ಕೃಷಿ ಕಾಯ್ದೆಗಳ ವಿರುದ್ಧ ಟೀಕೆ "ಬೌದ್ಧಿಕ ಅಪ್ರಾಮಾಣಿಕತೆ": ಮೋದಿ ವಾಗ್ದಾಳಿ

Webdunia
ಶನಿವಾರ, 2 ಅಕ್ಟೋಬರ್ 2021 (15:20 IST)
ನವದೆಹಲಿ : ಪ್ರತಿಪಕ್ಷಗಳು ತಮ್ಮ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ಟೀಕಿಸುತ್ತಿರುವುದು "ಬೌದ್ಧಿಕ ಅಪ್ರಾಮಾಣಿಕತೆ" ಮತ್ತು "ರಾಜಕೀಯ ವಂಚನೆ" ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ವಾಗ್ದಾಳಿ ನಡೆಸಿದ್ದಾರೆ.

ದಶಕಗಳ ಹಿಂದೆಯೇ ದೇಶದ ಜನರಿಗೆ ಸಿಗಬೇಕಾಗಿದ್ದ ಸೌಲಭ್ಯಗಳನ್ನು ಕಲ್ಪಿಸಲು ಕಠಿಣ ಮತ್ತು ದೊಡ್ಡ ನಿರ್ಧಾರಗಳನ್ನು ತೆಗೆದುಕೊಳ್ಳುವ ಅಗತ್ಯವಿದೆ ಎಂದು ಪ್ರಧಾನಿ ಹೇಳಿದ್ದಾರೆ.
ಕೃಷಿ ಕಾನೂನುಗಳನ್ನು ದೃಢವಾಗಿ ಸಮರ್ಥಿಸಿಕೊಂಡ ಪ್ರಧಾನಿ ಮೋದಿ, ಒಂದು ರಾಜಕೀಯ ಪಕ್ಷವು ತಾನು ನೀಡಿದ್ದ ಭರವಸೆ ಈಡೇರಿಸಲು ಸಾಧ್ಯವಾಗದಿದ್ದರೆ ಅದು ವಂಚನೆಯಾಗಲಿದೆ. ಆದರೆ "ನಿರ್ದಿಷ್ಟವಾಗಿ ಅನಪೇಕ್ಷಿತ" ಮತ್ತು "ಅಸಹ್ಯಕರ" ಲಕ್ಷಣವೆಂದರೆ ಕೆಲ ಪಕ್ಷಗಳು ಕೃಷಿ ಸುಧಾರಣೆ ಕುರಿತು ಭರವಸೆ ನೀಡಿದ್ದವು. ನಮ್ಮ ಸರ್ಕಾರ ಆ ಸುಧಾರಣೆಗಳನ್ನು ಜಾರಿಗೊಳಿಸಿದರೆ ಆ ಪಕ್ಷಗಳು ಈಗ ಯು-ಟರ್ ಹೊಡೆದು ಜನರಲ್ಲಿ ತಪ್ಪು ತಿಳಿವಳಿಕೆ ಮೂಡಿಸುತ್ತಿವೆ ಎಂದು ಹೇಳಿದರು.
ಒಪನ್ ನಿಯತಕಾಲಿಕೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಪ್ರಧಾನಿ, "ಭಾರತದ ಜನರು ಕೆಲವು ಸೌಲಭ್ಯಗಳನ್ನು ಪಡೆಯಲು ಅರ್ಹರಾಗಿದ್ದಾರೆ. ಈ ಸೌಲಭ್ಯಗಳು ದಶಕಗಳ ಹಿಂದೆಯೇ ಅವರಿಗೆ ಸಿಗಬೇಕಿತ್ತು. ಆದರೆ ಇನ್ನೂ ಸಿಕ್ಕಲ್ಲ. ಅದಕ್ಕಾಗಿ ಇನ್ನೂ ಕಾಯುವಂತಹ ಪರಿಸ್ಥಿತಿ ಬೇಡ. ಈಗ ನಾವು ಆ ಸೌಲಭ್ಯಗಳನ್ನು ತಲುಪಿಸಲು ದೊಡ್ಡ ಮತ್ತು ಕಠಿಣ ನಿರ್ಧಾರ ಅಗತ್ಯ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಬಾಂಬ್ ಬೆದರಿಕೆ

ರಾಮೇಶ್ವರಂ ಕೆಫೆಯಲ್ಲಿ ದೋಸೆ ಸವಿದ ಉತ್ತರಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್

ಹೈಕಮಾಂಡ್ ಮುಂದೆ ಡಿಕೆ ಶಿವಕುಮಾರ್ ಇಟ್ಟಿರುವ ನಾಲ್ಕು ಡಿಮ್ಯಾಂಡ್ ಗಳೇನು

ಆಂಧ್ರದಲ್ಲಿ 26 ಮಂದಿಯ ಹತ್ಯೆಗೆ ಕಾರಣವಾಗಿದ್ದ ನಕ್ಸಲ್‌ ಮದ್ವಿ ಹಿದ್ಮಾ ಎನ್‌ಕೌಂಟರ್‌ಗೆರ ಬಲಿ

ತಂದೆಗೆ ಹೊಡೆಯುತ್ತಿದ್ದ ಕಳ್ಳನ ಮನಸ್ಸು ಒಂದೇ ಕ್ಷಣದಲ್ಲಿ ಬದಲಾಯಿಸಿ ಮಗಳು: ಮನಕಲಕುವ ವಿಡಿಯೋ

ಮುಂದಿನ ಸುದ್ದಿ
Show comments