Webdunia - Bharat's app for daily news and videos

Install App

ಅಳಿಯನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಸೋಂಕಿತ ಅತ್ತೆ!

Webdunia
ಸೋಮವಾರ, 11 ಏಪ್ರಿಲ್ 2022 (12:25 IST)
ಡೆಹ್ರಾಡೂನ್ : ಹೆಚ್ಐವಿ ಸೋಂಕಿತ ಮಹಿಳೆಯೊಬ್ಬಳು ತನ್ನ ಸ್ವಂತ ಸೋದರಳಿಯನ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಉತ್ತರಾಖಂಡದ ಉಧಮ್ ಸಿಂಗ್ ನಗರದಲ್ಲಿ ನಡೆದಿದೆ.
 
ಪೊಲೀಸರ ಪ್ರಕಾರ, ಸೋದರಳಿಯನ ತಂದೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅವಳು ನನ್ನ ಮಗನ ಜೊತೆ ಬಲವಂತವಾಗಿ ದೈಹಿಕ ಸಂಬಂಧವನ್ನು ಬೆಳೆಸಿದ್ದಾಳೆ.

ಈ ವಿಷಯವನ್ನು ಯಾರಿಗಾದರೂ ತಿಳಿಸಿದರೆ ಬಲವಂತದ ಸುಳ್ಳು ಕೇಸು ಹಾಕಿ ಮಾನಹಾನಿ ಮಾಡುವುದಾಗಿ ಬ್ಲಾಕ್ಮೇಲ್ ಮಾಡುತ್ತಿದ್ದಳು ಎಂದು ದೂರಿನಲ್ಲಿ ತಿಳಿಸಿದ್ದಾರೆ. 

ನಂತರ ಬಾಲಕ ತನ್ನ ತಾಯಿಯೊಂದಿಗೆ ನಡೆದ ಘಟನೆಯನ್ನು ವಿವರಿಸಿದ್ದಾನೆ. ಆರೋಪಿ ಮಹಿಳೆ ಪಿಲಿಭಿತ್ನಲ್ಲಿ ವಾಸಿಸುತ್ತಿದ್ದಳು. ಹೋಳಿ ಹಬ್ಬದ ವೇಳೆ ಕುಟುಂಬ ಸಮೇತ ತಮ್ಮ ಊರಿಗೆ ಬಂದಿದ್ದರು. ಈ ವೇಳೆ ಮನೆಯಲ್ಲಿ ಯಾರೂ ಇಲ್ಲದ ಸಂದಂರ್ಭ ನೋಡಿಕೊಂಡು ನನ್ನ ಮಗನ ಮೇಲೆ ಮೊದಲ ಬಾರಿ ದೌಜನ್ಯ ಎಸಗಿದ್ದಾಳೆ ಎಂದು ಸಂತ್ರಸ್ತನ ತಂದೆ ಹೇಳಿದ್ದಾರೆ. 

ನನ್ನ ಒಪ್ಪಿಗೆಯಿಲ್ಲದೆ ಅತ್ತೆ ನನ್ನ ಜೊತೆ ಇದನ್ನೆಲ್ಲಾ ಮಾಡಿದ್ದಾಳೆ ಎಂದು ಬಾಲಕ ಹೇಳಿದ್ದಾನೆ. ಈ ಹಿಂದೆ ಬಾಲಕನಿಗೆ ಅವಳು ಮಾನ ಹಾನಿ ಮಾಡುವುದಾಗಿ ಬೆದರಿಕೆ ಹಾಕಿದ್ದಳು.

ತಂದೆಯ ಪ್ರಕಾರ, ಆರೋಪಿ ಮಹಿಳೆ ಈ ಹಿಂದೆ ರುದ್ರಪುರಕ್ಕೆ ಬಂದಿದ್ದಳು, ಅಲ್ಲಿಯೂ ಅವನೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದಾಳೆ. ಈ ಹಿಂದೆ ಎಚ್ಐವಿ ಸೋಂಕಿನಿಂದಾಗಿ ಡಿಸೆಂಬರ್ ತಿಂಗಳಲ್ಲಿ ಬಾಲಕನ ಮಾವ ನಿಧನರಾಗಿದ್ದರು.

ಅವನಿಗೆ ಮದುವೆಯಾಗಿ ಐದು ವರ್ಷವಾಗಿತ್ತು. ಮದುವೆಯಾಗಿ ಆರು ತಿಂಗಳಾದ ಮೇಲೆ ಆಕೆಯ ಆರೋಗ್ಯ ಹದಗೆಡತೊಡಗಿತ್ತು. ಆಗ ಆರೋಪಿಗೆ ವೈದ್ಯಕೀಯ ಪರೀಕ್ಷೆ ಮಾಡಿಸಿದ್ದೆವು.

ಈ ವೇಳೆ ಅವಳಿಗೆ ಎಚ್ಐವಿ ಸೋಂಕು ತಗುಲಿರುವುದು ಕಂಡು ಬಂದಿತ್ತು. ಇದಾದ ಬಳಿಕ ಅವಳ ಪತಿಯನ್ನೂ ಸಹ ತಪಾಸಣೆಗೊಳಪಡಿಸಿದ್ದು, ಅವನಿಗೂ ಹೆಚ್ಐವಿ ಸೋಂಕು ತಗುಲಿದ್ದು, ದಂಪತಿ ಇಬ್ಬರಿಗೂ ಹೆಚ್ಐವಿ ಇರುವುದು ಧೃಡವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

Animal Attack: MPಯ ಬರ್ವಾನಿಯಲ್ಲಿ 6ಮಂದಿ ಸಾವು, ಹಲವರಿಗೆ ಗಾಯ

Pakistan: ಗನ್‌ ಜತೆ 200 ಕೈದಿಗಳು ಪರಾರಿ, ಜೈಲಿನಲ್ಲೇ ಹೀಗಾದ್ರೇ ಇನ್ನೇನ್ ಕತೆ

RCB Victory Parade: ಕಾಲ್ತುಳಿತದಲ್ಲಿ ಮೂವರು ಫ್ಯಾನ್ಸ್ ಸಾವು, ಹಲವು ಮಂದಿಗೆ ಗಾಯ

ಮುಂದಿನ ಸುದ್ದಿ