Webdunia - Bharat's app for daily news and videos

Install App

ಇಂದಿರಾ ಗಾಂಧಿ ಭಾರತ ಮಾತೆ ಹೇಳಿಕೆ: ಸ್ಪಷ್ಟನೆ ನೀಡಿದ ಕೇಂದ್ರ ಸಚಿವ ಸುರೇಶ್ ಗೋಪಿ

Sampriya
ಭಾನುವಾರ, 16 ಜೂನ್ 2024 (17:51 IST)
Photo Courtesy X
ಕೇರಳ: ಇಂದಿರಾ ಗಾಂಧಿ ಅವರನ್ನು ಭಾರತದ ಮಾತೆ ಎಂದು ಬಣ್ಣಿಸಿದ್ದಕ್ಕೆ ಕೇಂದ್ರ ಸಚಿವ ಸುರೇಶ್​ ಗೋಪಿ ಅವರು ಇಂದು ಸ್ಪಷ್ಟನೆ ನೀಡಿದ್ದಾರೆ.

ಇಂದಿರಾ ಗಾಂಧಿ ಅವರನ್ನು ಹಾಡಿ ಹೊಗಳಿದ್ದ ಕೇಂದ್ರ ಸಚಿವ ಸುರೇಶ್​ ಗೋಪಿ ಅವರ ಹೇಳಿಕೆ ಚರ್ಚೆಗೀಡು ಮಾಡಿದೆ. ಇಂದಿರಾ ಗಾಂಧಿ ಅವರು ಭಾರತದ ಮಾತೆ ಎಂದಿದ್ದರು. ಆದರೆ, ಇದೀಗ ತಮ್ಮ ಹೇಳಿಕೆಯನ್ನು ಮಾಧ್ಯಮಗಳು ತಿರುಚಿವೆ ಎಂದು ಉಲ್ಟಾ ಹೊಡೆದಿದ್ದಾರೆ.

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರನ್ನು ಕಾಂಗ್ರೆಸ್ ಪಕ್ಷದ ತಾಯಿ ಎಂದ ನನ್ನ ಹೇಳಿಕೆಯನ್ನು ಮಾಧ್ಯಮಗಳು, ಭಾರತ ಮಾತೆ ಎಂದು ಹೇಳಿದ್ದಾಗಿ ತಪ್ಪಾಗಿ ಅರ್ಥೈಸಿವೆ ಎಂದು ಕೇಂದ್ರ ಸಚಿವ, ಬಿಜೆಪಿ ಮುಖಂಡ ಸುರೇಶ್ ಗೋಪಿ ಹೇಳಿದರು.

ಈ ಕುರಿತಂತೆ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ ಅವರು, ಭಾಷೆಯ ಸಂದರ್ಭೋಚಿತ ಅರ್ಥವನ್ನು ಗ್ರಹಿಸಲು ಸಾಧ್ಯವಿಲ್ಲವೇ ಎಂದು ಸುದ್ದಿಗಾರರನ್ನೇ ಪ್ರಶ್ನಿಸಿದರು.

ಕೇರಳದಲ್ಲಿ ಕಾಂಗ್ರೆಸ್ ಪಕ್ಷದ ತಂದೆ ಕೆ. ಕರುಣಾಕರನ್, ದೇಶದಲ್ಲಿ ಇಂದಿರಾ ಗಾಂಧಿ ಎಂದು ನಾನು ಆಗ ಹೇಳಿದ್ದೆ. ನಾನೇನು ಹೇಳಿದ್ದೇನೋ ಅದನ್ನು ಹೃದಯದಿಂದ ಹೇಳಿದ್ದೇನೆ ಎಂದರು.

ಕರುಣಾಕರನ್‌ ಮೇಲೆ ಇರುವ ಗೌರವದಿಂದಾಗಿ ಸ್ಮಾರಕಕ್ಕೆ ಭೇಟಿ ನೀಡಿರುವುದಾಗಿಯೂ ತಿಳಿಸಿದ್ದರು.

ಇಲೋಕಸಭೆ ಚುನಾವಣೆಯಲ್ಲಿ ಸುರೇಶ್​ ಗೋಪಿ ಅವರು ಬಿಜೆಪಿಯಿಂದ ತ್ರಿಶೂರ್ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಈ ಮೂಲಕ ಕೇರಳದಲ್ಲಿ ಮೊಟ್ಟ ಮೊದಲ ಬಾರಿಗೆ ಬಿಜೆಪಿ ಖಾತೆ ತೆರೆಯುವಂತೆ ಮಾಡಿದ್ದರು. ಇದಾದ ಬಳಿಕ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಕೇಂದ್ರ ಸಂಪುಟದಲ್ಲಿ ಸ್ಥಾನ ನೀಡಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments