Webdunia - Bharat's app for daily news and videos

Install App

ಇಂದೋರ್ ದೇವಾಲಯ ದುರಂತ : ಸಾವಿನ ಸಂಖ್ಯೆ 35ಕ್ಕೆ ಏರಿಕೆ

Webdunia
ಶುಕ್ರವಾರ, 31 ಮಾರ್ಚ್ 2023 (11:09 IST)
ಭೋಪಾಲ್ : ಮಧ್ಯಪ್ರದೇಶದ ಇಂದೋರ್ನಲ್ಲಿ ದೇವಾಲಯವೊಂದರಲ್ಲಿ ನೆಲ ಕುಸಿದ ಪರಿಣಾಮ ಅದರಡಿಯಲ್ಲಿದ್ದ ಸುಮಾರು 40 ಅಡಿ ಆಳದ ಬಾವಿಗೆ ಭಕ್ತರು ಬಿದ್ದು ಸಾವನ್ನಪ್ಪಿರುವ ಘಟನೆ ದುರಂತವೇ ಎನಿಸಿಕೊಂಡಿದೆ. ಇಲ್ಲಿಯವರೆಗೆ ಸಾವನ್ನಪ್ಪಿರುವವರ ಸಂಖ್ಯೆ 35 ಕ್ಕೆ ಏರಿಕೆಯಾಗಿದೆ.
 
ವರದಿಗಳ ಪ್ರಕಾರ ಗುರುವಾರ ರಾಮನವಮಿಯ ಹಿನ್ನೆಲೆ ನಗರದ ಬಾಳೇಶ್ವರ ಮಹಾದೇವ ದೇವಾಲಯದಲ್ಲಿ ಹೆಚ್ಚಿನ ಭಕ್ತರು ಆಗಮಿಸಿದ್ದರು. ದೇವಾಲಯದ ಆವರಣದಲ್ಲಿ ಮೆಟ್ಟಿಲು ಬಾವಿಯಿದ್ದು, ಅದಕ್ಕೆ ಮೇಲ್ಛಾವಣಿ ಹಾಕಿ ಮುಚ್ಚಲಾಗಿತ್ತು. ಆದರೆ ಕಳೆದ ದಿನ ಹೆಚ್ಚಿನ ಸಂಖ್ಯೆಯಲ್ಲಿ ಜನರಿದ್ದ ಕಾರಣ ಬಾವಿಯ ಮೇಲ್ಛಾವಣಿ ಭಾರ ತಡೆದುಕೊಳ್ಳಲಾರದೇ ಕುಸಿದುಬಿಟ್ಟಿದೆ. ಈ ವೇಳೆ ಅಲ್ಲಿ ನೆರೆದಿದ್ದ ಭಕ್ತರು ಬಾವಿಯೊಳಗೆ ಬಿದ್ದಿದ್ದಾರೆ.

ಘಟನೆ ನಡೆದ ತಕ್ಷಣಕ್ಕೆ ಪ್ರತ್ಯಕ್ಷದರ್ಶಿಗಳು ಸುಮಾರು 25 ಜನರು ಬಾವಿಯೊಳಗೆ ಬಿದ್ದಿದ್ದಾಗಿ ತಿಳಿಸಿದ್ದರು. ಆದರೆ ಅಂದಾಜಿಸಿದ್ದಕ್ಕಿಂತಲೂ ಹೆಚ್ಚು ಜನರು ಬಾವಿಯೊಳಗೆ ಬಿದ್ದಿದ್ದರು ಎಂಬುದು ತಿಳಿದುಬಂದಿದೆ. ಈಗಾಗಲೇ ಮೃತರ ಸಂಖ್ಯೆ 35ಕ್ಕೆ ಏರಿದೆ. ಬಾವಿಗೆ ಬಿದ್ದಿದ್ದ 14 ಜನರ ರಕ್ಷಣೆ ಮಾಡಲಾಗಿದೆ. ಒಬ್ಬರು ಇನ್ನೂ ನಾಪತ್ತೆಯಾಗಿದ್ದಾರೆ ಎನ್ನಲಾಗಿದ್ದು, ಅವರಿಗಾಗಿ ಹುಡುಕಾಟ ಮುಂದುವರಿಸಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Covid 19: ಕೋವಿಡ್‌ಗೆ ರಾಜ್ಯದಲ್ಲಿ ಮೊದಲ ಬಲಿ, ಹೆಚ್ಚಿದ ಆತಂಕ

ಅವರೇ ಹೇಳಿರುವಂತೆ ನಾಯಿಯೇ ನಾರಾಯಣ, ಹಾಗಾದ್ರೆ ನಾರಾಯಣಸ್ವಾಮಿಯನ್ನು ಏನೆಂದು ಕರೆಯಬೇಕು: ಪ್ರಿಯಾಂಕ್ ಖರ್ಗೆ

Covid 19: ಭಾರತದ ಈ ನಗರದಲ್ಲಿ ಹೆಚ್ಚುತ್ತಿದೆ ಕೋವಿಡ್ 19 ಪ್ರಕರಣಗಳು

ಚಾಮರಾಜಪೇಟೆ ಪಾಕಿಸ್ತಾನದಲ್ಲಿದೆಯೋ ಭಾರತದಲ್ಲಿದೆಯೋ: ಬಿಜೆಪಿ ಆಕ್ರೋಶ

Karnataka Weather:ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ಎಡೆಬಿಡದೆ ಸುರಿಯುತ್ತಿದೆ ಮಳೆ

ಮುಂದಿನ ಸುದ್ದಿ
Show comments