Publish Date: Tue, 01 Aug 2023 (09:46 IST)
Updated Date: Tue, 01 Aug 2023 (09:47 IST)
ಭಿವಾನಿ ಹತ್ಯೆ ಪ್ರಕರಣದ ಆರೋಪಿ ಮೋನು ಮನೇಸರ್ ಎಂಬಾತ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದಕ್ಕಾಗಿಯೇ ಸಮುದಾಯ ಆಕ್ರೋಶ ವ್ಯಕ್ತಪಡಿಸಿ, ಕಲ್ಲುತೂರಾಟಕ್ಕೆ ಮುಂದಾಗಿದೆ ಎನ್ನಲಾಗಿದೆ.
ಮತ್ತೊಂದೆಡೆ ಬಜರಂಗದಳದ ಕಾರ್ಯಕರ್ತರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ವೀಡಿಯೋ ಪೋಸ್ಟ್ ಮಾಡಿದ್ದಕ್ಕೆ ಸಂಬಂಧಿಸಿದಂತೆ ಗಲಭೆ ನಡೆದಿದೆ ಎಂದೂ ಹೇಳಲಾಗುತ್ತಿದೆ.
ಗಲಭೆಯ ವಿಡಿಯೊ ಜಾಲತಾಣಗಳಲ್ಲೂ ಹರಿದಾಡುತ್ತಿದ್ದು ಸಂಘರ್ಷ ಮತ್ತಷ್ಟು ವಿಕೋಪಕ್ಕೆ ಹೋಗುವುದನ್ನು ತಡೆಯಲು ಆಗಸ್ಟ್ 2ರವರೆಗೆ ಹರ್ಯಾಣದ ನಹ್ ಜಿಲ್ಲೆಯಲ್ಲಿ ಅಂಜರ್ತಾಲ ಸೇವೆ ಸ್ಥಗಿತಗೊಳಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.