ಮುಗಿಯದ ಇಂಡಿಗೋ ವಿಮಾನದ ರಗಳೆ: ಹುಬ್ಬಳ್ಳಿಯಲ್ಲಿ ವಧು ವರರಿಲ್ಲದೇ ನಡೆದ ನಡೆದ ಆರತಕ್ಷತೆ

Krishnaveni K
ಶುಕ್ರವಾರ, 5 ಡಿಸೆಂಬರ್ 2025 (11:25 IST)
Photo Credit: X
ನವದೆಹಲಿ: ಕಳೆದ ಮೂರು ದಿನಗಳಲ್ಲಿ 1000 ಕ್ಕೂ ಅಧಿಕ ಇಂಡಿಗೋ ವಿಮಾನ ರದ್ದಾಗಿದೆ. ಇದರಿಂದ ಪ್ರಯಾಣಿಕರು ಪರದಾಡುವಂತಾಗಿದೆ. ಹುಬ್ಬಳ್ಳಿಯಲ್ಲಂತೂ ವಧು ವರರಿಲ್ಲದೇ ಆರತಕ್ಷತೆ ನಡೆದಿದೆ.

ದೇಶದಾದ್ಯಂತ ಇಂಡಿಗೋ ವಿಮಾನ ರದ್ದತಿಯಿಂದ ಸಾಕಷ್ಟು ಜನರಿಗೆ ಸಮಸ್ಯೆಯಾಗಿದೆ. ಯಾವುದೋ ಕಾರ್ಯಕ್ರಮಗಳಿಗೆ, ಅನಿವಾರ್ಯ ಕಾರಣಗಳಿಗೆ ಪ್ರಯಾಣ ಮಾಡಬೇಕಾದವರು ತೊಂದರೆ ಅನುಭವಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ಇದುವರೆಗೆ ಸುಮಾರು 100 ವಿಮಾನಗಳು ರದ್ದಾಗಿವೆ. ಇದರಿಂದಾಗಿ ತುರ್ತಾಗಿ ತೆರಳಬೇಕಾದ ಪ್ರಯಾಣಿಕರು ಹಿಡಿಶಾಪ ಹಾಕುತ್ತಿದ್ದಾರೆ.

ಈ ಸಮಸ್ಯೆ ಒಂದು ಮದುವೆಗೂ ತಟ್ಟಿದೆ. ಭುವನೇಶ್ವರದಲ್ಲಿ ಮದುವೆಯಾಗಿದ್ದ ಜೋಡಿಯೊಂದು ಹುಬ್ಬಳ್ಳಿಯಲ್ಲಿ ನಡೆಯಬೇಕಿದ್ದ ತಮ್ಮ ಆರತಕ್ಷತೆಗೆ ಡಿಸೆಂಬರ್ 2 ಕ್ಕೆ ಟಿಕೆಟ್ ಬುಕ್ ಮಾಡಿದ್ದರು. ಆದರೆ ವಿಮಾನ ರದ್ದಾಗಿದ್ದರಿಂದ ತಮ್ಮ ಆರತಕ್ಷತೆಗೆ ತಾವೇ ಬರಲಾಗದ ಸ್ಥಿತಿಯಾಗಿದೆ. ಇದರಿಂದಾಗಿ ವಧು ವರರು ಡ್ರೆಸ್ ಮಾಡಿಕೊಂಡು ಕೂತು ಆನ್ ಲೈನ್ ನಲ್ಲೇ ಆರತಕ್ಷತೆ ಮಾಡಿಕೊಳ್ಳುವಂತಾಗಿದೆ. ಮದುವೆ ಛತ್ರದಲ್ಲಿ ವಧು ಮತ್ತು ವರನ ಸ್ಕ್ರೀನ್ ಹಾಕಿ ಬಂಧುಗಳು ಬಂದು ಹರಸಿ ಹೋಗಿದ್ದಾರೆ.

ಇಂಡಿಗೋ ವಿಮಾನ ರದ್ದು, ವಿಳಂಬದಿಂದಾಗಿ ಸಾಕಷ್ಟು ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿರುವ ಹಿನ್ನಲೆಯಲ್ಲಿ ಕ್ಷಮೆ ಕೇಳಿರುವ ಸಂಸ್ಥೆ ಸಮಸ್ಯೆ ಸರಿಪಡಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಪ್ರಕಟಣೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತಕ್ಕೆ ಬಂದ ವ್ಲಾಡಿಮಿರ್ ಪುಟಿನ್ ಎಲ್ಲೂ ಮಾಡದ ಕೆಲಸವನ್ನು ಇಲ್ಲಿ ಮಾಡಿದ್ರು

ಮತಿಗೇಡಿಗಳಾದ್ರೂ ಪರವಾಗಿಲ್ಲ, ಲಜ್ಜೆಗೇಡಿಯಾಗಬಾರದು: ಸಿದ್ದರಾಮಯ್ಯಗೆ ಅಶೋಕ್ ಟಾಂಗ್

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕುರ್ಚಿ ಫೈಟ್ ಗೆ ಟ್ವಿಸ್ಟ್ ಕೊಡ್ತಿರೋದು ಇವರೇ

Karnataka Weather: ಚಳಿ ನಡುವೆಯೂ ಇಂದು ಈ ಜಿಲ್ಲೆಗಳಲ್ಲಿ ಮಳೆ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments