Webdunia - Bharat's app for daily news and videos

Install App

ಸರ್ಜಿಕಲ್ ಸ್ಟ್ರೈಕ್ ಗೆ ಪ್ರೇರಣೆ ಏನು ಗೊತ್ತಾ..?: ಮಾಜಿ ರಕ್ಷಣಾ ಸಚಿವರು ಹೇಳಿದ್ದೇನು..?

Webdunia
ಶನಿವಾರ, 1 ಜುಲೈ 2017 (17:52 IST)
ಪಣಜಿ:ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆ ನಡೆಸಿದ ಸರ್ಜಿಕಲ್ ಸ್ಟ್ರೈಕ್ ಗೆ ಸುದ್ದಿವಾಹಿನಿಯ ಆ್ಯಂಕರ್ ಒಬ್ಬರು ಕೇಳಿದ್ದ ಪ್ರಶ್ನೆ ಕಾರಣ ಎಂದು ಮಾಜಿ ರಕ್ಷಣಾ ಸಚಿವ, ಗೋವಾ ಸಿಎಂ ಮನೋಹರ್ ಪರಿಕ್ಕರ್ ಅವರು ತಿಳಿಸಿದ್ದಾರೆ.
 
ಪಣಜಿಯಲ್ಲಿ ನಡೆದ ಉದ್ಯಮಿಗಳ ಸಭೆಯಲ್ಲಿ ಮಾತನಾಡಿದ ಪರಿಕ್ಕರ್, ಸರ್ಜಿಕಲ್ ದಾಳಿಗೆ ಪ್ರೇರಣೆಯಾದ ಅಂಶವನ್ನು ಬಹಿರಂಗಗೊಳಿಸಿದ್ದಾರೆ. 2015ರಲ್ಲಿ ಮ್ಯಾನ್ಮಾರ್ ಗಡಿಯೊಳಗೆ ನುಗ್ಗಿ ಭಾರತೀಯ ಸೇನೆ ನಡೆಸಿದ ನಿರ್ದಿಷ್ಟ ದಾಳಿ ಬಗ್ಗೆ ರಾಜ್ಯವರ್ಧನ್ ಸಿಂಗ್ ರಾಥೋಡ್ ಅವರು ಟಿವಿ ಆ್ಯಂಕರ್ ಗೆ ಮಾಹಿತಿ ನೀಡುತ್ತಿದ್ದ ವೇಳೆ, ಮ್ಯಾನ್ಮಾರ್ ಗಡಿಯೊಳಗೆ ತೋರಿದ ಧೈರ್ಯ ನೆರೆಯ ದೇಶದ ಮೇಲೆ ತೋರಲು ಏಕೆ ಸಾಧ್ಯವಾಗುತ್ತಿಲ್ಲ ಎಂದು ಪ್ರಶ್ನೆ ಮಾಡಿ ಅವಮಾನಿಸಿದ್ದರಂತೆ. ಆ್ಯಂಕರ್ ಆ ಪ್ರಶ್ನೆ ಕೇಳಿದ್ದ ದಿನವೇ ಪಿಒಕೆ ಮೇಲೆ ಸರ್ಜಿಕಲ್ ದಾಳಿ ನಡೆಸಲು ನಿರ್ಧರಿಸಿದ್ದೆ ಎಂದು ಪರ್ರೀಕರ್ ಹೇಳಿದ್ದಾರೆ.
 
2016ರ ಸೆಪ್ಟೆಂಬರ್ 29ರಂದು ಪಿಒಕೆಯಲ್ಲಿ ನಡೆಸಿದ ನಿರ್ದಿಷ್ಟ ದಾಳಿಗೆ ಆಗಲೇ ಪ್ರೇರಣೆ ದೊರೆತಿತ್ತು. ನಿರ್ದಿಷ್ಟ ದಾಳಿಗೆ 15 ತಿಂಗಳು ಮೊದಲೇ ಯೋಜನೆ ರೂ‍ಪಿಸಲಾಗಿತ್ತು ಎಂದು ಪರಿಕ್ಕರ್ ಹೇಳಿದ್ದಾರೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments