Webdunia - Bharat's app for daily news and videos

Install App

ಇಂದಿರಾ ಹತ್ಯೆಯಾದ ಮೇಲೆ ಗಂಡ ಮಕ್ಕಳನ್ನು ರಾಜಕೀಯದಿಂದ ದೂರವಿಡಲು ಬಯಸಿದ್ದೆ: ಸೋನಿಯಾ ಗಾಂಧಿ

Webdunia
ಶನಿವಾರ, 16 ಡಿಸೆಂಬರ್ 2017 (11:48 IST)
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಹುದ್ದೆಯಿಂದ ನಿವೃತ್ತಿಗೊಂಡ ಸೋನಿಯಾ ಗಾಂಧಿ ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಪುತ್ರನಿಗೆ ಅಧಿಕಾರ ಹಸ್ತಾಂತರಿಸಿ ಮಾತನಾಡಿದ್ದಾರೆ.
 

ರಾಜೀವ್ ರನ್ನು ಮದುವೆಯಾಗಿ ಭಾರತಕ್ಕೆ ಬಂದಾಗ ನನಗೆ ರಾಜಕೀಯದ ಪರಿಚಯವಿರಲಿಲ್ಲ. ಆದರೆ ಅತ್ತೆ ಇಂದಿರಾ ಮಗಳಂತೆ ನೋಡಿದರು. ಭಾರತದ ಸಂಸ್ಕೃತಿ ಕಲಿಸಿದರು. ಅವರ ಹತ್ಯೆಯಾದಾಗ ಅಮ್ಮನನ್ನು ಕಳೆದುಕೊಂಡ ಹಾಗಾಗಿತ್ತು. ಆ ಸಂದರ್ಭದಲ್ಲಿ ಗಂಡ, ಮಕ್ಕಳನ್ನು ರಾಜಕೀಯದಿಂದ ದೂರವಿಡಲು ಯತ್ನಿಸಿದ್ದೆ. ಮುಂದೆ ಅಧ್ಯಕ್ಷೆಯಾದಾಗಲೂ ಹೆದರಿಕೆಯಾಗಿತ್ತು ಎಂದರು.

ನಂತರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ನಾವು ಈಗ ಅಧಿಕಾರ ಕಳೆದುಕೊಂಡಿರಬಹುದು. ಆದರೆ ಇದಕ್ಕೆಲ್ಲಾ ಹೆದರುವವರಲ್ಲ ಎಂದರು. ಸೋನಿಯಾ ಭಾಷಣ ಆರಂಭಿಸುವಾಗ ಕೆಲ ಕಾಲ ಪಟಾಕಿ ಸದ್ದು ಜೋರಾಗಿದ್ದರಿಂದ ಕೆಲವು ಕ್ಷಣ ಭಾಷಣ ನಿಲ್ಲಿಸಬೇಕಾಯಿತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments