ್ತೀಚಿಗೆ ಸಾಕಷ್ಟು ಹೊಸ ಯೋಜನೆಗಳನ್ನು ರೂಪಿಸಿದೆ.

ಪ್ರಯಾಣಿಕರ ಪ್ರಯಾಣ ಸುಖಕರವಾಗಿರಲೆಂದು ಭಾರತೀಯ ರೈಲ್ವೆ ಕೆಲವು ನಿಯಮಗಳಲ್ಲಿ ಬದಲಾವನೆ ಮಾಡಿದ್ದು, ನೂತನ ನಿಯಮಗಳು ಪ್ರಸಕ್ತ ಸಾಲಿನ ಜುಲೈ 1 ರಿಂದ ಜಾರಿಗೆ ಬರಲಿದೆ.
 
ಪ್ರವಾಸಿ ಜೀವನದಲ್ಲಿ ಹಠಾತ್ ಯೋಜನೆಗಳು ಸಾಮಾನ್ಯ. ಪ್ರಯಾಣಿಕರು ಮುಂಚಿತವಾಗಿಯೇ ಎಲ್ಲಾ ಯೋಜನೆಗಳನ್ನು ರೂಪಿಸುವುದು ಅಸಾಧ್ಯವೆ ಸರಿ. ಜುಲೈ 1 ರಿಂದ ಜಾರಿಗೆ ಬರುವ ಹೊಸ ನಿಯಮದ ಪ್ರಕಾರ, ಪ್ರಯಾಣಿಕರು ಬುಕ್ ಮಾಡಿರುವ ತತ್ಕಾಲ್ ಟಿಕೆಟ್ ಮೇಲೆ 50 ಪ್ರತಿಶತ ಹಣವನ್ನು ಮರುಪಾವತಿ ಪಡೆಯಬಹುದಾಗಿದೆ. 
 
ಸುವಿಧಾ ರೈಲುಗಳಲ್ಲಿ ಸಂಚರಿಸುವ ಸಂದರ್ಭದಲ್ಲಿ ವೆಟಿಂಗ್ ಲಿಸ್ಟ್ ಪರಿಕಲ್ಪನೆ ದೂರವಾಗಲಿದೆ. ಪ್ರಯಾಣಿಕರಿಗೆ ಕೇವಲ ದೃಢಪಡಿಸಿರುವ ಮತ್ತು ಆರ್‌ಎಸಿ ಟಿಕೆಟ್‌ಗಳನ್ನು ಮಾತ್ರ ನೀಡಲಾಗುತ್ತದೆ. ಈ ಪರಿಕಲ್ಪನೆಯಿಂದ ಅಗತ್ಯವಿದ್ದರೆ ಪ್ರಯಾಣಿಕರು ತಮ್ಮ ಪ್ರವಾಸಕ್ಕಾಗಿ ಪರ್ಯಾಯ ಮಾರ್ಗ ಕಂಡುಕೊಳ್ಳುವಲ್ಲಿ ಸಹಕಾರಿಯಾಗಲಿದೆ.
 
ಪ್ರವಾಸಿಗರಿಗೆ ಅನುಕೂಲವಾಗಲೆಂದು ರಾಜಧಾನಿ ಮತ್ತು ಶತಾಬ್ಧಿ ರೈಲುಗಳಲ್ಲಿ ಹೆಚ್ಚು ಬೋಗಿಗಳನ್ನು ಅಳವಡಿಸಲಾಗಿದೆ. ಇದರಿಂದ ಪ್ರಯಾಣಿಕರ ಗರಿಷ್ಠ ಪ್ರಯಾಣ ಸಮಯದಲ್ಲಿ ಟಿಕೆಟ್ ಸುಲಭವಾಗಿ ದೊರೆಯುವುವ ಸಾಧ್ಯತೆಗಳನ್ನು ಹೆಚ್ಚಿಸಲಿದೆ.
 
ಐಆರ್‌ಸಿಟಿಸಿ ವಿವಿಧ ಭಾಷೆಗಳಲ್ಲಿ ಟಿಕೆಟ್ ಬುಕಿಂಗ್ ಪ್ರಾರಂಭಿಸುತ್ತಿದೆ. ಇದರಿಂದ ರೈಲ್ವೆ ಇಲಾಖೆಯಲ್ಲಿ ಹೆಚ್ಚು ಹೆಚ್ಚು ಸಂಖ್ಯೆಯಲ್ಲಿ ಪ್ರಯಾಸಿಗರನ್ನು ಆಕರ್ಷಿಸಲು ಸುಲಭವಾಗುತ್ತದೆ.
 
ಪ್ರಯಾಣಿಕರು ತಮ್ಮ ಗಮ್ಯಸ್ಥಾನ ಏಳುವ ಕರೆ ನೀಡುತ್ತದೆ. ಇದರಿಂದ ಪ್ರಯಾಣಿಕರು ತಮ್ಮ ಗುರಿಯನ್ನು ಸರಿಯಾಗಿ ತಲುಪಲು ಸಹಕಾರಿಯಾಗುತ್ತದೆ. ಈ ಎಲ್ಲ ಹೊಸ ನಿಯಮಗಳನ್ನು ಜಾರಿಗೊಳಿಸುವ ಮೂಲಕ ಕೇಂದ್ರ ರೈಲ್ವೆ ಇಲಾಖೆ ಪ್ರವಾಸೋದ್ಯಮವನ್ನು ಮತಷ್ಟು ಸುಲಭ ಮಾಡಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್ ದಾಳಿಗೆ ಗಟ್ಟಿಯಾಗಿ ನಿಲ್ಲುವಂತೆ ಇರಾನ್ ನಾಯಕ ಖಮೇನಿ ಜನತೆಗೆ ಸಂದೇಶ

ಇರಾನ್ ಬೆನ್ನಲ್ಲೇ ಇಸ್ರೇಲ್‌ನಿಂದ ಭಾರತೀಯರನ್ನು ಕರೆತರಲು ಮುಂದಾದ ಕೇಂದ್ರ ಸರ್ಕಾರ

ರಾಹುಲ್ ಗಾಂಧಿ ಜನ್ಮದಿನಕ್ಕೆ ಡಿಕೆಶಿಯಿಂದ ಕಣ್ಣುಗಳೇ ಗಿಫ್ಟ್

Sonia Gandhi: ಹಿರಿಯ ನಾಯಕಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌

Air India Plane Crash: ತಾಯ್ನಾಡಿಗೆ ತಲುಪಿದ ಸಿಬ್ಬಂದಿ ಲಾಮ್‌ನುಂಥೆಮ್‌ ಮೃತದೇಹ

ಮುಂದಿನ ಸುದ್ದಿ
Show comments