Webdunia - Bharat's app for daily news and videos

Install App

ಭಾರತೀಯರು ಭಾರತಕ್ಕೆ ಬನ್ನಿ : ಇಲಾಖೆ

Webdunia
ಮಂಗಳವಾರ, 15 ಫೆಬ್ರವರಿ 2022 (14:40 IST)
ಕೀವ್ : ರಷ್ಯಾ ಮತ್ತು ಉಕ್ರೇನ್ ನಡುವೆ ಯುದ್ಧದ ಕಾಮೋಡ ದಟ್ಟವಾಗುತ್ತಿದ್ದು, ಉಕ್ರೇನ್ನಲ್ಲಿರುವ ಭಾರತೀಯರು ದೇಶಕ್ಕೆ ಮರಳುವಂತೆ ವಿದೇಶಾಂಗ ಇಲಾಖೆ ಸೂಚನೆ ನೀಡಿದೆ.

ಉಕ್ರೇನ್ ರಾಜಧಾನಿ ಕೀವ್ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಗೆ ಈ ಮಾಹಿತಿ ರವಾನಿಸಿದ್ದು ವಿದ್ಯಾರ್ಥಿಗಳು ಆದ್ಯತೆಯಲ್ಲಿ ದೇಶ ತೊರೆಯುವಂತೆ ಹೇಳಿದೆ.

ಉಕ್ರೇನ್ನಲ್ಲಿ ಅನಿಶ್ಚಿತೆ ಹೆಚ್ಚುತ್ತಿದೆ, ರಷ್ಯಾ ಯಾವುದೇ ಸಂದರ್ಭದಲ್ಲೂ ದಾಳಿ ಮಾಡುವ ಸಾಧ್ಯತೆಗಳಿದ್ದು ಯುದ್ಧದ ವಾತಾವರಣ ಹೆಚ್ಚಾಗಿದೆ. ಹೀಗಾಗಿ ಅಲ್ಲಿ ಅನಿವಾರ್ಯವಲ್ಲದೇ ಭಾರತೀಯರು, ವಿಶೇಷವಾಗಿ ವಿದ್ಯಾರ್ಥಿಗಳು ದೇಶಕ್ಕೆ ಮರಳಿ ಎಂದು ತಿಳಿಸಲಾಗಿದೆ. ಅಲ್ಲದೇ ಉಕ್ರೇನ್ಗೆ ಅನಿವಾರ್ಯವಲ್ಲದ ಪ್ರಯಾಣ ಮಾಡದಂತೆ ಭಾರತೀಯರಿಗೆ ಮನವಿ ಮಾಡಿದೆ.

ಕೀವ್ನಲ್ಲಿರುವ ರಾಯಭಾರ ಕಚೇರಿಯು ಉಕ್ರೇನ್ನಲ್ಲಿರುವ ಭಾರತೀಯರನ್ನು ತನ್ನ ಕಚೇರಿಯೊಂದಿಗೆ ಸಂಪರ್ಕದಲ್ಲಿರಲು ಮನವಿ ಮಾಡಿದೆ, ಅಗತ್ಯವಿದ್ದಾಗ ಸಂಪರ್ಕಿಸುವುದಾಗಿ ಅದು ತಿಳಿಸಿದೆ. ಉಕ್ರೇನ್ನಲ್ಲಿ ವಾಸಿಸುವ ಭಾರತೀಯರಿಗೆ ಎಲ್ಲಾ ಸೇವೆಗಳನ್ನು ಒದಗಿಸುತ್ತದೆ ಎಂದು ಮಾರ್ಗಸೂಚಿಗಳಲ್ಲಿ ಹೇಳಲಾಗಿದೆ.

ಈ ನಡುವೆ ರಷ್ಯಾ-ಉಕ್ರೇನ್ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಭಾರತವೂ ಸೇರಿದಂತೆ ಯಾವುದೇ ರಾಷ್ಟ್ರದ ಪಾತ್ರವನ್ನು ಅಮೆರಿಕ ಸ್ವಾಗತಿಸುತ್ತದೆ ಎಂದು ಅಮೆರಿಕ ಈ ಹಿಂದೆ ಶ್ವೇತಭವನದ ವಕ್ತಾರರು ಹೇಳಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ಕೃಷಿ ಬಿಕ್ಕಟ್ಟಿನಲ್ಲಿರುವಾಗ ವಿಧಾನಸಭೆ ಅಧಿವೇಶನದಲ್ಲಿ ರಮ್ಮಿ ಆಡುತ್ತಾ ಕೂತಾ ಸಚಿವ ಮಾಣಿಕ್ರಾವ್ ಕೊಕಾಟೆ

ಇವನು ಮನುಷ್ಯನ, ಮಗುವಿಗೆ ನಾಯಿ ಕಚ್ಚುತ್ತಿದ್ದರು ಅದನ್ನು ನೋಡಿ ನಗುತ್ತಾ ಕೂತಾ ಮಾಲೀಕ, Viral Video

ನಾನು ಸಚಿವನಾಗಿ, ಉಪ ಮುಖ್ಯಮಂತ್ರಿಯಾಗಿ ನಿಮ್ಮ ಮುಂದೆ ಬಂದಿಲ್ಲ: ಡಿಕೆ ಶಿವಕುಮಾರ್ ಹಿಂಗದಿದ್ಯಾಕೆ

ಒಂದೇ ಯುವತಿಯನ್ನು ಮದುವೆಯಾದ ಸಹೋದರರು, ಇದೇ ರೀತಿ ಹಿಮಾಚಲ ಪ್ರದೇಶದಲ್ಲಿ 6 ವರ್ಷದಲ್ಲಿ 5 ಮದುವೆ

ವಿಪಕ್ಷಗಳ ಬೇಡಿಕೆಯಂತೆ ಲೋಕಸಭೆಯಲ್ಲಿ ಆಪರೇಷನ್ ಸಿಂಧೂರ್, ಪಹಲ್ಗಾಮ್ ದಾಳಿ ಬಗ್ಗೆ ಚರ್ಚೆ

ಮುಂದಿನ ಸುದ್ದಿ
Show comments