Webdunia - Bharat's app for daily news and videos

Install App

ಗೋರಖ್ ಪುರದಲ್ಲಿ ಮಕ್ಕಳ ಸಾವು: ಸ್ಪೋಟಕ ಮಾಹಿತಿ ಬಿಚ್ಚಿಟ್ಟ ತನಿಖಾ ತಂಡ

Webdunia
ಗುರುವಾರ, 17 ಆಗಸ್ಟ್ 2017 (11:18 IST)
ಉತ್ತರ ಪ್ರದೇಶದ ಗೋರಖ್ ಪುರದ ಬಿಆರ್`ಡಿ ಮೆಡಿಕಲ್ ಕಾಲೇಜಿನಲ್ಲಿ 60 ಮಕ್ಕಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ಸಮಿತಿ ಸ್ಫೋಟಕ ಮಾಹಿತಿಯನ್ನ ಪತ್ತೆ ಹಚ್ಚಿದ್ದಾರೆ.
 

ಮಕ್ಕಳ ಸಾವಿನ ಹಿಂದೆ ಆಸ್ಪತ್ರೆಯ ಹಣಕಾಸು ಅವ್ಯವಹಾರದ ಕರ್ಮಕಾಂಡ ಇರುವುದು ಬೆಳಕಿಗೆ ಬಂದಿದೆ. ಆಕ್ಸಿಜನ್ ಕೊರತೆಯಿಂದಲೇ ಮಕ್ಕಳು ಮೃತಪಟ್ಟಿದ್ದು, ಆಕ್ಸಿಜನ್ ಸರಬರಾಜುದಾರರಿಗೆ ಪೇಮೆಂಟ್ ತಡವಾಗಿರುವುದು ಆಕ್ಸಿಜನ್ ಕೊರತೆಗೆ ಕಾರಣ ಎಂದು ತಿಳಿದು ಬಂದಿದೆ.

ನ್ಯೂಸ್-18 ವರದಿ ಮಾಡಿರುವ ಪ್ರಕಾರ ಘಟನೆಗೆ ಸಂಬಂಧಿಸಿದಂತೆ ತನಿಖಾ ತಂಡ 8 ವೈಫಲ್ಯಗಳನ್ನ ಎತ್ತಿ ತೋರಿಸಿದೆ. ಆಕ್ಸಿಜನ್ ಸರಬರಾಜುದಾರರಿಗೆ ನೀಡಬೇಕಾದ ಪೇಮೆಂಟ್ ಆಗಸ್ಟ್ 5ರಂದೆ ಆಸ್ಪತ್ರೆ ಖಾತೆಗೆ ಕ್ರೆಡಿಟ್ ಆಗಿದೆ. ಆಸ್ಪತ್ರೆಯ ಸಿಬ್ಬಂದಿ ಹಣದ ವರ್ಗಾವಣೆಯನ್ನ ತಡೆದಿದ್ದಾರೆ. ಇದರಲ್ಲಿ 6 ಉದ್ಯೋಗಿಗಳ ಕೈವಾಡವಿದ್ದು, ಭ್ರಷ್ಟಾಚಾರದ ಸುಳಿವು ಸಿಕ್ಕಿದೆ. ಪದೇ ಪದೇ ಕೇಳಿದಾಗಲೂ ಹಣ ಬಿಡುಗಡೆ ಆಗಿಲ್ಲ.

ತನಿಖಾ ತಂಡ ನೀಡಿದ ವರದಿಯನ್ನ ಮುಖ್ಯ ವೈದ್ಯಾಧಿಕಾರಿಗಳು ಅಂಗಿಕರಿಸಿದ್ದು, ಸರ್ಕಾರಕ್ಕೆ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ. ಆಗಸ್ಟ್ 7ರಂದು ಸರ್ಕಾರಿ ಸ್ವಾಮ್ಯದ ಬಿಆರ್`ಡಿ ಮೆಡಿಕಲ್ ಕಾಲೇಜು ಆಸ್ಪತ್ರೆಯ ಎನ್ಐಸಿಯುನಲ್ಲಿ 60 ಮಕ್ಕಳು ಆಕ್ಸಿಜನ್ ಕೊರತೆಯಿಂದ ಸಾವಿಗೀಡಾಗಿದ್ದರು. ಬಳಿಕ ಸಿಎಂ ಯೋಗಿ ಆದಿತ್ಯಾನಾಥ್ ತನಿಖೆಗೆ ಆದೇಶಿಸಿದ್ದರು.

ಇದನ್ನೂ ಒದಿ.. ಬೌನ್ಸರ್ ತಲೆಗೆ ಬಡಿದು ಕ್ರಿಕೆಟಿಗ ಸ್ಥಳದಲ್ಲೇ ಸಾವು..!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments