ರಾಜ್ಯಸಭೆಗೆ ಆಯ್ಕೆಯಾದ ಸುಧಾಮೂರ್ತಿ: ಪ್ರಧಾನಿ ಮೋದಿ ಅಭಿನಂದನೆ

Krishnaveni K
ಶುಕ್ರವಾರ, 8 ಮಾರ್ಚ್ 2024 (14:05 IST)
Photo Courtesy: Twitter
ನವದೆಹಲಿ: ಮಹಿಳಾ ದಿನಾಚರಣೆಯಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಇನ್ ಫೋಸಿಸ್ ಸಹ ಸಂಸ್ಥಾಪಕಿ, ಸಮಾಜ ಸೇವಕಿ, ಬರಹಗಾರ್ತಿ ಸುಧಾಮೂರ್ತಿಯವರನ್ನು ರಾಜ್ಯಸಭೆಗೆ ಆಯ್ಕೆ ಮಾಡಿರುವುದಾಗಿ ಘೋಷಿಸಿದ್ದಾರೆ.

ನಮ್ಮ ರಾಜ್ಯದ ಹೆಮ್ಮೆ ಸುಧಾಮೂರ್ತಿಯವರ ಆಯ್ಕೆಗೆ ಸಾಕಷ್ಟು ಜನ ಮೆಚ್ಚುಗೆ ಸೂಚಿಸಿದ್ದಾರೆ. ಸಮಾಜದ ಬಗೆಗೆ ಅವರ ಕಾಳಜಿ, ಸೇವೆ, ಸಾಧನೆ ಗಮನಿಸಿ ಈ ಗೌರವ ನೀಡಲಾಗುತ್ತಿದೆ.  ಅವರ ಹೆಸರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಘೋಷಣೆ ಮಾಡಿದ ಬೆನ್ನಲ್ಲೇ ಪ್ರಧಾನಿ ಮೋದಿ ಸೋಷಿಯಲ್ ಮೀಡಿಯಾ ಎಕ್ಸ್ ಪೇಜ್ ಮೂಲಕ ಸಂತಸ ವ್ಯಕ್ತಪಡಿಸಿದ್ದಾರೆ.

ರಾಜ್ಯಸಭೆಗೆ ವಿಶೇಷ ಸಾಧನೆ ಮಾಡಿದವರನ್ನು ಆಯ್ಕೆ ಮಾಡುವ ಅವಕಾಶ ರಾಷ್ಟ್ರಪತಿಗಳಿದೆ. ಈ ಹಿಂದೆ ಸಚಿನ್ ತೆಂಡುಲ್ಕರ್ ಸೇರಿದಂತೆ ಹಲವರನ್ನು ಇದೇ ರೀತಿ ರಾಜ್ಯಸಭೆಗೆ ಗೌರವಯುತವಾಗಿ ಆಯ್ಕೆ ಮಾಡಲಾಗಿತ್ತು. ಇದೀಗ ಸುಧಾಮೂರ್ತಿಯವರಿಗೆ ಸಂಸದರಾಗಿ ಸೇವೆ ಸಲ್ಲಿಸುವ ಅವಕಾಶ ಸಿಕ್ಕಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ‘ಸುಧಾಮೂರ್ತಿಯವರನ್ನು ರಾಜ್ಯಸಭೆಗೆ ಆಯ್ಕೆ ಮಾಡಿರುವ ರಾಷ್ಟ್ರಪತಿಯವರ ಘೋಷಣೆ ನೋಡಿ ನನಗೆ ಅತೀವ ಸಂತಸವಾಗಿದೆ. ಸಮಾಜಸೇವೆ, ಬರವಣಿಗೆ, ಶಿಕ್ಷಣ ಕ್ಷೇತ್ರಕ್ಕೆ ಅವರ ಕೊಡುಗೆ ಅಪಾರ ಮತ್ತು ಸ್ಪೂರ್ತಿದಾಯಕ. ರಾಜ್ಯಸಭೆಯಲ್ಲಿ ಅವರ ಉಪಸ್ಥಿತಿ ನಮ್ಮ ನಾರಿ ಶಕ್ತಿ ಬಲಪಡಿಸುವ ಯೋಜನೆಗೆ ಪೂರಕವಾಗಿದೆ. ಸಂಸದರಾಗಿ ಅವರ ಅವಧಿ ಶುಭವಾಗಿರಲಿ ಎಂದು ಹಾರೈಸುತ್ತೇನೆ’ ಎಂದು ಮೋದಿ ಶುಭಾಶಯ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೊನ್ನಾಳಿ ಪಟ್ಟಣದಲ್ಲಿ ರಸ್ತೆ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ ರೇಣುಕಾಚಾರ್ಯ

ನಾಗರಹಾವಿನಂತಿರುವ ನಕ್ಸಲಿಸಂ ಪದೇ ಪದೇ ಹೆಡೆ ಬಿಚ್ಚಿ ವಿಷ ಕಾರುತ್ತಿರುತ್ತದೆ: ಅಮಿತ್ ಶಾ

ಮನೆಯೊಳಗೆ ಇರುವಂತೆ ಮಾಡಿದ ರಾಷ್ಟ್ರ ರಾಜಧಾನಿ ವಾಯುಮಾಲಿನ್ಯ

ಕೇರಳದಲ್ಲಿ ಮೊದಲ ಬಾರಿಗೆ ಗೆಲುವಿಗೆ ಪ್ರಧಾನಿ ಮೋದಿಗೆ ಖುಷಿಯೋ ಖುಷಿ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ಮುಂದಿನ ಸುದ್ದಿ
Show comments