Webdunia - Bharat's app for daily news and videos

Install App

Indore murder: ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದಳು: ಇಂಧೋರ್ ನಲ್ಲಿ ಪತ್ನಿಯ ಚಿಲ್ಲಿಂಗ್ ಮರ್ಡರ್ ಕತೆ

Krishnaveni K
ಸೋಮವಾರ, 9 ಜೂನ್ 2025 (09:16 IST)
Photo Credit: X
ಇಂಧೋರ್: ಹನಿಮೂನ್ ಗೆಂದು ಕನಸು ಹೊತ್ತು ಹೊರಟಿದ್ದ ಗಂಡ. ಆದರೆ ಹೆಂಡತಿ ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದ್ದಳು. ಇಂಧೋರ್ ನಲ್ಲಿ ಹನಿಮೂನ್ ಗೆಂದು ಹೋಗಿದ್ದ ದಂಪತಿ ಕೊಲೆ ಪ್ರಕರಣಕ್ಕೆ ಈಗ ಟ್ವಿಸ್ಟ್ ಸಿಕ್ಕಿದೆ.

ರಾಜ ರಘುವಂಶಿ ಮತ್ತು ಸೋನಮ್ ಆಗ ತಾನೇ ಮದುವೆಯಾಗಿ ಹನಿಮೂನ್ ಗೆಂದು ಮೇಘಾಲಯಕ್ಕೆ ತೆರಳಿದ್ದರು. ಅಲ್ಲಿ ಪತಿ ರಾಜ ರಘುವಂಶಿ ಕೊಲೆಯಾಗಿದ್ದರು. ಪತ್ನಿ ನಾಪತ್ತೆಯಾಗಿದ್ದಳು. ಈ ಪ್ರಕರಣ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿತ್ತು.

Photo Credit: X
ಇದೀಗ ಎರಡು ವಾರಗಳ ನಂತರ ಪತ್ನಿ ಸೋನಂ ಮೇಘಾಲಯ ಪೊಲೀಸರ ಮುಂದೆ  ಶರಣಾಗತಿಯಾಗಿದ್ದು ತಾನು ಮಾಡಿದ ತಪ್ಪನ್ನು ಒಪ್ಪಿಕೊಂಡಿದ್ದಾಳೆ. ಪತಿಯನ್ನು ಕೊಲೆ ಮಾಡಲು ನಾಲ್ಕೈದು ಗೂಂಡಾಗಳನ್ನು ಗೊತ್ತು ಮಾಡಿದ್ದಾಗಿ ತಿಳಿಸಿದ್ದಾಳೆ.

ಇದೀಗ ಕೊಲೆಗೆ ಸಹಕರಿಸಿದ್ದ ಮೂವರು ಗೂಂಡಾಗಳನ್ನೂ ಬಂಧಿಸಲಾಗಿದೆ. ಶಂಕಿತರು ಪತ್ನಿಯೇ ತಮಗೆ ಸುಫಾರಿ ಕೊಟ್ಟಿದ್ದಾಗಿ ಹೇಳಿದ್ದರು. ಮೇ 23 ರಂದು ಹನಿಮೂನ್ ಗೆಂದು ತೆರಳಿದ್ದ ಪತ್ನಿ ನಾಪತ್ತೆಯಾಗಿದ್ದಳು. ಜೂನ್ 2 ರಂದು ಪತಿ ರಘುವಂಶಿ ಮೃತದೇಹ ಚಿರಾಪುಂಜಿಯ ಸೋಹರಿಮ್ ಕಣಿವೆಯಲ್ಲಿ ಪತ್ತೆಯಾಗಿತ್ತು. ಘಟನೆ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ರಘುವಂಶಿ ಮನೆಯವರು ಪ್ರಧಾನಿ ಮೋದಿಗೆ ಪತ್ರ ಬರೆದಿದ್ದರು.

ಕೊನೆಯದಾಗಿ ದಂಪತಿ ನಂಗ್ರಿಯಾತ್ ನಿಂದ ಮೌಲಾಖಿಯಾತ್ ಕಡೆಗೆ 3000 ಮೆಟ್ಟಿಲುಗಳನ್ನು ಏರುತ್ತಿರುವುದನ್ನು ನೋಡಿದ್ದಾಗಿ ಪ್ರತ್ಯಕ್ಷರ್ಶಿ ಗೈಡ್ ಒಬ್ಬರು ಹೇಳಿದ್ದರು. ಅದರಂತೆ ತನಿಖೆ ನಡೆಸಿದ ಪೊಲೀಸರಿಗೆ ಗಂಡನ ಮೃತದೇಹ ಪತ್ತೆಯಾಗಿತ್ತು.ಅವರ ಜೊತೆಗೆ ಇನ್ನಿಬ್ಬರು ಇದ್ದಿದ್ದಾಗಿ ಆತ ಹೇಳಿದ್ದ. ಆದರೆ ಅವರು ಹಿಂದಿಯಲ್ಲಿ ಮಾತನಾಡುತ್ತಿದ್ದುದರಿಂದ ನನಗೆ ಅವರ ಮಾತು ಅರ್ಥವಾಗಲಿಲ್ಲ ಎಂದಿದ್ದ. ಆತನ ಮಾಹಿತಿ ಅನ್ವಯ ಪೊಲೀಸರು ತನಿಖೆ ನಡೆಸಿದ್ದರು. ಈಗ ಶಂಕಿತರಲ್ಲಿ ಓರ್ವನನ್ನು ಬಂಧಿಸಿದಾಗ ಪತ್ನಿಯ ಕೈವಾಡ ಬಯಲಾಗಿತ್ತು. ಇದೀಗ ಪತ್ನಿಯೇ ಪೊಲೀಸರ ಮುಂದೆ ಶರಣಾಗಿ ತನ್ನ ತಪ್ಪೊಪ್ಪಿಕೊಂಡಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore murder: ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದಳು: ಇಂಧೋರ್ ನಲ್ಲಿ ಪತ್ನಿಯ ಚಿಲ್ಲಿಂಗ್ ಮರ್ಡರ್ ಕತೆ

Siddaramaiah: ಕಮಿಷನರ್ ಭದ್ರತೆ ಕೊಡ್ಬೇಕಿತ್ತು, ನಂದೇನು ತಪ್ಪಿದೆ ಎಂದ ಸಿಎಂ: ಆರ್ಡರ್ ಕೊಟ್ಟಿದ್ದು ನೀವಲ್ವಾ ಎಂದ ಪಬ್ಲಿಕ್

Karnataka Weather: ಇಂದಿನಿಂದ ಈ ಜಿಲ್ಲೆಗಳಿಗೆ ಭಾರೀ ಮಳೆ, ಹೈ ಅಲರ್ಟ್ ಘೋಷಣೆ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಮುಂದಿನ ಸುದ್ದಿ
Show comments