Webdunia - Bharat's app for daily news and videos

Install App

ನುಂಗಂಬಾಕಂ ರೈಲ್ವೆ ನಿಲ್ದಾಣದಲ್ಲಿ ಹಾಡಹಗಲೇ ಇನ್ಫೋಸಿಸ್ ಮಹಿಳಾ ಉದ್ಯೋಗಿಯ ಹತ್ಯೆ

Webdunia
ಶುಕ್ರವಾರ, 24 ಜೂನ್ 2016 (18:54 IST)
ನಗರದ ನುಂಗಂಬಾಕಂ ರೈಲ್ವೆ ನಿಲ್ದಾಣದಲ್ಲಿ ಕಚೇರಿಗೆ ತೆರಳು ಸಿದ್ದವಾಗಿದ್ದ 23 ವರ್ಷ ವಯಸ್ಸಿನ ಇನ್ಫೋಸಿಸ್ ಮಹಿಳಾ ಉದ್ಯೋಗಿಯನ್ನು ಹಾಡಹಗಲೇ ಚಾಕುವಿನಿಂದ ತಿವಿದು ಹತ್ಯೆ ಮಾಡಿದ ಹೇಯ ಘಟನೆ ವರದಿಯಾಗಿದೆ. 
 
ಮರೈಮಲೈ ನಗರದಲ್ಲಿರುವ ಇನ್ಫೋಸಿಸ್ ಕಂಪೆನಿಯ ಉದ್ಯೋಗಿಯಾದ ಸ್ವಾತಿ, ಇಂದು ಬೆಳಿಗ್ಗೆ ಕಚೇರಿಗೆ ತೆರಳಲು 6.45 ಗಂಟೆಗೆ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ್ದಳು. ರೈಲ್ವೆ ಪ್ಲಾಟ್‌ಫಾರಂ ತಲುಪುತ್ತಿದ್ದಂತೆ ಆಕೆಯ ಮೇಲೆ ಹಲ್ಲೆಯಾಗಿದೆ. ಕತ್ತು ಮತ್ತು ಆಕೆಯ ಬಾಯಿಯ ಮೇಲೆ ಗಂಭೀರವಾದ ಗಾಯಗಳಾಗಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.  
 
ಸ್ವಾತಿ ತಂದೆ  ಕೇಂದ್ರ ಸರಕಾರದ ನಿವೃತ್ತ ಉದ್ಯೋಗಿಯಾಗಿದ್ದು, ಆಕೆಯನ್ನು ಬೆಳಿಗ್ಗೆ 6.45 ಗಂಟೆಗೆ ರೈಲ್ವೆ ನಿಲ್ದಾಣಕ್ಕೆ ಡ್ರಾಪ್ ಮಾಡಿದ್ದರು ಎನ್ನಲಾಗಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಟ್ರಾವೆಲರ್ ಬ್ಯಾಗ್ ಹೊತ್ತಿದ್ದ ವ್ಯಕ್ತಿಯೊಬ್ಬ ಸ್ವಾತಿಯೊಂದಿಗೆ ವಾಗ್ವಾದದಲ್ಲಿ ತೊಡಗಿದ್ದನು. ನಂತರ ತನ್ನ ಬ್ಯಾಗ್‌ನಲ್ಲಿದ್ದ ಹರಿತವಾದ ಚಾಕು ತೆಗೆದು ಆಕೆಗೆ ತಿವಿದಿದ್ದಾನೆ ಎನ್ನಲಾಗಿದೆ. ಆಕೆಯ ಮೊಬೈಲ್ ಕೂಡಾ ಕಾಣೆಯಾಗಿದೆ ಎಂದು ಹೇಳಲಾಗುತ್ತಿದೆ.  
 
ರೈಲ್ವೆ ನಿಲ್ದಾಣದಲ್ಲಿರುವ ಕೆಲ ಮಳಿಗೆಗಳ ಸಿಬ್ಬಂದಿ ಘಟನಾ ಸ್ಥಳಕ್ಕೆ ತಲುಪುವವರೆಗೆ ಸ್ವಾತಿ ರಕ್ತದ ಮಡುವಿನಲ್ಲಿ ಬಿದ್ದಿದ್ದಳು. ಆಕೆಯ ಮೇಲೆ ಹಲ್ಲೆ ನಡೆಸಿದ ಆರೋಪಿ ಪರಾರಿಯಾಗಿದ್ದಾನೆ. ಪ್ರೇಮವೈಫಲ್ಯವೆ ಹತ್ಯೆಗೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಬೀಚ್-ತಾಬರಂ ಮಧ್ಯದ ಪ್ರಮುಖ ರೈಲ್ವೆ ನಿಲ್ದಾಣವಾಗಿರುವ ನುಂಗಂಬಾಕಂ ನಿಲ್ದಾಣದಲ್ಲಿ ಸಿಸಿಟಿವಿ ಇಲ್ಲದಿರುವುದರಿಂದ ಪೊಲೀಸರಿಗೆ ಹತ್ಯೆಗೆ ಸಂಬಂಧಿಸಿದಂತೆ ಯಾವುದೇ ಸುಳಿವು ದೊರೆತಿಲ್ಲ ಎನ್ನಲಾಗಿದೆ.  

 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಆತಂಕ

Mamata Banerjee:ಪಾಕಿಸ್ತಾನ ವಿರುದ್ಧ ವಿಶ್ವಕ್ಕೆ ಮನವರಿಕೆ ಮಾಡಲು ನಮ್ಮ ಸಂಸದರನ್ನು ಕಳಿಸಲ್ಲ ಎಂದ ಮಮತಾ ಬ್ಯಾನರ್ಜಿ

Pakistan: ಉಗ್ರ ಸೈಫುಲ್ಲಾ ಮೃತದೇಹಕ್ಕೆ ರಾಷ್ಟ್ರಧ್ವಜ: ಪಾಕಿಸ್ತಾನದ ನಾಟಕ ಬಯಲು

India Pakistan: ಭಾರತದ ವಿರುದ್ಧ ಸೋತು ಸುಣ್ಣವಾದ ಬಳಿಕ ಚೀನಾ ಬಳಿ ಓಡಿದ ಪಾಕಿಸ್ತಾನ

ಮುಂದಿನ ಸುದ್ದಿ
Show comments