Webdunia - Bharat's app for daily news and videos

Install App

ದೃಶ್ಯಂ ಸಿನಿಮಾ ಪ್ರೇರಣೆಯಿಂದ ಈ ವ್ಯಕ್ತಿ ಮಾಡಿದ್ದೇನು ಗೊತ್ತಾ?!

Webdunia
ಮಂಗಳವಾರ, 6 ಜುಲೈ 2021 (12:44 IST)
ನವದೆಹಲಿ: ದೃಶ್ಯಂ ಸಿನಿಮಾ ಪ್ರೇರಣೆಯಿಂದ ದೆಹಲಿಯಲ್ಲಿ ಕೊಲೆ ಆರೋಪಿಯೊಬ್ಬ ತನ್ನ ನೆರೆಮನೆಯವರ ಮೇಲೆ ಹಲ್ಲೆ ಆರೋಪ ಹೊರಿಸಲು ಮುಂದಾದ ಘಟನೆ ನಡೆದಿದೆ.


ನೆರೆಮನೆಯ ಓಂಬೀರ್ ಎಂಬವರ ತಾಯಿಯನ್ನು ಕೊಲೆ ಮಾಡಿದ್ದ ಆರೋಪಿ ಜೈಲು ಪಾಲಾಗಿದೆ. ಬಳಿಕ ಜಾಮೀನಿನ ಮೇಲೆ ಬಿಡುಗಡೆಗೆಯಾಗಿ ಮನೆಗೆ ಬಂದಿದ್ದ. ಆದರೆ ಹೇಗಾದರೂ ಮಾಡಿ ಈ ಪ್ರಕರಣದಿಂದ ಪಾರಾಗಲು ಓಂಬೀರ್ ಕುಟುಂಬಸ್ಥರ ಬಳಿಕ ಗೋಗೆರೆದು ತನ್ನ ವಿರುದ್ಧ ಸಾಕ್ಷಿ ಹೇಳದಂತೆ ಮನವಿ ಮಾಡಿದ್ದ. ಆದರೆ ಅವರು ಒಪ್ಪಿರಲಿಲ್ಲ.

ಹೀಗಾಗಿ ತನ್ನ ಬಾವ, ಸ್ನೇಹಿತರೊಂದಿಗೆ ಸೇರಿಕೊಂಡು ದೃಶ್ಯಂ ಸಿನಿಮಾದಲ್ಲಿರುವಂತೇ ಓಂಬೀರ್ ಕುಟುಂಬಸ್ಥರು ದಾಳಿ ನಡೆಸಿದಂತೆ ಸನ್ನಿವೇಶ ಸೃಷ್ಟಿಸಲು ಮುಂದಾದ. ಇದಕ್ಕಾಗಿ ನೆರೆಹೊರೆಯವರಲ್ಲಿ ಓಂಬೀರ್ ಮನೆಯವರು ನನ್ನ ಮೇಲೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಪುಕಾರು ಹಬ್ಬಿಸಿದ್ದ.

ಬಳಿಕ ಕಂಟ್ರಿಮೇಡ್ ಪಿಸ್ತೂಲ್ ತಂದಿಟ್ಟುಕೊಂಡಿದ್ದ. ತನ್ನ ಮೇಲೆ ಗುಂಡು ಹಾರಿದರೂ ಹೆಚ್ಚು ಗಾಯವಾಗದಂತೆ ವ್ಯವಸ್ಥೆ ಮಾಡಿ ಬಾವನ ಕೈಯಲ್ಲಿ ಶೂಟ್ ಮಾಡಿಸಿಕೊಂಡು ಸ್ನೇಹಿತರ ಮನೆಗೆ ಹೋಗಿ ಓಂಬೀರ್ ಕುಟುಂಬಸ್ಥರು ತನ್ನ ಮೇಲೆ ದಾಳಿ ಮಾಡಿದ್ದಾರೆಂದು ಆರೋಪಿಸಿದ್ದ. ಈ ಬಗ್ಗೆ ಪೊಲೀಸರಿಗೂ ದೂರು ನೀಡಲಾಗಿತ್ತು. ಆತನ ಜೊತೆ ಈ ‘ನಾಟಕ’ದಲ್ಲಿ ಭಾಗಿಯಾದ ಸಂಗಡಿಗರನ್ನು ವಿಚಾರಿಸಿದಾಗ ಪೊಲೀಸರಿಗೆ ಈ ಎಲ್ಲಾ ಸತ್ಯ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಪೊಲೀಸರು ಸೆಲೆಬ್ರೇಷನ್ ಬೇಡ ಎಂದಿದ್ರೂ ಹಠ ಹಿಡಿದವರು ಇವರೇ

Chinnaswamy stampede: ಅಣ್ಣಾವ್ರು ತೀರಿಕೊಂಡಾಗಲೂ ಹೀಗೇ ಆಗಿತ್ತು

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

ಮುಂದಿನ ಸುದ್ದಿ
Show comments