Select Your Language

Notifications

webdunia
webdunia
webdunia
webdunia

ಇಂದಿರಾ ಗಾಂಧಿ ಭಾರತ ಮಾತೆ ಹೇಳಿಕೆ: ಸ್ಪಷ್ಟನೆ ನೀಡಿದ ಕೇಂದ್ರ ಸಚಿವ ಸುರೇಶ್ ಗೋಪಿ

Suresh Gopi

Sampriya

ಕೇರಳ , ಭಾನುವಾರ, 16 ಜೂನ್ 2024 (17:51 IST)
Photo Courtesy X
ಕೇರಳ: ಇಂದಿರಾ ಗಾಂಧಿ ಅವರನ್ನು ಭಾರತದ ಮಾತೆ ಎಂದು ಬಣ್ಣಿಸಿದ್ದಕ್ಕೆ ಕೇಂದ್ರ ಸಚಿವ ಸುರೇಶ್​ ಗೋಪಿ ಅವರು ಇಂದು ಸ್ಪಷ್ಟನೆ ನೀಡಿದ್ದಾರೆ.

ಇಂದಿರಾ ಗಾಂಧಿ ಅವರನ್ನು ಹಾಡಿ ಹೊಗಳಿದ್ದ ಕೇಂದ್ರ ಸಚಿವ ಸುರೇಶ್​ ಗೋಪಿ ಅವರ ಹೇಳಿಕೆ ಚರ್ಚೆಗೀಡು ಮಾಡಿದೆ. ಇಂದಿರಾ ಗಾಂಧಿ ಅವರು ಭಾರತದ ಮಾತೆ ಎಂದಿದ್ದರು. ಆದರೆ, ಇದೀಗ ತಮ್ಮ ಹೇಳಿಕೆಯನ್ನು ಮಾಧ್ಯಮಗಳು ತಿರುಚಿವೆ ಎಂದು ಉಲ್ಟಾ ಹೊಡೆದಿದ್ದಾರೆ.

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರನ್ನು ಕಾಂಗ್ರೆಸ್ ಪಕ್ಷದ ತಾಯಿ ಎಂದ ನನ್ನ ಹೇಳಿಕೆಯನ್ನು ಮಾಧ್ಯಮಗಳು, ಭಾರತ ಮಾತೆ ಎಂದು ಹೇಳಿದ್ದಾಗಿ ತಪ್ಪಾಗಿ ಅರ್ಥೈಸಿವೆ ಎಂದು ಕೇಂದ್ರ ಸಚಿವ, ಬಿಜೆಪಿ ಮುಖಂಡ ಸುರೇಶ್ ಗೋಪಿ ಹೇಳಿದರು.

ಈ ಕುರಿತಂತೆ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ ಅವರು, ಭಾಷೆಯ ಸಂದರ್ಭೋಚಿತ ಅರ್ಥವನ್ನು ಗ್ರಹಿಸಲು ಸಾಧ್ಯವಿಲ್ಲವೇ ಎಂದು ಸುದ್ದಿಗಾರರನ್ನೇ ಪ್ರಶ್ನಿಸಿದರು.

ಕೇರಳದಲ್ಲಿ ಕಾಂಗ್ರೆಸ್ ಪಕ್ಷದ ತಂದೆ ಕೆ. ಕರುಣಾಕರನ್, ದೇಶದಲ್ಲಿ ಇಂದಿರಾ ಗಾಂಧಿ ಎಂದು ನಾನು ಆಗ ಹೇಳಿದ್ದೆ. ನಾನೇನು ಹೇಳಿದ್ದೇನೋ ಅದನ್ನು ಹೃದಯದಿಂದ ಹೇಳಿದ್ದೇನೆ ಎಂದರು.

ಕರುಣಾಕರನ್‌ ಮೇಲೆ ಇರುವ ಗೌರವದಿಂದಾಗಿ ಸ್ಮಾರಕಕ್ಕೆ ಭೇಟಿ ನೀಡಿರುವುದಾಗಿಯೂ ತಿಳಿಸಿದ್ದರು.

ಇಲೋಕಸಭೆ ಚುನಾವಣೆಯಲ್ಲಿ ಸುರೇಶ್​ ಗೋಪಿ ಅವರು ಬಿಜೆಪಿಯಿಂದ ತ್ರಿಶೂರ್ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಈ ಮೂಲಕ ಕೇರಳದಲ್ಲಿ ಮೊಟ್ಟ ಮೊದಲ ಬಾರಿಗೆ ಬಿಜೆಪಿ ಖಾತೆ ತೆರೆಯುವಂತೆ ಮಾಡಿದ್ದರು. ಇದಾದ ಬಳಿಕ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಕೇಂದ್ರ ಸಂಪುಟದಲ್ಲಿ ಸ್ಥಾನ ನೀಡಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂಧನ ದರ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ