Publish Date: Fri, 22 Oct 2021 (08:10 IST)
Updated Date: Fri, 22 Oct 2021 (06:12 IST)
ಶ್ರೀನಗರ : ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾಶ್ಮೀರ ಕಣಿವೆಗೆ ಭೇಟಿ ನೀಡುವ ಸಾದ್ಯತೆಯ ಹಿನ್ನೆಲೆಯಲ್ಲಿ ಪೊಲೀಸರು ಹೆಚ್ಚಿನ ಸಂಖ್ಯೆಯ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡರೆ, ಕಾಶ್ಮೀರದ ಕೆಲವು ಪ್ರದೇಶಗಳಲ್ಲಿ ಅಧಿಕಾರಿಗಳು ಅಂತರ್ಜಾಲವನ್ನು ಸ್ಥಗಿತಗೊಳಿಸಿದ್ದಾರೆ.
ಶನಿವಾರ ಶ್ರೀನಗರದಿಂದ ಶಾರ್ಜಾಗೆ ಮೊದಲ ಅಂತಾರಾಷ್ಟ್ರೀಯ ವಿಮಾನ ಹೊರಡುವಾಗ ಶಾ ಶನಿವಾರ ಕಾಶ್ಮೀರಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ.
ಆದಾಗ್ಯೂ, ಕೆಲವು ಟವರ್ ಗಳ ಅಂತರ್ಜಾಲವನ್ನು ಸ್ಥಗಿತಗೊಳಿಸುವುದು ಮತ್ತು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳುವುದಕ್ಕೂ ಶಾ ಅವರ ಭೇಟಿಗೆ ಯಾವುದೇ ಸಂಬಂಧವಿಲ್ಲ. ಆದರೆ ಇದು ಸಾಮಾನ್ಯ ಭಯೋತ್ಪಾದನಾ ವಿರೋಧಿ ಕ್ರಮಗಳ ಭಾಗವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದರು.